ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯವಾದ ದೇಶ ಮತ್ತೊಂದಿಲ್ಲ ; ಭಾರತಕ್ಕೆ ಮುಂದಿನ ವರ್ಷ ಟ್ರಂಪ್‌ ಭೇಟಿ ಸಾಧ್ಯತೆ : ಅಮೆರಿಕ ರಾಯಭಾರಿ

ನವದೆಹಲಿ: “ಅಮೆರಿಕದ ಪಾಲಿಗೆ ಭಾರತಕ್ಕಿಂತ ಅತ್ಯಗತ್ಯವಾದ ದೇಶ ಮತ್ತೊಂದಿಲ್ಲ,” ಎಂದು ಭಾರತಕ್ಕೆ ಅಮೆರಿಕದ ನಿಯೋಜಿತ ರಾಯಭಾರಿಯಾಗಿರುವ ಸೆರ್ಗಿಯೋ ಗೋರ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ಮುಂದಿನ ಹಂತದ ವ್ಯಾಪಾರ ಒಪ್ಪಂದದ ಮಾತುಕತೆಗಳು ಮಂಗಳವಾರದಿಂದ (ಜನವರಿ 13) ಪುನರಾರಂಭಗೊಳ್ಳಲಿವೆ ಎಂದು ಅವರು ಪ್ರಕಟಿಸಿದ್ದಾರೆ. ಅಮೆರಿಕದ ರಾಯಭಾರ ಕಚೇರಿಯಲ್ಲಿ ಮಾತನಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ … Continued

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಡ್ರೋನ್‌ಗಳ ಮೇಲೆ ಸೇನೆಯಿಂದ ಗುಂಡಿನ ದಾಳಿ

ಶ್ರೀನಗರ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯ (LoC) ಬಳಿ ಭಾನುವಾರ ಸಂಜೆ ಭಾರತೀಯ ಸೇನೆಯು ಪಾಕಿಸ್ತಾನಿ ಡ್ರೋನ್‌ ಒಂದರ ಮೇಲೆ ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಇನ್ನೂ ಹಲವಾರು ಡ್ರೋನ್‌ಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಕತ್ತಲ ಆಕಾಶದಲ್ಲಿ ಹಾರುತ್ತಿದ್ದ ಡ್ರೋನ್‌ ಅನ್ನು ಹೊಡೆದುರುಳಿಸಲು ಸೇನೆಯು … Continued

ರಸ್ತೆ ಅಪಘಾತ ಕಡಿಮೆ ಮಾಡಲು ಭಾರತದಲ್ಲಿ ವೆಹಿಕಲ್-ಟು-ವೆಹಿಕಲ್’ (V2V) ತಂತ್ರಜ್ಞಾನ ಅಳವಡಿಕೆಗೆ ಸಿದ್ಧತೆ ; ಏನಿದು ತಂತ್ರಜ್ಞಾನ..?

ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಅತ್ಯಾಧುನಿಕ ‘ವೆಹಿಕಲ್-ಟು-ವೆಹಿಕಲ್’ (V2V) ಸಂವಹನ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಯೋಜನೆಯು 2026ರ   ಕೊನೆಯಲ್ಲಿ ಜಾರಿಗೆ ಬರುವ ನಿರೀಕ್ಷೆಯಿದೆ. ಏನಿದು V2V ತಂತ್ರಜ್ಞಾನ? ಇದು ವಾಹನಗಳು ಪರಸ್ಪರ ನೇರವಾಗಿ ಸಂವಹನ ನಡೆಸಲು ಅನುವು ಮಾಡಿಕೊಡುವ ತಂತ್ರಜ್ಞಾನವಾಗಿದೆ. … Continued

ರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ. 500ರಷ್ಟು ಸುಂಕ ಹೇರುವ ಮಸೂದೆಗೆ ಟ್ರಂಪ್ ಸಮ್ಮತಿ…!

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ಮುಂದುವರಿಸುತ್ತಿರುವ ಭಾರತ ಸೇರಿದಂತೆ ಪ್ರಮುಖ ರಾಷ್ಟ್ರಗಳ ಮೇಲೆ ಸುಂಕದ ಕ್ರಮಕ್ಕೆ ಅಮೆರಿಕ ಮತ್ತೆ ಮುಂದಾಗಿದೆ. ರಷ್ಯಾದ ಮೇಲೆ ಕಠಿಣ ಆರ್ಥಿಕ ದಿಗ್ಬಂಧನ ವಿಧಿಸುವ ದ್ವಿಪಕ್ಷೀಯ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸಿರು ನಿಶಾನೆ ತೋರಿಸಿದ್ದಾರೆ ಎಂದು ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ತಿಳಿಸಿದ್ದಾರೆ. ಈ ಮಸೂದೆಯು ಕಾನೂನಾಗಿ ಜಾರಿಗೆ … Continued

ಅಮೆರಿಕ ಸುಂಕದ ಮಧ್ಯೆಯೂ ಭಾರತದ ಆರ್ಥಿಕತೆಗೆ ಬೂಸ್ಟ್: 2025-26ರಲ್ಲಿ 7.4%ರಷ್ಟು ಜಿಡಿಪಿ ಪ್ರಗತಿ ಅಂದಾಜು

ನವದೆಹಲಿ: ಜಾಗತಿಕ ಸವಾಲುಗಳು ಮತ್ತು ಅಮೆರಿಕದ ಸುಂಕದ ಸಮರದ (Tariff War) ನಡುವೆಯೂ ಭಾರತದ ಆರ್ಥಿಕತೆಯು ಸದೃಢವಾಗಿ ಬೆಳೆಯುತ್ತಿದೆ. ಜನವರಿ 7 ರಂದು ಸರ್ಕಾರ ಬಿಡುಗಡೆ ಮಾಡಿದ ಮೊದಲ ಮುಂಗಡ ಅಂದಾಜಿನ ಪ್ರಕಾರ, 2025-26ರ ಹಣಕಾಸು ವರ್ಷದಲ್ಲಿ ಭಾರತದ ನೈಜ ಒಟ್ಟು ದೇಶೀಯ ಉತ್ಪನ್ನ (GDP) ಶೇ. 7.4 ರಷ್ಟು ಪ್ರಗತಿ ಸಾಧಿಸುವ ನಿರೀಕ್ಷೆಯಿದೆ. ಇದು … Continued

ಪಾಕ್ ಅಪಪ್ರಚಾರ ಬಯಲಿಗೆ : ಆಪರೇಶನ್‌ ಸಿಂಧೂರ ವೇಳೆ ಸಹಾಯಕ್ಕಾಗಿ ಅಮೆರಿಕದ ಬಳಿ ಓಡಿ ಹೋಗಿದ್ದ ಪಾಕಿಸ್ತಾನ…!

ನವದೆಹಲಿ: ಭಾರತೀಯ ವಾಯುಪಡೆ ನಡೆಸಿದ ‘ಆಪರೇಷನ್ ಸಿಂಧೂರ’ ದಾಳಿಯ ವೇಳೆ ಪಾಕಿಸ್ತಾನವು ಅಮೆರಿಕದ ಸಹಾಯಕ್ಕಾಗಿ ಅಂಗಲಾಚಿತ್ತು ಎಂಬ ಆಘಾತಕಾರಿ ವಿಷಯ ಈಗ ಬಹಿರಂಗವಾಗಿದೆ. ಅಮೆರಿಕ ಸರ್ಕಾರದ ಫಾರಾ (FARA) ಕಾಯ್ದೆಯಡಿ ಸಲ್ಲಿಕೆಯಾದ ದಾಖಲೆಗಳು ಪಾಕಿಸ್ತಾನದ ಸುಳ್ಳು ಮತ್ತು ಅಪಪ್ರಚಾರವನ್ನು ಜಗತ್ತಿನ ಮುಂದೆ ತೆರೆದಿಟ್ಟಿವೆ. ಭಾರತದ ವಾಯುದಾಳಿಯಿಂದ ಕಂಗೆಟ್ಟಿದ್ದ ಪಾಕಿಸ್ತಾನವು, ತನ್ನ ವಾಯುನೆಲೆಗಳು ಮತ್ತು ಉಗ್ರರ ಶಿಬಿರಗಳನ್ನು … Continued

ಭಾರತದ ಆಪರೇಷನ್ ಸಿಂಧೂರ ನಿಲ್ಲಿಸುವಂತೆ ಅಮೆರಿಕದ ಕೈಕಾಲು ಹಿಡಿದ ಪಾಕಿಸ್ತಾನ : ಅಮೆರಿಕ ಉನ್ನತಾಧಿಕಾರಿಗಳ ಜೊತೆ 60ಕ್ಕೂ ಹೆಚ್ಚು ಸಭೆ…!

ವಾಷಿಂಗ್ಟನ್/ನವದೆಹಲಿ: 2025ರ ಮೇ ತಿಂಗಳಲ್ಲಿ ನಡೆದ ‘ಆಪರೇಷನ್ ಸಿಂಧೂರ’ (Operation Sindoor) ವೇಳೆ ಭಾರತೀಯ ಸೇನೆಯು ನಡೆಸಿದ ಭೀಕರ ದಾಳಿಯಿಂದ ಕಂಗೆಟ್ಟಿದ್ದ ಪಾಕಿಸ್ತಾನ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ತಡೆಯಲು ಅಮೆರಿಕಾದಲ್ಲಿ ದೊಡ್ಡ ಮಟ್ಟದ ರಾಜತಾಂತ್ರಿಕ ಲಾಬಿ ರೂಪಿಸಿತ್ತು ಎಂಬ ವಿಷಯ ಈಗ ಹೊರಬಿದ್ದಿದೆ. ಅಮೆರಿಕಾ ಸರ್ಕಾರದ ಇತ್ತೀಚಿನ ದಾಖಲೆಗಳ ಪ್ರಕಾರ, ಭಾರತದ ಸೈನಿಕ ಕಾರ್ಯಾಚರಣೆಯನ್ನು ಹೇಗಾದರೂ … Continued

ಸಂಪೂರ್ಣ ಜಮ್ಮು-ಕಾಶ್ಮೀರ ಭಾರತದೊಂದಿಗೆ ಮರುಸೇರ್ಪಡೆಯಾಗಲಿ’: ಬ್ರಿಟಿಷ್ ಸಂಸದ

ಜೈಪುರ: ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಭಾರತದ ನಿಲುವಿಗೆ ತಮ್ಮ ದೀರ್ಘಕಾಲದ ಬೆಂಬಲವನ್ನು ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್‌ಮನ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದ ಪ್ರದೇಶವು ಭಾರತದೊಂದಿಗೆ ಮರುಸೇರ್ಪಡೆಯಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. 370ನೇ ವಿಧಿಯನ್ನು ರದ್ದುಗೊಳಿಸಬೇಕೆಂಬ ತಮ್ಮ ಆಗ್ರಹವು ಮೂರು ದಶಕಗಳಷ್ಟು ಹಳೆಯದಾಗಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ … Continued

ಐಪಿಎಲ್‌ ನಿಂದ ಮುಸ್ತಫಿಜುರ್ ರೆಹಮಾನ್ ಕೈಬಿಟ್ಟ ನಂತ್ರ ಐಪಿಎಲ್ ಪ್ರಸಾರ ನಿಷೇಧಿಸಿದ ಬಾಂಗ್ಲಾದೇಶ ಸರ್ಕಾರ

ಢಾಕಾ: ಕ್ರಿಕೆಟ್ ಜಗತ್ತಿನ ಬೆಳವಣಿಗೆಯೊಂದರಲ್ಲಿ, ಬಾಂಗ್ಲಾದೇಶ ಸರ್ಕಾರವು ತನ್ನ ದೇಶದಾದ್ಯಂತ ಇಂಡಿಯನ್ ಪ್ರೀಮಿಯರ್ ಲೀಗ್ (IPL) ನೇರ ಪ್ರಸಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. 2026ರ ಐಪಿಎಲ್ ಆವೃತ್ತಿಗೂ ಮುನ್ನ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದಿಂದ ಬಾಂಗ್ಲಾದೇಶದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ಬಿಸಿಸಿಐ ಸೂಚಿಸಿದ ಬೆನ್ನಲ್ಲೇ ಈ ರಾಜತಾಂತ್ರಿಕ ಮತ್ತು … Continued

ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯುವ ತನ್ನ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೊರೆ..?

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ಕ್ರಿಕೆಟ್ ಮೈದಾನಕ್ಕೂ ವ್ಯಾಪಿಸಿದೆ. ಐಪಿಎಲ್ 2026ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡಬೇಕಿದ್ದ ಬಾಂಗ್ಲಾದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಒಪ್ಪಂದದಿಂದ ಮುಕ್ತಗೊಳಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ, ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳ … Continued