ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ 8 ಖಲಿಸ್ತಾನಿ ಭಯೋತ್ಪಾದಕರನ್ನು ಬಂಧಿಸಿದ ಅಮೆರಿಕದ ಎಫ್‌ ಬಿಐ

ಕ್ಯಾಲಿಫೋರ್ನಿಯಾ: ಅಮೆರಿಕದಲ್ಲಿ (United States) ಗ್ಯಾಂಗ್‌ಗೆ ಸಂಬಂಧಿತ ಅಪಹರಣ (Kidnapping) ಮತ್ತು ಚಿತ್ರಹಿಂಸೆ ಪ್ರಕರಣಗಳ ತನಿಖೆಯ ಸಂಬಂಧ ಭಾರತೀಯ ಮೂಲದ (Indian-Origin ) ಎಂಟು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಬಂಧಿತರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ಬೇಕಾಗಿರುವ ಪಂಜಾಬ್‌ನ ಗ್ಯಾಂಗ್‌ಸ್ಟರ್ ಪವಿತ್ತರ್ ಸಿಂಗ್ ಬಟಾಲಾ ಕೂಡ ಸೇರಿದ್ದಾನೆ. ಬಟಾಲಾ ನಿಷೇಧಿತ ಭಯೋತ್ಪಾದಕ ಸಂಘಟನೆ … Continued

“ಭಾರತ ಸಾರೇ ಜಹಾನ್‌ ಸೇ ಅಚ್ಛಾ… : ಬಾಹ್ಯಾಕಾಶ ಕೇಂದ್ರದಿಂದ ಭೂಮಿಗೆ ಮರಳುವ ಮುನ್ನ ಸಂದೇಶ ಹಂಚಿಕೊಂಡ ಶುಭಾಂಶು ಶುಕ್ಲಾ

ನವದೆಹಲಿ: ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್‌)ದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಹಾಗೂ ಇತರ ಮೂವರು ಗಗನಯಾತ್ರಿಗಳು ಭೂಮಿಗೆ ಮರಳಲು ಜುಲೈ 14ಕ್ಕೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ನಿಲ್ದಾಣದಿಂದ ಭಾವುಕ ಸಂದೇಶವೊಂದನ್ನು ಕಳುಹಿಸಿದ್ದಾರೆ. ಅವರು ಭಾರತವನ್ನು ಸಾರೇ ಜಹಾಂ ಸೇ ಅಚ್ಛಾ ಎಂದು … Continued

“ಪಾಕಿಸ್ತಾನ ನಮಗೆ ಹಾನಿ ಮಾಡಿದ ಒಂದೇ ಒಂದು ಫೋಟೋ ತೋರಿಸಿ”: ಅಪರೇಶನ್‌ ಸಿಂದೂರ ವೇಳೆ ವಿದೇಶಿ ಮಧ್ಯಮಗಳ ವರದಿಗಳ ಬಗ್ಗೆ ಅಜಿತ್ ದೋವಲ್

ಚೆನ್ನೈ: ಆಪರೇಷನ್ ಸಿಂಧೂರ ಬಗ್ಗೆ ವರದಿ ಮಾಡಿದ ರೀತಿಗೆ ವಿದೇಶಿ ಮಾಧ್ಯಮಗಳನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಪಾಕಿಸ್ತಾನದ ದಾಳಿಯಿಂದ ಭಾರತದ ಸೇನಾ ಮೂಲಸೌಕರ್ಯಕ್ಕೆ ಆಗಿರುವ ಹಾನಿಗೆ ಒಂದೇ ಒಂದು ಪುರಾವೆ ನೀಡುವಂತೆ ಅವರು ವಿದೇಶಿ ಮಾಧ್ಯಮಗಳಿಗೆ ಸವಾಲು ಹಾಕಿದರು. ಐಐಟಿ ಮದ್ರಾಸ್‌ನ 62 ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅಜಿತ್ … Continued

ಬಾಹ್ಯಾಕಾಶ ರೈತನಾದ ಶುಭಾಂಶು ಶುಕ್ಲಾ ; ಬಾಹ್ಯಾಕಾಶ ನಿಲ್ದಾಣದಲ್ಲಿ ಮೆಂತೆ, ಹೆಸರುಕಾಳು ಗಿಡ ಬೆಳೆಸುತ್ತಿರುವ ಭಾರತದ ಗಗನಯಾತ್ರಿ

ನವದೆಹಲಿ: ತಮ್ಮ ಬಾಹ್ಯಾಕಾಶ ಯಾನದ ಕೊನೆಯ ಹಂತದಲ್ಲಿ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ರೈತನಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ‘ಹೆಸರುಕಾಳು’ ಮತ್ತು ‘ಮೆಂತ್ಯ’ ಬೀಜಗಳ ಮೊಳಕೆಯೊಡೆಯುವಿಕೆಯನ್ನು ಅವರು ದಾಖಲಿಸುತ್ತಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯು ಮೊಳಕೆಯೊಡೆಯುವಿಕೆ ಮತ್ತು ಸಸ್ಯಗಳ ಆರಂಭಿಕ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಉದ್ದೇಶಿಸಿರುವ ಅಧ್ಯಯನದ ಭಾಗವಾಗಿ ಗಗನಯಾತ್ರಿ ಶುಕ್ಲಾ … Continued

ಭಾರತದಲ್ಲಿ ಉಪಗ್ರಹ ಆಧಾರಿತ ಬ್ರಾಡ್‌ ಬ್ಯಾಂಡ್ ಸೇವೆ ನೀಡಲು ಎಲೋನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್‌ ಗೆ ಅನುಮೋದನೆ

ನವದೆಹಲಿ: ಭಾರತದಲ್ಲಿ ಕೈಗೆಟುಕುವ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಯ ಭವಿಷ್ಯವನ್ನು ಬದಲಾಯಿಸಬಹುದಾದ ಅಂಶಗಳಲ್ಲಿ, ಎಲೋನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಬುಧವಾರ ದೇಶದ ಬಾಹ್ಯಾಕಾಶ ನಿಯಂತ್ರಕ, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (IN-SPACe)ದಿಂದ ಅನುಮೋದನೆ ಪಡೆದಿದೆ. ಭಾರತದ ಡಿಜಿಟಲ್ ಸಂಪರ್ಕ ಮಹತ್ವಾಕಾಂಕ್ಷೆಗಳಿಗೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ … Continued

ವೀಡಿಯೊ..| ಬಾಲಕರ ಹುಚ್ಚಾಟ : ರೀಲ್‌ ಸ್ಟಂಟ್‌ ಮಾಡಲು ವೇಗವಾಗಿ ಚಲಿಸುತ್ತಿದ್ದ ರೈಲಿನ ಕೆಳಗೆ ಮಲಗಿದ ಬಾಲಕ : ಮೂವರು ಅಪ್ರಾಪ್ತರ ಬಂಧನ

ಭುವನೇಶ್ವರ: ಸಾಮಾಜಿಕ ಮಾಧ್ಯಮದಲ್ಲಿ ಪ್ರಭಾವಿಗಳಾಗಲು ನಡೆಸುವ ರೀಲ್ ಉನ್ಮಾದವು ಅನೇಕ ಸಂದರ್ಭಗಳಲ್ಲಿ ಅವರ ಜೀವಕ್ಕೇ ಅಪಾಯವನ್ನುಂಟು ಮಾಡುತ್ತಿವೆ. ಇಂಥದ್ದೇ ಅಪಾಯಕಾರಿಯಾದ ರೀಲ್‌ ಮಾಡಲು ಹೋದ ಮೂವರು ಅಪ್ರಾಪ್ತ ಬಾಲಕರನ್ನು ಒಡಿಶಾದ ಬೌಧ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ, ಈ ಸಾಹಸದಲ್ಲಿ ಒಬ್ಬ ಬಾಲಕ ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಅತಿ ವೇಗದಲ್ಲಿ ಆತನ ಮೇಲಿಂದಲೇ ಹಾದುಹೋಗಿದೆ. ಪುರುನಪಾಣಿ … Continued

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ: ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿ ಅಮೆರಿಕದಲ್ಲಿ ಬಂಧನ

ನವದೆಹಲಿ: ದೇಶದಿಂದ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಸಹೋದರ ನೇಹಲ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಸಿಬಿಐ ಮತ್ತು ಇಡಿ ಅಧಿಕಾರಿಗಳು ಈತನನ್ನು ಹಸ್ತಾಂತರಿಸಬೇಕು ಎಂದು ಕೋರಿಕೆ ಸಲ್ಲಿಸಿದ ನಂತರ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿಯ ಕಿರಿಯ ಸಹೋದರ ನೇಹಲ್ ದೀಪಕ್ ಮೋದಿಯನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) … Continued

ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಸೇನೆ ಬಗ್ಗೆ ಪಾಕಿಸ್ತಾನಕ್ಕೆ ಚೀನಾ ಲೈವ್‌ ಮಾಹಿತಿ ನೀಡುತ್ತಿತ್ತು ; ಉನ್ನತ ಸೇನಾ ಜನರಲ್

ನವದೆಹಲಿ: ಆಪರೇಷನ್ ಸಿಂಧೂರ ಸಮಯದಲ್ಲಿ ಪಾಕಿಸ್ತಾನವು ಚೀನಾದಿಂದ ಭಾರತದ ಪ್ರಮುಖ ಯುದ್ಧ ವಾಹಕಗಳ ಬಗ್ಗೆ ಲೈವ್‌ ಮಾಹಿತಿಯನ್ನು ಪಡೆದುಕೊಂಡಿದೆ ಎಂದು ಭಾರತದ ಸೇನೆಯ ಉನ್ನತ ಜನರಲ್ ರಾಹುಲ್ ಆರ್ ಸಿಂಗ್ ಹೇಳಿದ್ದಾರೆ. ಪಾಕಿಸ್ತಾನದ ವಿರುದ್ಧದ ನಾಲ್ಕು ದಿನಗಳ ಆಪರೇಶನ್‌ ಸಿಂಧೂರದ ಸಂಘರ್ಷದ ಸಂದರ್ಭದಲ್ಲಿ ಭಾರತವು ಗಡಿಯಲ್ಲಿ ದಾಳಿಗಳನ್ನು ಹೇಗೆ ಎದುರಿಸಿತು ಎಂಬುದನ್ನು ವಿವರಿಸುತ್ತ ಹೇಳಿದ್ದಾರೆ. ಸೇನಾ … Continued

ವೀಡಿಯೊ…| “ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು”: ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ

ನವದೆಹಲಿ: ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ಸಮಯದಲ್ಲಿ ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯಲ್ಲಿ ಪರಮಾಣು ಸಿಡಿತಲೆ ಇರಬಹುದೇ ಎಂದು ನಿರ್ಧರಿಸಲು ತಮ್ಮ ದೇಶದ ಸೇನೆಗೆ ಕೇವಲ 30 ರಿಂದ 45 ಸೆಕೆಂಡುಗಳ ಸಮಯ ಮಾತ್ರ ಇತ್ತು ಎಂದು ಪಾಕಿಸ್ತಾನದ ಉನ್ನತ ರಾಜಕಾರಣಿಯೊಬ್ಬರು ಒಪ್ಪಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನದ ಜೊತೆ ಸಂಬಂಧ ಹೊಂದಿರುವ ಭಯೋತ್ಪಾದಕರು … Continued

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued