ಪಾಕಿಸ್ತಾನದಿಂದ ಪರಮಾಣು ಬೆದರಿಕೆ ಇಲ್ಲ ; ಅಮೆರಿಕ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿಲ್ಲ : ವಿದೇಶಾಂಗ ಕಾರ್ಯದರ್ಶಿ

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಯಾವಾಗಲೂ ಸಾಂಪ್ರದಾಯಿಕ ಕ್ಷೇತ್ರದಲ್ಲಿದೆ ಮತ್ತು ಪಕ್ಕದ ದೇಶದಿಂದ ಯಾವುದೇ ಪರಮಾಣು ಬೆದರಿಕೆ ಇಲ್ಲ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಸೋಮವಾರ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಪರೇಷನ್​ ಸಿಂಧೂರ ಮತ್ತು ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಉದ್ವಿಗ್ನತೆಯ ಕುರಿತು ಸಂಸದೀಯ … Continued

ವ್ಲಾಗರ್, ವಿದ್ಯಾರ್ಥಿ, ಉದ್ಯಮಿ, ಗಾರ್ಡ್….: 9 ಮಂದಿ ‘ಪಾಕಿಸ್ತಾನ ಗೂಢಚಾರರ’ ಬಂಧನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ಹೆಚ್ಚಿದ ಕಣ್ಗಾವಲು ನಡುವೆಯೂ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೂರು ರಾಜ್ಯಗಳಿಂದ ಕನಿಷ್ಠ ಒಂಬತ್ತು ಜನರನ್ನು ಭಾರತೀಯ ಅಧಿಕಾರಿಗಳು ಬಂಧಿಸಿದ್ದಾರೆ. ಈ ಇವರಲ್ಲಿ ಕನಿಷ್ಠ ನಾಲ್ಕು ಜನರನ್ನು ಹರಿಯಾಣದಲ್ಲಿ, ಮೂವರನ್ನು ಪಂಜಾಬ್‌ನಲ್ಲಿ ಮತ್ತು ಒಬ್ಬನನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಬೇಹುಗಾರಿಕೆ ನಡೆಸುತ್ತಿದ್ದಾರೆಂದು … Continued

ಆಪರೇಷನ್ ಸಿಂಧೂರ | ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ದಾಳಿಗೆ ಯತ್ನಿಸಿದ್ದ ಪಾಕಿಸ್ತಾನ; ದಾಳಿ ವಿಫಲಗೊಳಿಸಿದ ಭಾರತೀಯ ಸೇನೆ

ಅಮೃತಸರ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತೀಕಾರವಾಗಿ ಮೇ 7-8ರ ಮಧ್ಯರಾತ್ರಿ ಪಾಕಿಸ್ತಾನ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಅಮೃತಸರದ ಸ್ವರ್ಣ ಮಂದಿರದ ಮೇಲೆ ದಾಳಿ ಮಾಡಲು ಪ್ರಯತ್ನಿಸಿತ್ತು ಎಂದು 15 ನೇ ಪದಾತಿ ದಳದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ … Continued

‘ಅಜೇಯ ಬೆಂಕಿಯ ಗೋಡೆ’: ಆಪರೇಷನ್ ಸಿಂಧೂರದ ಹೊಸ ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ | ವೀಕ್ಷಿಸಿ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿನ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಹೊಸ ವೀಡಿಯೊವನ್ನು ಭಾರತೀಯ ಸೇನೆ ಭಾನುವಾರ ಹಂಚಿಕೊಂಡಿದೆ. ಸೇನೆಯ ವೆಸ್ಟರ್ನ್ ಕಮಾಂಡ್ ಪೋಸ್ಟ್ ಮಾಡಿದ ವೀಡಿಯೊದಲ್ಲಿ “ಶತ್ರು ಕ್ಷಿಪಣಿಗಳು ತಟಸ್ಥಗೊಳಿಸಲ್ಪಟ್ಟವು…ಭಾರತೀಯ ಸೇನೆ … Continued

ವೀಡಿಯೊ | ಈಗ ಯೂ ಟರ್ನ್‌ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್…!

ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್‌ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. … Continued

‘ಅಂತಾರಾಷ್ಟ್ರೀಯ ಭಯೋತ್ಪಾದಕ ಮಸೂದ್ ಅಜರಗೆ ಪಾಕಿಸ್ತಾನದಿಂದ 14 ಕೋಟಿ ರೂ…’: ಪಾಕ್ ಭಯೋತ್ಪಾದನಾ ಯೋಜನೆಗಳ ಬಗ್ಗೆ ರಾಜನಾಥ ಸಿಂಗ್

ನವದೆಹಲಿ:ಪಾಕಿಸ್ತಾನ ಸರ್ಕಾರವು “ತನ್ನ ನಾಗರಿಕರಿಂದ ಸಂಗ್ರಹಿಸಿದ ತೆರಿಗೆಯನ್ನು ಖರ್ಚು ಮಾಡಿ ಘೋಷಿತ ಭಯೋತ್ಪಾದಕ ಮಸೂದ್ ಅಜರ್‌ಗೆ 14 ಕೋಟಿ ರೂ.ಗಳನ್ನು ನೀಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ ಹಾಗೂ” ಯೋಜನೆಗಳ ಬಗ್ಗೆ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ವಿಶ್ವಸಂಸ್ಥೆಯು ‘ಅಂತರರಾಷ್ಟ್ರೀಯ ಭಯೋತ್ಪಾದಕ’ ಎಂದು ಘೋಷಿಸಿದ ಹಾಗೂ 2019 ರ ಪುಲ್ವಾಮಾ ಮತ್ತು … Continued

ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು…

ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ವಾಯುದಾಳಿಗಳನ್ನು ಒಳಗೊಂಡ ಆಪರೇಷನ್ ಸಿಂಧೂರದ ನಂತರ ವಿವಿಧ ವರದಿಗಳು ಚೀನಾ ಸರಬರಾಜು ಮಾಡಿದ PL-15 ಕ್ಷಿಪಣಿಗಳು ಮತ್ತು ಟರ್ಕಿಶ್ UAV ಗಳ ಬಳಕೆ ಸೇರಿದಂತೆ ಪಾಕಿಸ್ತಾನಕ್ಕೆ ಚೀನಾದ ಮಿಲಿಟರಿ ಬೆಂಬಲದ ವ್ಯಾಪ್ತಿಯನ್ನು ಎತ್ತಿ ತೋರಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ … Continued

ಆಪರೇಷನ್ ಸಿಂಧೂರ | ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್‌ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್‌ ನಿವೃತ್ತ ಏರ್ ಮಾರ್ಷಲ್

ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು … Continued

ಟ್ರಂಪ್ ಒತ್ತಡದ ನಂತರವೂ ‘ಮೇಕ್ ಇನ್ ಇಂಡಿಯಾ’ ಬದ್ಧತೆ ಪುನರುಚ್ಚರಿಸಿದ ಆಪಲ್

ನವದೆಹಲಿ: ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಇತ್ತೀಚಿನ ಹೇಳಿಕೆ ನಂತರವೂ ಭಾರತದಲ್ಲಿ ತನ್ನ ಉತ್ಪಾದನೆ ಮತ್ತು ಹೂಡಿಕೆ ಯೋಜನೆಗಳು ಯಥಾಸ್ಥಿತಿಯಲ್ಲಿ ಇರಲಿವೆ ಎಂದು ಆಪಲ್ ದೃಢಪಡಿಸಿದೆ. ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ಭಾರತದಲ್ಲಿ ಉತ್ಪಾದನೆಯನ್ನು ಕಡಿಮೆ ಮಾಡಿ ಅಮೆರಿಕದಲ್ಲಿ ಹೆಚ್ಚಿಸುವಂತೆ ಒತ್ತಾಯಿಸಿದ ನಂತರ ಇದು ಬಂದಿದೆ. … Continued

‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ

ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ … Continued