ಎಕ್ಸಿಟ್‌ ಪೋಲ್‌ ಗಳ ಭವಿಷ್ಯವಾಣಿ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ ; ಜಾರ್ಖಂಡದಲ್ಲಿ ಎನ್‌ಡಿಎಗೆ ಮುನ್ನಡೆ

ನವದೆಹಲಿ: ಮೂರು ಎಕ್ಸಿಟ್ ಪೋಲ್‌ಗಳ ಭವಿಷ್ಯವಾಣಿಯಂತೆ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ)ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟವಾದ ಮಹಾಯುತಿ ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಜೆಎಂಎಂ-ಕಾಂಗ್ರೆಸ್ ಮೈತ್ರಿಯೊಂದಿಗೆ ನಿಕಟ ಪೈಪೋಟಿ ನಡೆಸಲಿದ್ದು, ಬಿಜೆಪಿಗೆ ಅಧಿಕಾರಕ್ಕೆ ಮರಳಲು ಹೆಚ್ಚೊ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಮೂರು ಎಕ್ಸಿಟ್ ಪೋಲ್‌ಗಳ … Continued

ವೀಡಿಯೊ…| ಪ್ರಧಾನಿ ಮೋದಿ ಮುಂದೆ ಬ್ರೇಜಿಲಿಯನ್ನರಿಂದ ಸಂಸ್ಕೃತ ಭಾಷೆಯ ʼರಾಮಾಯಣ ನೃತ್ಯʼ ರೂಪಕ ಪ್ರದರ್ಶನ…!

ರಿಯೊ ಡಿ ಜನೈರೊ (ಬ್ರೆಜಿಲ್‌) : ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬ್ರೆಜಿಲ್‌ ಪ್ರವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮಂಗಳವಾರ ಬ್ರೆಜಿಲ್‌ನಲ್ಲಿ G20 ಶೃಂಗಸಭೆಯಲ್ಲಿ(G20 Summit) ಭಾಗಿಯಾದ ನಂತರ ಅಲ್ಲಿ ವಿಶೇಷವಾಗಿ ಆಯೋಜನೆಗೊಂಡಿದ್ದ ಬ್ರೇಜಿಲಿಯನ್ನರೇ ಪಾತ್ರ ನಿರ್ವಹಿಸಿದ್ದ ರಾಮಾಯಣದ ನೃತ್ಯ ರೂಪಕವನ್ನು ಪ್ರಧಾನಿ ಮೋದಿ ವೀಕ್ಷಿಸಿದರು. ಈಗ ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ … Continued

ವೀಡಿಯೊ | ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ ಹಡಗನ್ನು 2 ತಾಸುಗಳ ಕಾಲ ಬೆನ್ನಟ್ಟಿ ಭಾರತದ 7 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಹಡಗು

ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ)ಯ ಹಡಗಿನಿಂದ ಬಂಧಿಸಲ್ಪಟ್ಟಿದ್ದ ಏಳು ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ. ನವೆಂಬರ್ 17 ರ ಭಾನುವಾರ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನ ಮೀನುಗಾರಿಕೆ ರಹಿತ ವಲಯ (ಎನ್‌ಎಫ್‌ಜೆಡ್) ಬಳಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿ (ಐಎಫ್‌ಬಿ)ಯಿಂದ ಕಳುಹಿಸಲಾದ ತೊಂದರೆಯಲ್ಲಿದ್ದೇವೆ ಎಂಬ … Continued

ಭಾರತದ ತಂಡ ಪಾಕಿಸ್ತಾನಕ್ಕೆ ಹೋಗದಿದ್ದರೆ ಅದು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದಕ್ಕೆ ಸರಿಯಬಹುದು ; ವರದಿ

ಪಾಕಿಸ್ತಾನದ ಪತ್ರಿಕೆ ಡಾನ್ ವರದಿ ಪ್ರಕಾರ, 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಪಾಕಿಸ್ತಾನ ಹಿಂದಕ್ಕೆ ಸರಿಯಬಹುದು. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಭಾರತವು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದ ನಂತರ ಅದರ ಆತಿಥೇಯ ಹಕ್ಕುಗಳನ್ನು ಐಸಿಸಿ ಕಸಿದುಕೊಂಡರೆ ಮುಂದಾಗುವ ಸಮಸ್ಯೆ ಬಗೆಹರಿಯುವ ವರೆಗೆ ಯಾವುದೇ ಐಸಿಸಿ ಅಥವಾ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪಂದ್ಯಾವಳಿಗಳಲ್ಲಿ … Continued

ಮುಂಬರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಪಾಕಿಸ್ತಾನಕ್ಕೆ ಹೋಗಲ್ಲ ಎಂದ ಭಾರತ : ಪಿಸಿಬಿಗೆ ಮಾಹಿತಿ ನೀಡಿದ ಐಸಿಸಿ

ನವದೆಹಲಿ: ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಭಾರತದ ಕ್ರಿಕೆಟ್‌ ಮಂಡಳಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿದೆ ಎಂಬುದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಭಾನುವಾರ ದೃಢಪಡಿಸಿದೆ. “ಐಸಿಸಿ 2025 ರ ಚಾಂಪಿಯನ್ಸ್ ಟ್ರೋಫಿಗಾಗಿ ತಮ್ಮ ತಂಡವು ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ ಎಂದು … Continued

ಕೊನೆಗೂ ಕೆನಡಾದಲ್ಲಿ ʼಖಲಿಸ್ತಾನಿ ಪ್ರತ್ಯೇಕತಾವಾದಿಗಳುʼ ಇರುವುದನ್ನು ಒಪ್ಪಿಕೊಂಡ ಪ್ರಧಾನಿ ಜಸ್ಟಿನ್‌ ಟ್ರುಡೊ…!

ಒಟ್ಟಾವಾ : ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಒಪ್ಪಿಕೊಂಡಿದ್ದಾರೆ. ಆದರೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿನ ಸಿಖ್ ಸಮುದಾಯವನ್ನು ಒಟ್ಟಾರೆಯಾಗಿ ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಾವಾದಲ್ಲಿರುವ ಪಾರ್ಲಿಮೆಂಟ್ ಹಿಲ್‌ನಲ್ಲಿ ಇತ್ತೀಚೆಗೆ ನಡೆದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುವಾಗ ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕೆನಡಾದಲ್ಲಿ ಹಿಂದೂಗಳಲ್ಲಿ ಪ್ರಧಾನಿ … Continued

ಭಾರತದ ವಿದೇಶಾಂಗ ಸಚಿವ ಜೈಶಂಕರ ಪತ್ರಿಕಾಗೋಷ್ಠಿ-ಸಂದರ್ಶನ ಪ್ರಸಾರ ಮಾಡಿದ್ದಕ್ಕೆ ಆಸ್ಟ್ರೇಲಿಯಾದ ಮಾಧ್ಯಮ ನಿರ್ಬಂಧಿಸಿದ ಕೆನಡಾ…!

ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ ಹಾಗೂ ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಪೆನ್ನಿ ವಾಂಗ್ ಅವರ ಜಂಟಿ ಪತ್ರಿಕಾಗೋಷ್ಠಿ ಹಾಗೂ ಎಸ್.ಜೈಶಂಕರ ಅವರ ಸಂದರ್ಶನ ಪ್ರಸಾರ ಮಾಡಿದ ಕೆಲವೇ ಗಂಟೆಗಳ ನಂತರ ಕೆನಡಾದಲ್ಲಿ ಆಸ್ಟ್ರೇಲಿಯಾದ ಸುದ್ದಿ ಸಂಸ್ಥೆ ಆಸ್ಟ್ರೇಲಿಯಾ ಟುಡೇಯನ್ನು ಕೆನಡಾದಲ್ಲಿ ನಿಷೇಧಿಸಲಾಗಿದೆ ಎಂದು ಭಾರತ ಗುರುವಾರ ಹೇಳಿದೆ. .ವಿದೇಶಾಂಗ ಸಚಿವಾಲಯ (MEA)ದ … Continued

ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆ.ಡಿ. ವ್ಯಾನ್ಸ್ ಭಾರತದ ಅಳಿಯ…! ಅವರ ಪತ್ನಿ ಆಂಧ್ರ ಪ್ರದೇಶ ಮೂಲದವರು…!!

ಹೈದರಾಬಾದ್: ಅಮೆರಿಕದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಡಿ. ವ್ಯಾನ್ಸ್ ಅವರು ಭಾರತದ ಅಳಿಯ. ಅವರ ಪತ್ನಿ ಪತ್ನಿ ಉಷಾ ಚಿಲುಕುರಿ ಅವರು ಆಂಧ್ರಪ್ರದೇಶದ ಮೂಲದವರು. ಅವರ ತಂದೆ-ತಾಯಿ ಆಂಧ್ರಪ್ರದೇಶದವರು ಹಾಗೂ ಆಂಧ್ರಪ್ರದೇಶಕ್ಕೆ ವಲಸೆ ಹೋದವರು. ಅವರು 2014 ರಲ್ಲಿ ಜೆ.ಡಿ. ವ್ಯಾನ್ಸ್ ಜೊತೆ ಕೆಂಟುಕಿಯಲ್ಲಿ ವಿವಾಹವಾದರು ಮತ್ತು ಪ್ರತ್ಯೇಕ ಸಮಾರಂಭದಲ್ಲಿ ಹಿಂದೂ ಪದ್ಧತಿಯಂತೆ ಕಾರ್ಯಕ್ರಮ ನಡೆಯಿತು. ದಂಪತಿಗೆ … Continued

ವೀಡಿಯೊ | ದಾಳಿಕೋರರನ್ನು ಬಂಧಿಸುವ ಬದಲು ದೇವಸ್ಥಾನದ ದಾಳಿ ವಿರುದ್ಧ ಪ್ರತಿಭಟಿಸಿದ ಭಕ್ತರ ಮೇಲೆ ಹಲ್ಲೆ ನಡೆಸಿದ ಕೆನಡಾ ಪೊಲೀಸರು..!

ಭಾನುವಾರ ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನ್ ಪರ ಗುಂಪು ದಾಳಿ ಮಾಡಿದ ನಂತರ, ಪೊಲೀಸರು ದೇವಸ್ಥಾನಕ್ಕೆ ಹೋಗುವವರ ಜೊತೆ ಘರ್ಷಣೆ ನಡೆಸುತ್ತಿರುವ ವೀಡಿಯೊಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡವು. ಟೊರೊಂಟೊ ಬಳಿಯ ದೇವಸ್ಥಾನದ ಮೇಲೆ “ಭಾರತ ವಿರೋಧಿ” ಖಲಿಸ್ತಾನ ಪ್ರತ್ಯೇಕತಾವಾದಿಗಳು ದಾಳಿಯನ್ನು ಪ್ರತಿಭಟಿಸಿದ ಹಿಂದೂ ಭಕ್ತರ ಜೊತೆಯೇ ಕೆನಡಾದ ಪೊಲೀಸರು ಘರ್ಷಣೆ ನಡೆಸಿದರು. ಪೊಲೀಸರು ದೇವಾಲಯಕ್ಕೆ … Continued

ವೀಡಿಯೊ..| ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯವೊಂದರಲ್ಲಿ ಖಾಲಿಸ್ತಾನಿ ಪ್ರತ್ಯೇಕವಾದಿಗಳ ಗುಂಪೊಂದು ಭಾನುವಾರ ಭಕ್ತರ ಮೇಲೆ ಹಲ್ಲೆ ನಡೆಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ಸಭಾ ಮಂದಿರದ ಹೊರಗೆ ಖಲಿಸ್ತಾನಿ ಧ್ವಜಗಳನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ದೊಣ್ಣೆಗಳಿಂದ ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಹಿಂಸಾಚಾರವನ್ನು ಖಂಡಿಸಿದ ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಖಲಿಸ್ತಾನಿಗಳು “ಕೆಂಪು ಗೆರೆಯನ್ನು … Continued