ಭಾರತದ ಸಾಮಾಜಿಕ ಜಾಲತಾಣದ ಸ್ಟಾರ್ಟ್ ಅಪ್ ʼ ಕೂʼ ಶೀಘ್ರವೇ ಸ್ಥಗಿತ…! Xನ ಪ್ರತಿಸ್ಪರ್ಧಿ ಎನ್ನಲಾಗಿದ್ದ ಕೂ ಏಕೆ ಸ್ಥಗಿತಗೊಳ್ಳುತ್ತಿದೆ..?

ನವದೆಹಲಿ: ಒಮ್ಮೆ X ಗೆ (ಹಿಂದೆ Twitter) ಪ್ರಬಲ ಪ್ರತಿಸ್ಪರ್ಧಿಯಾಗಿ ಕಂಡುಬಂದಿದ್ದ ಭಾರತದ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ ಕೂ (Koo) ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುತ್ತಿದೆ. ಕೂ (Koo) ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಡೈಲಿಹಂಟ್ ಸೇರಿದಂತೆ ಅನೇಕ ಕಂಪನಿಗಳೊಂದಿಗೆ ಸಂಭಾವ್ಯ ಮಾರಾಟ ಅಥವಾ ವಿಲೀನಕ್ಕಾಗಿ ಹಲವಾರು ಸುತ್ತಿನ ಮಾತುಕತೆಗಳು ವಿಫಲವಾದ … Continued

ವೀಡಿಯೊ..| ಭಾರತದ T20 ವಿಶ್ವಕಪ್ ವಿಜಯದ ನಂತರ ಬಾರ್ಬಡೋಸ್ ಪಿಚ್‌ ನ ಮಣ್ಣು ತಿಂದ ನಾಯಕ ರೋಹಿತ್ ಶರ್ಮಾ

ಭಾರತದ ನಾಯಕ ರೋಹಿತ್ ಶರ್ಮಾ ಶನಿವಾರ ವಿಶಿಷ್ಟ ರೀತಿಯಲ್ಲಿ ತಂಡದ T20 ವಿಶ್ವಕಪ್ 2024 ಗೆಲುವನ್ನು ಆಚರಿಸಿಕೊಂಡಿದ್ದಾರೆ. ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಜಯಸಾಧಿಸಿ T20 ವಿಶ್ವಕಪ್ 2024 ರೋಹಿತ್ ನೇತೃತ್ವದ ಟೀಮ್‌ ಏಳು ರನ್‌ಗಳಿಂದ ಜಯಸಾಧಿಸಿತು. ಐಸಿಸಿ ಪ್ರಶಸ್ತಿಗಾಗಿ 11 ವರ್ಷಗಳ ಬರವನ್ನು ಇದು ಕೊನೆಗೊಳಿಸಿತು. ಭಾರತೀಯ ತಂಡದಲ್ಲಿ … Continued

T20 ವಿಶ್ವಕಪ್ ಪ್ರಶಸ್ತಿ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದ ಎರಡನೇ T20 ವಿಶ್ವಕಪ್ ವಿಜಯದ ನಂತರ ಶನಿವಾರ ತಮ್ಮ T20  ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ತಮ್ಮ ನಿವೃತ್ತಿಯನ್ನು ಘೋಷಿಸಿದ್ದಾರೆ. ಭಾರತದ ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ … Continued

ಭಾರತ-ದಕ್ಷಿಣ ಆಫ್ರಿಕ ನಡುವೆ T20 ವಿಶ್ವಕಪ್ ಫೈನಲ್: ಮಳೆ ಬಂದ್ರೆ ಮುಂದೇನು..? ʼರಿಸರ್ವ್ ದಿನʼ ನಿಯಮ, ಕನಿಷ್ಠ ಓವರ್‌ಗಳು, ಹೆಚ್ಚುವರಿ ಸಮಯ…

ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್‌ನಲ್ಲಿ ಶನಿವಾರ ನಡೆಯಲಿರುವ T20 ವಿಶ್ವಕಪ್ 2024 ರ ಫೈನಲ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಡಲಿವೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಐಸಿಸಿ ಟ್ರೋಫಿಗಾಗಿ ತಮ್ಮ ಸುದೀರ್ಘ 11 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸುವ ಗುರಿಯನ್ನು ಹೊಂದಿದೆ, ಆದಾಗ್ಯೂ, ಪಂದ್ಯವು ಮಳೆಯಿಂದ ಅಡ್ಡಿಯಾಗುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯು ಶೇ 51 … Continued

ಟಿ 20 ವಿಶ್ವಕಪ್‌ 2024 : ಇಂಗ್ಲೆಂಡ್‌ ಸೋಲಿಸಿ 10 ವರ್ಷಗಳ ನಂತರ ಫೈನಲ್‌ ಪ್ರವೇಶಿಸಿದ ಭಾರತ

ಗುರುವಾರ ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಅನ್ನು 68 ರನ್‌ಗಳಿಂದ ಸೋಲಿಸುವ ಮೂಲಕ ಫೈನಲ್‌ ಪ್ರವೇಶಿಸಿದ ಭಾರತ ಇದೇ ವೇಳೆ 2022ರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಫೈನಲ್‌ ಪ್ರವೇಶಿಸಿದ ಭಾರತದ ಕ್ರಿಕೆಟ್‌ ತಂಡವು 2024 ರ ಟಿ20 ವಿಶ್ವಕಪ್‌ ಪ್ರಶಸ್ತಿಗಾಗಿ ಶನಿವಾರ (ಜೂನ್‌ ೨೯) ದಕ್ಷಿಣ ಆಫ್ರಿಕಾದ … Continued

ಟಿ 20 ವಿಶ್ವಕಪ್ 2024 ; ಆಸ್ಟ್ರೇಲಿಯಾ ಮಣಿಸಿ ಸೆಮಿಫೈನಲ್‌ ಪ್ರವೇಶಿಸಿದ ಭಾರತ

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ಸೋಮವಾರ (ಜೂನ್ 24) ಗ್ರಾಸ್ ಐಲೆಟ್‌ನಲ್ಲಿ ನಡೆದ ತಮ್ಮ ಕೊನೆಯ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 24 ರನ್‌ಗಳಿಂದ ಸೋಲಿಸಿದ ನಂತರ ಭಾರತವು T20 ವಿಶ್ವಕಪ್ 2024 ರ ಸೆಮಿಫೈನಲ್ ಪ್ರವೇಶಿಸಿದೆ. ಆಸ್ಟ್ರೇಲಿಯಾ ತಂಡಕ್ಕೆ 20 ಓವರ್‌ಗಳಲ್ಲಿ 181/7 ರನ್‌ ಗಳಿಸಲಷ್ಟೇ ಸಾಧ್ಯವಾಯಿತು. ಗ್ರೂಪ್ 1 ರ ಈ ವಿಜಯವು … Continued

ಅಂತರಿಕ್ಷದಿಂದ ‘ರಾಮಸೇತು’ ಹೇಗೆ ಕಾಣುತ್ತದೆ ? ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಹಂಚಿಕೊಂಡ ಹೈ-ರೆಸಲ್ಯೂಶನ್ ಫೋಟೋ ವೈರಲ್‌

ನವದೆಹಲಿ: ಐರೋಪ್ಯ ಬಾಹ್ಯಾಕಾಶ ಸಂಸ್ಥೆ (European Space Agency) ತನ್ನ ಕೋಪರ್ನಿಕಸ್ ಸೆಂಟಿನೆಲ್-2 ಉಪಗ್ರಹದಿಂದ ತೆಗೆದ ‘ರಾಮಸೇತು’ವಿನ ಚಿತ್ರವನ್ನು ಹಂಚಿಕೊಂಡಿದೆ. ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ಇದು ಭಾರತ ಮತ್ತು ಶ್ರೀಲಂಕಾವನ್ನು ಸಂಪರ್ಕಿಸುವ ಶೋಲ್ಗಳ ಸರಪಳಿಯಾಗಿದೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ರಾಮಸೇತು ಶ್ರೀಲಂಕಾದ ಮನ್ನಾರ್ ದ್ವೀಪ ಹಾಗೂ ಭಾರತದ … Continued

ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್ ಸ್ಮರಣಾರ್ಥ ಕೆನಡಾ ಸಂಸತ್ತಿನಲ್ಲಿ ಮೌನಾಚರಣೆ ; ‘ಕನಿಷ್ಕ ವಿಮಾನ ಸ್ಫೋಟʼ ಘಟನೆ ಸ್ಮರಣೆ ಮೂಲಕ ಭಾರತದ ಪ್ರತ್ಯುತ್ತರ…!

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಸ್ಮರಣಾರ್ಥ ಕೆನಡಾ ಸಂಸತ್ತು ಮೌನ ಆಚರಿಸಿದ ನಂತರ ಭಾರತವು ಸ್ಪಷ್ಟ ಸಂದೇಶ ರವಾನಿಸುವ ಮೂಲಕ ತಿರುಗೇಟು ನೀಡಿದ್ದು, ವ್ಯಾಂಕೋವರ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ 1985ರ ಏರ್ ಇಂಡಿಯಾ ಕನಿಷ್ಕ ವಿಮಾನದಲ್ಲಿ ಖಲಿಸ್ತಾನಿ ಬಾಂಬ್ ಸ್ಫೋಟದಿಂದ ಮೃತಪಟ್ಟ 329 ಜನರ ಸ್ಮರಣಾರ್ಥ ಕಾರ್ಯಕ್ರಮ ನಡೆಸುವುದಾಗಿ ಪ್ರಕಟಿಸಿದೆ. “ಭಾರತವು … Continued

ಭಾರತದಲ್ಲಿ ಜೂನ್ ತಿಂಗಳಲ್ಲಿ ಮಾನ್ಸೂನ್ ಮಳೆ ಕೊರತೆ : ಹವಾಮಾನ ಇಲಾಖೆ

ನವದೆಹಲಿ: ಭಾರತದ ಹವಾಮಾನ ಇಲಾಖೆ (IMD) ಮಂಗಳವಾರ ತನ್ನ ಜೂನ್ ತಿಂಗಳ ಮಳೆಯ ಮುನ್ಸೂಚನೆಯನ್ನು ನವೀಕರಣ ಮಾಡಿದ್ದು, ಈ ವರ್ಷದ ಜೂನ್‌ ತಿಂಗಳಲ್ಲಿ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ತಿಳಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದ ಕೆಲವು ಭಾಗಗಳು ತೀವ್ರವಾದ ಶಾಖದ ಅಲೆಯಲ್ಲಿ ತತ್ತರಿಸುತ್ತಿವೆ. ಈಗ ದೇಶದಲ್ಲಿ ಮಾನ್ಸೂನ್ ಆಗಮನದ ಕುರಿತಾದ ನವೀಕರಣದಲ್ಲಿ ಭಾರತ … Continued

ಈ ಲೋಕಸಭೆಯಲ್ಲಿ 93%ರಷ್ಟು ಸಂಸದರು ಕೋಟ್ಯಧಿಪತಿಗಳು: ಟಾಪ್‌ 10 ಶ್ರೀಮಂತ ಲೋಕಸಭಾ ಸದಸ್ಯರ ಆಸ್ತಿ ಎಷ್ಟು ಗೊತ್ತೆ..? ಇಲ್ಲಿದೆ ಮಾಹಿತಿ

ನವದೆಹಲಿ : 18ನೇ ಲೋಕಸಭೆಗೆ ಚುನಾಯಿತರಾದ 543 ಸಂಸದರಲ್ಲಿ 504 ಅಥವಾ 93 ಪ್ರತಿಶತದಷ್ಟು ಮಂದಿ ಕೋಟ್ಯಧಿಪತಿಗಳಾಗಿದ್ದು, ಹಿಂದಿನ ಎರಡು ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ ಇದು ಗಮನಾರ್ಹ ಹೆಚ್ಚಳವಾಗಿದೆ. ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಪ್ರಕಾರ, 2019 ರಲ್ಲಿ ಚುನಾಯಿತ ಸಂಸದರಲ್ಲಿ 88%ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದರೆ, 2014 ರಲ್ಲಿ 82# ರಷ್ಟು ಸಂಸದರು ಕೋಟ್ಯಧಿಪತಿಗಳಾಗಿದ್ದಾರೆ. … Continued