ವೀಡಿಯೊ.. | ಸುಡಾನ್‌ನಲ್ಲಿ ನಡೆದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೀನಾ ಸೈನಿಕರ ವಿರುದ್ಧ ಜಯಗಳಿಸಿದ ಭಾರತದ ಸೈನಿಕರು

ಖಾರ್ತೂಮ್: ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಅಂಗವಾಗಿ ಸುಡಾನ್‌ನಲ್ಲಿ ನಿಯೋಜಿಸಲಾದ ಭಾರತೀಯ ಸೈನಿಕರು ಹಾಗೂ ಚೀನಾ ಸೈನಿಕರ ನಡುವಿನ ಹಗ್ಗಜಗ್ಗಾಟದ ಸ್ಪರ್ಧೆಯಲ್ಲಿ ಭಾರತವು ಚೀನಾದ ವಿರುದ್ಧ ಗಮನಾರ್ಹವಾದ ಜಯ ದಾಖಲಿಸಿದೆ ಎಂದು ಸೇನಾ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಎರಡು ದೇಶಗಳು ನಡುವೆ ಸಂಬಂಧ ಹದಗೆಟ್ಟಿದ್ದರೂ ವೈರಲ್ ವೀಡಿಯೊದಲ್ಲಿ ಸೆರೆಹಿಡಿಯಲಾದ ಈ ಸ್ಪರ್ಧೆಯಲ್ಲಿ ಎರಡೂ ದೇಶಗಳ ಸೈನಿಕರು ಅನುಕರಣೀಯ ಸೌಹಾರ್ದತೆ … Continued

ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ಭಾರತ ನೀಡಿದ ವಿಮಾನ ಹಾರಿಸಲು ನಮ್ಮ ಪೈಲಟ್‌ಗಳಿಗೆ ಬರುವುದಿಲ್ಲ ಎಂದು ಒಪ್ಪಿಕೊಂಡ ಮಾಲ್ಡೀವ್ಸ್ ರಕ್ಷಣಾ ಸಚಿವ…!

ಮಾಲೆ: ಭಾರತದ ಎಲ್ಲ ರಕ್ಷಣಾ ಸಿಬ್ಬಂದಿ ದ್ವೀಪ ರಾಷ್ಟ್ರ ತೊರೆದ ಕೆಲವು ದಿನಗಳ ನಂತರ ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಘಾಸನ್ ಮೌಮೂನ್ ಅವರು ತಮ್ಮ ಸೇನೆಯಲ್ಲಿ ಭಾರತ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳ ಕೊರತೆಯಿದೆ ಎಂದು ಒಪ್ಪಿಕೊಂಡಿದ್ದಾರೆ. ಭಾನುವಾರ ಮಾಲೆಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ಘಾಸನ್ ಮೌಮೂನ್, “ವಿಮಾನವನ್ನು ಹಾರಿಸಲು … Continued

ವೀಡಿಯೊ…| ಕಾಂಗ್ರೆಸ್ ನಾಯಕನ ʼಬಾಂಬ್ ಶೆಲ್ʼ : ಪಾಕಿಸ್ತಾನವನ್ನು ಗೌರವಿಸಿ…ಇಲ್ಲವಾದ್ರೆ ಅಣುಬಾಂಬ್ ಹಾಕ್ತಾರೆ ಎಂದ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್…!

ನವದೆಹಲಿ : ಪಾಕಿಸ್ತಾನದೊಂದಿಗೆ ಭಾರತ ಮಾತುಕತೆ ನಡೆಸಬೇಕು, ಇಲ್ಲವಾದಲ್ಲಿ ದೇಶ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಹೇಳಿದ ನಂತರ ಟೀಕೆಗೆ ಗುರಿಯಾಗಿದ್ದಾರೆ. ಪಾಕಿಸ್ತಾನವು ಅಣುಬಾಂಬ್‌ಗಳನ್ನು ಹೊಂದಿದ್ದು, ನಮ್ಮ ಸರ್ಕಾರಗಳು ಅವರನ್ನು ಕೆರಳಿಸಿದರೆ ಅವರು ಭಾರತದ ಮೇಲೆ ಅಣುಬಾಂಬ್‌ ಎಸೆಯಬಹುದು ಎಂದು ಅಯ್ಯರ್ ಹೇಳಿದ್ದಾರೆ. “ನೀವು ಅವರೊಂದಿಗೆ (ಪಾಕಿಸ್ತಾನದೊಂದಿಗೆ) ಮಾತನಾಡಬೇಕು. … Continued

1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ನವದೆಹಲಿ: ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ (Prime Minister’s Economic Advisory Council) ನಡೆಸಿದ ಅಧ್ಯಯನವು ಭಾರತದಲ್ಲಿ ಬಹುಸಂಖ್ಯಾತ ಧರ್ಮದ (ಹಿಂದೂಗಳು) ಜನಸಂಖ್ಯೆಯ ಪಾಲು 1950 ಮತ್ತು 2015 ರ ನಡುವೆ ಶೇಕಡಾ 7.8 ರಷ್ಟು ಕುಸಿದಿದೆ, ಇದೇ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ 43.15% ರಷ್ಟು ಹೆಚ್ಚಳವಾಗಿದೆ ಎಂದು ಅದು ಹೇಳಿದೆ. ಈ ಅವಧಿಯಲ್ಲಿ … Continued

ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

ನವದೆಹಲಿ : ಲೋಕಸಭೆ ಚುನಾವಣೆ ವೇಳೆ ತಮ್ಮ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಂವಹನ ಉಸ್ತುವಾರಿ ಜೈರಾಮ ರಮೇಶ ಅವರು ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ” ಸ್ಯಾಮ್ ಪಿತ್ರೋಡಾ … Continued

ಲೋಕಸಭೆ ಚುನಾವಣೆ: ಮೂರನೇ ಹಂತದಲ್ಲಿ ಅಂದಾಜು 64.4%ರಷ್ಟು ಮತದಾನ

ನವದೆಹಲಿ : 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಮೂರನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಪ್ರಮಾಣ ರಾತ್ರಿ 11: 40ರ ಹೊತ್ತಿಗೆ ಸರಿಸುಮಾರು 64.40% ಆಗಿದೆ. ಅಸ್ಸಾಂನಲ್ಲಿ (4 ಸ್ಥಾನಗಳು) 81.61 ಅತಿ ಹೆಚ್ಚು ಮತದಾನವಾಗಿದೆ. ಮತ್ತು ಉತ್ತರ ಪ್ರದೇಶದಲ್ಲಿ (10 ಸ್ಥಾನಗಳು) ಕಡಿಮೆ ಮತದಾನ 57.34 ರಷ್ಟು ಕಡಿಮೆಯಾಗಿದೆ ಎಂದು … Continued

‘ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ’ : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ಮಾಲೆ : ಭಾರತ ಮತ್ತು ಮಾಲ್ಡೀವ್ಸ್‌ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ. ಹೀಗಾಗಿ ಮಾಲ್ಡೀವ್ಸ್ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಕುಸಿದಿದೆ. ಹೀಗಾಗಿ ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ಮಾಲ್ಡೀವ್ಸ್‌ಗೆ ಆರ್ಥಿಕವಾಗಿ ಹಿನ್ನಡೆಯಾಗಿದ್ದು, ಈಗ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಅವರು ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ಆರ್ಥಿಕತೆಯನ್ನು ಬೆಂಬಲಿಸಿ ಎಂದು ಭಾರತೀಯರಿಗೆ ಮನವಿ ಮಾಡಿದ್ದಾರೆ. … Continued

ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು ಏಪ್ರಿಲ್ ತಿಂಗಳಲ್ಲಿ ₹2.10 ಲಕ್ಷ ಕೋಟಿ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ. ಈ ಕುರಿತಂತೆ ಹಣಕಾಸು ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ದೇಶೀಯ ವಹಿವಾಟು ಮತ್ತು ಆಮದು ಹೆಚ್ಚಳದಿಂದ ತೆರಿಗೆ ಸಂಗ್ರಹವೂ … Continued