ವೀಡಿಯೊ…| ಒಂದೇ ದಿನ ಸ್ವತಂತ್ರವಾದೆವು ; ನಾವೀಗ ಭಿಕ್ಷೆ ಬೇಡುತ್ತಿದ್ದೇವೆ…ಆದರೆ ಭಾರತ…: ಪಾಕಿಸ್ತಾನ ನಾಯಕನ ಹೇಳಿಕೆ ವೈರಲ್‌…

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ಥಾನಗಳೆರಡೂ ಒಂದೇ ದಿನ ಸ್ವತಂತ್ರವಾದವು. ಆದರೆ ಇಂದು ಭಾರತ ಸೂಪರ್‌ ಪವರ್‌ ಆಗಲು ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ಹೊರಬರಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ಥಾನದ ಧರ್ಮ ಗುರು, ಜೆಯುಐ-ಎಫ್ ಸಂಸದ ಮೌಲಾನಾ ಫ‌ಜ್ಲುರ್‌ ರೆಹಮಾನ್‌ ಹೇಳಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. … Continued

ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

 ನವದೆಹಲಿ : ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಸಂದೇಶಗಳ ಎನ್‌ಕ್ರಿಪ್ಶನ್ ಅನ್ನು ಬಹಿರಂಗ ಮಾಡಲು ಒತ್ತಾಯಿಸಿದರೆ “ಭಾರತದಿಂದ ನಿರ್ಗಮಿಸಬೇಕಾಗುತ್ತದೆ” ಎಂದು ವಾಟ್ಸಾಪ್ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್ ಭರವಸೆ ನೀಡುವ ಗೌಪ್ಯತೆ ಮತ್ತು ಗೂಢಲಿಪೀಕರಣ ಸಂದೇಶಗಳು ಅಂತ್ಯದಿಂದ ಅಂತ್ಯದವರೆಗೆ ಎನ್‌ಕ್ರಿಪ್ಟ್ ಆಗಿರುವುದರಿಂದ ಜನರು ಅದನ್ನು ಬಳಸುತ್ತಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಎಂಡ್-ಟು-ಎಂಡ್ … Continued

ಪಾಕಿಸ್ತಾನದ 19 ವರ್ಷದ ಹುಡುಗಿಗೆ ಹೊಸ ಜೀವನ ನೀಡಿದ ‘ಭಾರತದ ಹೃದಯ’ ….!

ಈ ವರ್ಷದ ಆರಂಭದಲ್ಲಿ ನಿಧನರಾದ 69 ವರ್ಷದ ವ್ಯಕ್ತಿಯ ಹೃದಯವು ಭಾರತದ ಗಡಿಯಾಚೆ ಪಾಕಿಸ್ತಾನದಲ್ಲಿ ವಾಸಿಸುವುದನ್ನು ಮುಂದುವರಿಸುತ್ತದೆ. ಹತ್ತು ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದ ಪಾಕಿಸ್ತಾನದ ಕರಾಚಿಯ 19 ವರ್ಷದ ಆಯೇಷಾ ರಾಶನ್ ಎಂಬ ಯುವತಿ ಭಾರತೀಯನ ಹೃದಯದೊಂದಿಗೆ ಸಾಮಾನ್ಯ ಜೀವನ ನಡೆಸಲು ಸಿದ್ಧರಾಗಿದ್ದಾರೆ. ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಆಯೇಷಾ ಯಶಸ್ವಿ ಹೃದಯ ಕಸಿ ಮಾಡಿಸಿಕೊಂಡಿದ್ದು, ಕಳೆದ … Continued

ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

ನವದೆಹಲಿ : ಸಂಪತ್ತಿನ ಮರು ಹಂಚಿಕೆ ಕುರಿತಾಗಿನ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಘೋಷಣೆಯು ಈಗ ವಿವಾದ ಸೃಷ್ಟಿಸಿದ್ದು, ಈ ನಡುವೆ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೊಡಾ ನೀಡಿರುವ ಉತ್ತರಾಧಿಕಾರ ತೆರಿಗೆ ಸಲಹೆ ವಿವಾದದ ಕಿಡಿ ಹೊತ್ತಿಸಿದೆ. ಭಾರತದಲ್ಲಿಯೂ ಅಮೆರಿಕ ಮಾದರಿಯ ಉತ್ತರಾಧಿಕಾರ ತೆರಿಗೆ ಅನ್ವಯಿಸುವಂತೆ ಪಿತ್ರೊಡಾ ನೀಡಿರುವ ಹೇಳಿಕೆ ಈಗ ಭಾರೀ ಚರ್ಚೆಗೆ … Continued

ಅತ್ಯಧಿಕ ಅಪಾಯದ ಮಟ್ಟ 6ರ ವಿರುದ್ಧ ರಕ್ಷಣೆಗಾಗಿ ದೇಶದ ಅತ್ಯಂತ ಹಗುರ ಬುಲೆಟ್ ಪ್ರೂಫ್ ಜಾಕೆಟ್‌ ಅಭಿವೃದ್ಧಿಪಡಿಸಿದ ಡಿ ಆರ್‌ ಡಿ ಒ

ನವದೆಹಲಿ : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಘಟಕವು ದೇಶದಲ್ಲೇ ಅತ್ಯಂತ ಹಗುರವಾದ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ಬುಲೆಟ್ ಪ್ರೂಫ್ ಜಾಕೆಟ್ ಅನ್ನು ಇತ್ತೀಚೆಗೆ ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯದಲ್ಲಿ (ಟಿಬಿಆರ್‌ಎಲ್) ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಡಿಆರ್‌ಡಿಒದ ಡಿಫೆನ್ಸ್ ಮೆಟೀರಿಯಲ್ಸ್ ಅಂಡ್ … Continued

ಇವರು ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ : ತೆಲುಗು ದೇಶಂ ಪಕ್ಷದ ಇವರ ಆಸ್ತಿ 5,785 ಕೋಟಿ ರೂಪಾಯಿ…!

ಹೈದರಾಬಾದ್‌ : ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರಕ್ಕೆ ತೆಲುಗು ದೇಶಂ ಪಕ್ಷದ ಅಭ್ಯರ್ಥಿ ಡಾ. ಪೆಮ್ಮಸಾನಿ ಚಂದ್ರಶೇಖರ ಅವರು ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 5,785.28 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿರುವ ಎನ್‌ಆರ್‌ಐ ವೈದ್ಯರಾಗಿರುವ ಚಂದ್ರಶೇಖರ ಅವರು ಈವರೆಗೆ ಘೋಷಿತ ದೇಶದ ಅತ್ಯಂತ ಶ್ರೀಮಂತ ಚುನಾವಣಾ ಅಭ್ಯರ್ಥಿಯಾಗಿದ್ದಾರೆ. ಆಂಧ್ರಪ್ರದೇಶದ … Continued

ಭಾರತದಲ್ಲಿತ್ತು 1000 ಕಿಲೋ ತೂಕದ ಜಗತ್ತಿನ ಅತಿದೊಡ್ಡ ಹಾವು ವಾಸುಕಿ..! ಅದರ ಪಳೆಯುಳಿಕೆ ಪತ್ತೆ…ಅದರ ಉದ್ದ ಎಷ್ಟು ಗೊತ್ತೆ..?

ನವದೆಹಲಿ: ಜಗತ್ತಿನ ಅತೀ ದೊಡ್ಡ ಹಾಗೂ ಭಾರೀ ಗಾತ್ರದ ಹಾವು (big snake) ಭಾರತದಲ್ಲಿ ಬದುಕಿತ್ತು ಎಂಬುದು ಸಂಶೋಧನೆಯಿಂದ ಗೊತ್ತಾಗಿದೆ. ಗುಜರಾತಿನಲ್ಲಿ ಪತ್ತೆಯಾದ ಪ್ರಾಚೀನ ಹಾವೊಂದರ ಪಳೆಯುಳಿಕೆಗಳು (follisls) ಅದು ಸುಮಾರು 50 ಅಡಿ ಉದ್ದ ಹಾಗೂ 1,000 ಕೆಜಿ ತೂಕವಿತ್ತು ಎಂಬುದನ್ನು ಸೂಚಿಸಿವೆ. ವಿಜ್ಞಾನಿಗಳು ಇದನ್ನು ‘ವಾಸುಕಿ ಇಂಡಿಕಸ್’ ಎಂದು ಹೆಸರಿಸಿದ್ದು, 2005 ರಲ್ಲಿ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

ನವದೆಹಲಿ: 2022 ರಲ್ಲಿ ಸಹಿ ಹಾಕಿದ USD 375 ಮಿಲಿಯನ್ ಒಪ್ಪಂದದ ಭಾಗವಾಗಿ ಫಿಲಿಪೈನ್ಸ್ ದೇಶವು ಭಾರತದಿಂದ ಬ್ರಹ್ಮೋಸ್ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಗಳ ಮೊದಲ ಸೆಟ್ ಅನ್ನು ಸ್ವೀಕರಿಸಲು ಸಿದ್ಧವಾಗಿದೆ. ರಕ್ಷಣಾ ಮೂಲಗಳ ಪ್ರಕಾರ, ಫಿಲಿಪೈನ್ಸ್ ಮೆರೈನ್ ಕಾರ್ಪ್ಸ್‌ ಗೆ ಕ್ಷಿಪಣಿಗಳನ್ನು ತಲುಪಿಸಲು ಭಾರತೀಯ ವಾಯುಪಡೆಯು ತನ್ನ ಅಮೇರಿಕನ್ ನಿರ್ಮಿತ C-17 ಗ್ಲೋಬ್ಮಾಸ್ಟರ್ ಸಾರಿಗೆ ವಿಮಾನವನ್ನು … Continued