ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳ ಪಟ್ಟಿ : ಮೊದಲ ಸ್ಥಾನ ಹಂಚಿಕೊಂಡ 6 ರಾಷ್ಟ್ರಗಳು ; ಭಾರತದ ಶ್ರೇಯಾಂಕ..?

ನವದೆಹಲಿ: ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಸಿಂಗಾಪುರ ಮತ್ತು ಸ್ಪೇನ್ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ ರಾಷ್ಟ್ರಗಳಾಗಿವೆ. 194 ಜಾಗತಿಕ ತಾಣಗಳಿಗೆ ವೀಸಾ-ಮುಕ್ತ ಪ್ರವೇಶವನ್ನು ಅನುಮತಿಸುವ ಮೂಲಕ, ಈ ರಾಷ್ಟ್ರಗಳು ಇತ್ತೀಚಿನ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿವೆ. ಈ ರಾಷ್ಟ್ರಗಳನ್ನು ಫಿನ್‌ಲ್ಯಾಂಡ್, ನೆದರ್‌ಲ್ಯಾಂಡ್ಸ್, ದಕ್ಷಿಣ ಕೊರಿಯಾ ಮತ್ತು ಸ್ವೀಡನ್ ದೇಶಗಳು ಅನುಸರಿಸುತ್ತವೆ, … Continued

ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 500 ವಿಕೆಟ್ ಪಡೆದ ಭಾರತೀಯ ಬೌಲರ್ ಆದ ಸ್ಪಿನ್ನರ್‌ ಅಶ್ವಿನ್ : ವಿಶ್ವದಲ್ಲಿ 2ನೇ ಸ್ಥಾನ; ವೇಗವಾಗಿ 500 ವಿಕೆಟ್ ಪಡೆದವರ ಪಟ್ಟಿ..

ರಾಜಕೋಟ್: ಭಾರತದ ಸ್ಪಿನ್ನ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರು, ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ ಪಂದ್ಯದ 2ನೇ ದಿನದಾಟದಲ್ಲಿ ಝಾಕ್ ಕ್ರಾವ್ಲೆ ಅವರ ವಿಕೆಟ್ ಪಡೆಯುವ ಮೂಲಕ 500 ವಿಕೆಟ್‌ ಪಡೆದ ಸಾಧಕರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ವಿಶ್ವದಲ್ಲೇ ಎರಡನೇ ಅತ್ಯಂತ ವೇಗವಾಗಿ 500 ವಿಕೆಟ್‌ ಪಡೆದ ಆಟಗಾರ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ. ಆಸ್ಟ್ರೇಲಿಯಾದ ಗೆನ್‌ … Continued

ಪಾಕಿಸ್ತಾನಿಗಳು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದು ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ: ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್‌ ಅವರಿಗೆ ವಿವಾದ ಹೊಸದೇನಲ್ಲ, ಈಗ ಮಾಜಿ ಕೇಂದ್ರ ಸಚಿವರೂ ಆದ ಮಣಿಶಂಕರ ಅಯ್ಯರ್ ಅವರು ಭಾನುವಾರ ಪಾಕಿಸ್ತಾನಿ ಜನರನ್ನು ಹೊಗಳಿ ಅವರನ್ನು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದಿದ್ದಾರೆ ಎಂದು ಡಾನ್ ವರದಿ ಮಾಡಿದ್ದು, ಅವರ ಹೇಳಿಕೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ತಾನದ ದಿನಪತ್ರಿಕೆಯ ಪ್ರಕಾರ, ಅಯ್ಯರ್ ಅವರು … Continued

ಇಂದು ಶ್ರೀಲಂಕಾ, ಮಾರಿಷಸ್‌ ನಲ್ಲಿ ಭಾರತದ ಯುಪಿಐ ಸೇವೆಗಳಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ : ಫ್ರಾನ್ಸ್‌ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಬಿಡುಗಡೆಯಾದ ಒಂದು ವಾರದ ನಂತರ, ಶ್ರೀಲಂಕಾ ಮತ್ತು ಮಾರಿಷಸ್ ಭಾರತೀಯ ಡಿಜಿಟಲ್ ಪಾವತಿ ವ್ಯವಸ್ಥೆಗೆ ಇಂದು, ಸೋಮವಾರ ಚಾಲನೆ ನೀಡಲಾಗುತ್ತದೆ. ಅಲ್ಲದೆ, ಇಂದು ಮಾರಿಷಸ್‌ನಲ್ಲಿ ರುಪೇ ಕಾರ್ಡ್‌ಗಳನ್ನು ಪರಿಚಯಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ … Continued

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು : ಕತಾರ್​ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತದ ನೌಕಾಪಡೆ 8 ಮಾಜಿ ಅಧಿಕಾರಿಗಳ ಬಿಡುಗಡೆ

ನವದೆಹಲಿ: ಭಾರತಕ್ಕೆ ಪ್ರಮುಖ ರಾಜತಾಂತ್ರಿಕ ಗೆಲುವಿನಲ್ಲಿ, ಗೂಢಚರ್ಯೆಯ ಆರೋಪದ ಪ್ರಕರಣದಲ್ಲಿ ಕತಾರ್‌ ದೇಶದಲ್ಲಿ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ ಎಂಟು ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಸೋಮವಾರ ಮುಂಜಾನೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA), ಬೆಳವಣಿಗೆಯನ್ನು ಸ್ವಾಗತಿಸಿದೆ ಮತ್ತು ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುವ ಭಾರತೀಯ ನೌಕಾಪಡೆಯ … Continued

ಎಲ್ ನಿನೊ ದುರ್ಬಲ ; ಈ ಬಾರಿ ಭಾರತದಲ್ಲಿ ‘ಉತ್ತಮ ಮುಂಗಾರು ಮಳೆ’ ನಿರೀಕ್ಷೆ : ಹವಾಮಾನ ತಜ್ಞರು

ನವದೆಹಲಿ: ಅತ್ಯಂತ ಬಿಸಿಯಾದ 2023ರ ನಂತರ, ಎಲ್ ನಿನೊ ಪರಿಸ್ಥಿತಿಗಳು ಈ ವರ್ಷದ ಜೂನ್ ವೇಳೆಗೆ ಕರಗುತ್ತವೆ ಎಂದು ಹವಾಮಾನಶಾಸ್ತ್ರಜ್ಞರು ಭವಿಷ್ಯ ನುಡಿದಿದ್ದಾರೆ. ಪ್ರಪಂಚದಾದ್ಯಂತ ಹವಾಮಾನದ ಮೇಲೆ ಪರಿಣಾಮ ಬೀರುವ ಸಮಭಾಜಕ ಪೆಸಿಫಿಕ್ ಮಹಾಸಾಗರದ ತಾಪಮಾನ ಏರಿಕೆಯಾದ ಎಲ್ ನಿನೊ ದುರ್ಬಲಗೊಳ್ಳಲು ಪ್ರಾರಂಭಿಸಿದೆ ಮತ್ತು ಆಗಸ್ಟ್ ವೇಳೆಗೆ ಲಾ ನಿನಾ ಪರಿಸ್ಥಿತಿಗಳು ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು … Continued

ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರದಲ್ಲಿ ಹೆಚ್ಚಳ : ಮೂರು ವರ್ಷದಲ್ಲೇ ಗರಿಷ್ಠ ಬಡ್ಡಿ ದರ ನಿಗದಿ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಶನಿವಾರ 2023-24ರ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಠೇವಣಿಗಳ ಮೇಲೆ ಮೂರು ವರ್ಷಗಳ ಗರಿಷ್ಠ ಬಡ್ಡಿ ದರ ಶೇ.8.25 ನಿಗದಿಪಡಿಸಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) 2021-22 ರಲ್ಲಿ 8.10 ಶೇಕಡಾದಿಂದ 2022-23 ಕ್ಕೆ EPF ಮೇಲಿನ ಬಡ್ಡಿ ದರವನ್ನು 8.15 ಶೇಕಡಾಕ್ಕೆ ಸ್ವಲ್ಪಮಟ್ಟಿಗೆ ಹೆಚ್ಚಿಸಿತ್ತು. 2021-22ನೇ … Continued

ಈಗಲೇ ಲೋಕಸಭೆ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ 24 ಸ್ಥಾನಗಳಲ್ಲಿ ಗೆಲ್ಲಬಹುದು.; ಮೂಡ್ ಆಫ್ ದಿ ನೇಷನ್ ಸಮೀಕ್ಷೆ

ನವದೆಹಲಿ: ಈಗಲೇ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ 24 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇ ‘ಮೂಡ್ ಆಫ್ ದಿ ನೇಷನ್‌ ಸಮೀಕ್ಷೆ’ ತಿಳಿಸಿದೆ. ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ 2023 ಡಿಸೆಂಬರ್ 15 ರಿಂದ 2024 ಜನವರಿ 28 ರ ನಡುವೆ ನಡೆಸಿದ ಚುನಾವಣಾ … Continued

ಅಯೋಧ್ಯೆ ರಾಮಮಂದಿರ ಕುರಿತು ಆಕ್ಷೇಪಾರ್ಹ ಹೇಳಿಕೆ: ಮಣಿಶಂಕರ ಅಯ್ಯರ್ ಪುತ್ರಿ ವಿರುದ್ಧ ದೂರು ದಾಖಲು

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ‘ಪ್ರಾಣ ಪ್ರತಿಷ್ಠೆ’ ಖಂಡಿಸಿ ಜನವರಿ 20 ರಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಅವರ ಪುತ್ರಿ ಸುರಣ್ಯಾ ಅಯ್ಯರ್ ವಿರುದ್ಧ ದೂರು ದಾಖಲಿಸಲಾಗಿದೆ. ಸುಪ್ರೀಂ ಕೋರ್ಟ್ ವಕೀಲ ಮತ್ತು ಬಿಜೆಪಿ ನಾಯಕರಾದ ಅಜಯ ಅಗರ್ವಾಲ್ ಅವರು ದೆಹಲಿಯ ಸೈಬರ್ ಕ್ರೈಂ ಪೊಲೀಸ್ … Continued

ಪಾಕಿಸ್ತಾನ ಐಎಸ್‌ಐಗೆ ಭಾರತದ ಸೇನೆ ಬಗ್ಗೆ ಮಾಹಿತಿ ನೀಡುತ್ತಿದ್ದ ಭಾರತದ ರಾಯಭಾರಿ ಕಚೇರಿ ಕೆಲಸಗಾರನ ಬಂಧನ

ನವದೆಹಲಿ: ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಉತ್ತರ ಪ್ರದೇಶ ಎಟಿಎಸ್)ವು ಮಾಸ್ಕೋದ ಭಾರತೀಯ ರಾಯಭಾರ ಕಚೇರಿಯಲ್ಲಿ ನಿಯೋಜನೆಗೊಂಡಿದ್ದ ಪಾಕಿಸ್ತಾನಿ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಏಜೆಂಟ್‌ನನ್ನು ಬಂಧಿಸಿದೆ. ಸತ್ಯೇಂದ್ರ ಸಿವಾಲ್ ಎಂಬವರನ್ನು 2021 ರಿಂದ ರಾಯಭಾರ ಕಚೇರಿಯಲ್ಲಿ ಪೋಸ್ಟ್ ಮಾಡಲಾಗಿತ್ತು. ಹಾಪುರ ಮೂಲದ ಆತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ(ಮಲ್ಟಿ-ಟಾಸ್ಕಿಂಗ್ ಸ್ಟಾಫ್ ( MTS) ಆಗಿ ಕೆಲಸ … Continued