2026ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’? 1877ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !

ನವದೆಹಲಿ: 2026-2027ರ ಅವಧಿಯಲ್ಲಿ ಅತೀ ವಿನಾಶಕಾರಿ ಎನ್ನಬಹುದಾದ “ಮೆಗಾ ಎಲ್ ನಿನೋ” (Mega El Niño) ಸಂಭವಿಸುವ ಸಾಧ್ಯತೆಗಳ ಬಗ್ಗೆ ವಿಜ್ಞಾನಿಗಳು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಇದು ದಾಖಲಿತ ಇತಿಹಾಸದಲ್ಲೇ ಅತ್ಯಂತ ಶಕ್ತಿಶಾಲಿ ಘಟನೆಗಳಲ್ಲಿ ಒಂದಾಗಬಹುದಾಗಿದ್ದು, 1877-78ರ ಭೀಕರ ಎಲ್ ನಿನೋ ಪರಿಸ್ಥಿತಿಯನ್ನು ನೆನಪಿಸುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಹವಾಮಾನ ತಜ್ಞ ರಯಾನ್ ಮಾವು … Continued

ಪಿಒಕೆ ಮೇಲೆ ಭಾರತದ ಹಕ್ಕು ಪ್ರತಿಪಾದನೆ ; ಪಾಕ್ ಆಕ್ರಮಿತ ಕಾಶ್ಮೀರಕ್ಕೂ ಅನ್ವಯವಾಗಲಿದೆ ಡಿಲಿಮಿಟೇಶನ್ ಮಸೂದೆ ; ಕ್ಷೇತ್ರಗಳು ನಿಗದಿ..!

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಒಂದು ವೇಳೆ ಭಾರತದ ನಿಯಂತ್ರಣಕ್ಕೆ ಮರಳಿದರೆ, ಅಲ್ಲಿನ ಚುನಾವಣಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯನ್ನು ನಡೆಸಲು ಅಗತ್ಯವಿರುವ ಕಾನೂನು ಚೌಕಟ್ಟನ್ನು ರೂಪಿಸುವ ‘ಡಿಲಿಮಿಟೇಶನ್ ಬಿಲ್ 2026’ (ಕ್ಷೇತ್ರ ಮರುವಿಂಗಡಣೆ ವಿಧೇಯಕ) ಅನ್ನು ಕೇಂದ್ರ ಸರ್ಕಾರ ಈ ವಾರ ಸಂಸತ್ತಿನಲ್ಲಿ ಮಂಡಿಸಲು ಸಜ್ಜಾಗಿದೆ. ಈ ಪ್ರದೇಶದ ಮೇಲಿನ ಭಾರತದ ದೀರ್ಘಕಾಲದ ಸಾಂವಿಧಾನಿಕ … Continued

ಹಾರ್ಮುಜ್ ಜಲಸಂಧಿ ಮೂಲಕ ಸಂಚರಿಸುವ ಭಾರತದ ಹಡಗುಗಳಿಗೆ ನಮ್ಮಿಂದ ಯಾವುದೇ ಶುಲ್ಕ ಇಲ್ಲ : ಇರಾನ್‌ ರಾಯಭಾರಿ ಸ್ಪಷ್ಟನೆ

ನವದೆಹಲಿ: ಇರಾನ್ ಮೇಲೆ ಅಮೆರಿಕದ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಭಾರತದ ಸರಕು ಸಾಗಣೆ ನೌಕೆಗಳಿಗೆ ಸಂಬಂಧಿಸಿದಂತೆ ಇರಾನ್ ಮಹತ್ವದ ಹೇಳಿಕೆ ನೀಡಿದೆ. ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ಭಾರತೀಯ ಕಚ್ಚಾ ತೈಲ ಹಡಗುಗಳಿಂದ ನಾವು ಯಾವುದೇ ರೀತಿಯ ‘ಟೋಲ್’ ಅಥವಾ ಸುಂಕವನ್ನು ವಸೂಲಿ ಮಾಡುತ್ತಿಲ್ಲ ಎಂದು ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫತಾಲಿ ಸೋಮವಾರ ತಿಳಿಸಿದ್ದಾರೆ. … Continued

ಭಾರತದ ಗಾಯಕಿ ಆಶಾ ಭೋಂಸ್ಲೆ ಸ್ಮರಣಾರ್ಥ ಕಾರ್ಯಕ್ರಮ ಬಿತ್ತರಿಸಿದ್ದಕ್ಕೆ ಪಾಕಿಸ್ತಾನದ ಪ್ರಮುಖ ಟಿವಿ ಚಾನೆಲ್‌ಗೆ ಸರ್ಕಾರದ ನೋಟಿಸ್…!

ಮುಂಬೈ: ಎಂಟು ದಶಕಗಳ ಕಾಲ ತನ್ನ ಕಂಠಸಿರಿಯಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದ ಭಾರತೀಯ ಚಿತ್ರ ರಂಗದ ಮಹಾನ್‌ ಹಿನ್ನೆಲೆ ಗಾಯಕಿ, ಪದ್ಮವಿಭೂಷಣ ಆಶಾ ಭೋಂಸ್ಲೆ (ಆಶಾ ತಾಯಿ) ಏಪ್ರಿಲ್ 12ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ನಿಧನವು ಇಡೀ ರಾಷ್ಟ್ರಕ್ಕೆ ಆಘಾತ ತಂದಿದ್ದು, ಭಾರತೀಯ ಚಿತ್ರರಂಗದ ಒಂದು ಸುವರ್ಣ ಯುಗ ಅಂತ್ಯಗೊಂಡಿದೆ. ಏಪ್ರಿಲ್ … Continued

ಕ್ವಾಂಟಮ್ ಯುಗದಲ್ಲಿ ಭಾರತದ ಐತಿಹಾಸಿಕ ಸಾಧನೆ : 1000 ಕಿಮೀ ಅಭೇದ್ಯ ಸಂವಹನ ಜಾಲ ರೆಡಿ ; ಸ್ವದೇಶಿ ತಂತ್ರಜ್ಞಾನಕ್ಕೆ ಜಗತ್ತೇ ಬೆರಗು

ನವದೆಹಲಿ: ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಜಗತ್ತೇ ಬೆರಗಾಗುವಂತಹ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ರಾಷ್ಟ್ರೀಯ ಕ್ವಾಂಟಮ್ ಮಿಷನ್ (NQM) ಅಡಿಯಲ್ಲಿ, ಕೇವಲ ಎರಡೇ ವರ್ಷಗಳಲ್ಲಿ 1,000 ಕಿಲೋಮೀಟರ್ ಕ್ವಾಂಟಮ್ ಸಂವಹನ ಜಾಲವನ್ನು ಯಶಸ್ವಿಯಾಗಿ ಪ್ರದರ್ಶಿಸಲಾಗಿದೆ. ವಿಶೇಷವೆಂದರೆ, ಮಿಷನ್‌ನ ಆರಂಭದಲ್ಲಿ 2,000 ಕಿ.ಮೀ ಗುರಿಯನ್ನು ತಲುಪಲು ಎಂಟು ವರ್ಷಗಳ ಕಾಲಾವಕಾಶ ನಿಗದಿಪಡಿಸಲಾಗಿತ್ತು. ಆದರೆ ಭಾರತವು ನಿಗದಿತ … Continued

7 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇರಾನಿನಿಂದ ತೈಲ ಖರೀದಿಸಿದ ಭಾರತ

ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಭಾರತೀಯ ತೈಲ ಸಂಸ್ಕರಣಾಗಾರಗಳು ಇರಾನ್‌ನಿಂದ ಕಚ್ಚಾ ತೈಲವನ್ನು ಖರೀದಿಸಿವೆ ಎಂದು ಪೆಟ್ರೋಲಿಯಂ ಸಚಿವಾಲಯ ಶನಿವಾರ ತಿಳಿಸಿದೆ. ಅಮೆರಿಕದ ಒತ್ತಡದ ಹಿನ್ನೆಲೆಯಲ್ಲಿ ಮೇ 2019 ರಿಂದ ಭಾರತವು ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿತ್ತು. ಆದರೆ ಪ್ರಸ್ತುತ ಹಾರ್ಮುಜ್ ಜಲಸಂಧಿಯ ಮೂಲಕ … Continued

ಮತ್ತೆ ಸಂಘರ್ಷ ನಡೆದರೆ ನಾವು ಕೋಲ್ಕತ್ತಾ ಮೇಲೆ ದಾಳಿ ಮಾಡ್ತೇವೆ…’: ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ರಕ್ಷಣಾ ಸಚಿವ

ಸಿಯಾಲ್ಕೋಟ್: ಭಾರತದೊಂದಿಗೆ ಭವಿಷ್ಯದಲ್ಲಿ ಯಾವುದೇ ರೀತಿಯಸಂಘರ್ಷ ಉಂಟಾದಲ್ಲಿ, ಪಾಕಿಸ್ತಾನ ಈ ಬಾರಿ ಕೋಲ್ಕತ್ತಾವನ್ನು ಟಾರ್ಗೆಟ್‌ ಮಾಡಲಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಸಿಯಾಲ್ಕೋಟ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಭಾರತವು ಈ ಬಾರಿಯೂ ಯಾವುದೇ ‘ಫಾಲ್ಸ್ ಫ್ಲಾಗ್ ಆಪರೇಷನ್’ (ನಕಲಿ ಕಾರ್ಯಾಚರಣೆ) ನಡೆಸಲು ಪ್ರಯತ್ನಿಸಿದರೆ, ನಾವು ಅದನ್ನು ಕೋಲ್ಕತ್ತಾದವರೆಗೂ … Continued

ಭಾರತದ ರಕ್ಷಣಾ ರಫ್ತು ಸಾರ್ವಕಾಲಿಕ ಗರಿಷ್ಠಮಟ್ಟಕ್ಕೆ : ಭಾರತದ ಯುದ್ಧ ಸಾಮಗ್ರಿಗಳ ಖರೀದಿದಾರರು ಯಾರು? ಯಾವುದೆಲ್ಲ ಮಾರಾಟ ?

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯ ಹಾದಿಯಲ್ಲಿರುವ ಭಾರತವು ಈಗ ಜಾಗತಿಕ ಮಟ್ಟದಲ್ಲಿ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ದೇಶದ ರಕ್ಷಣಾ ರಫ್ತು ಇತಿಹಾಸದಲ್ಲೇ ಹಿಂದೆಂದೂ ಕಾಣದ ಮಟ್ಟಕ್ಕೆ ಅದು ಏರಿಕೆಯಾಗಿದ್ದು, 2025-26ರ ಹಣಕಾಸು ವರ್ಷದಲ್ಲಿ ಒಟ್ಟು ರಕ್ಷಣಾ ರಫ್ತು ಪ್ರಮಾಣ 38,424 ಕೋಟಿ ರೂಪಾಯಿಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ. ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿರುವ … Continued

ಚಿಂತೆ ಬೇಡ, ಭಾರತೀಯರು ಸುರಕ್ಷಿತ”: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಭರವಸೆ

ತೆಹ್ರಾನ್/ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ, ಇರಾನ್ ರಾಯಭಾರ ಕಚೇರಿಯು ಭಾರತಕ್ಕೆ ಮಹತ್ವದ ಭರವಸೆ ನೀಡಿದೆ. ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಸಾಗುವ ಭಾರತದ ಹಡಗುಗಳು ಮತ್ತು ನಾಗರಿಕರ ಸುರಕ್ಷತೆಯ ಬಗ್ಗೆ ಯಾವುದೇ ಆತಂಕ ಬೇಡ ಎಂದು ಇರಾನ್ ಭರವಸೆ ನೀಡಿದೆ. “ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸುವ ಅಗತ್ಯವಿಲ್ಲ” … Continued

ಒರಾಕಲ್‌ನಲ್ಲಿ ಭಾರೀ ಉದ್ಯೋಗ ಕಡಿತ: ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದ ಕಂಪನಿ

ಬೆಂಗಳೂರು/ನ್ಯೂಯಾರ್ಕ್: ಅಮೆರಿಕ ಮೂಲದ ಪ್ರಖ್ಯಾತ ಸಾಫ್ಟ್‌ವೇರ್ ಕಂಪನಿ ಒರಾಕಲ್ (Oracle) ಜಾಗತಿಕವಾಗಿ ಅಂದಾಜು 30,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ವರದಿಯಾಗಿದೆ. ಈ ಪೈಕಿ ಭಾರತವೊಂದರಲ್ಲೇ ಸುಮಾರು 12,000 ಮಂದಿ ಉದ್ಯೋಗ ಕಳೆದುಕೊಂಡಿದ್ದು, ಮುಂದಿನ ಒಂದು ತಿಂಗಳೊಳಗೆ ಮತ್ತೊಂದು ಹಂತದ ವಜಾ ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಒರಾಕಲ್ ಸಂಸ್ಥೆಯು ವಿಶ್ವಾದ್ಯಂತ ಸುಮಾರು 30,000 … Continued