ಪಾಕಿಸ್ತಾನದಲ್ಲಿ ಈಗಲೂ ಭಾರತ ವಿರೋಧಿ ಭಯೋತ್ಪಾದನಾ ಸಂಘಟನೆಗಳು ಸಕ್ರಿಯ : ಅಮೆರಿಕ ವರದಿ

ವಾಷಿಂಗ್ಟನ್: ಭಾರತ ಮತ್ತು ಕಾಶ್ಮೀರದಲ್ಲಿ ಸಾಂತಿ ಉಂಟು ಮಾಡುವ ಭಯೋತ್ಪಾದನಾ ಸಂಘಟನೆಗಳು ಸೇರಿದಂತೆ ಹಲವಾರು ಭಯೋತ್ಪಾದನಾ ಗುಂಪುಗಳಿಗೆ ಪಾಕಿಸ್ತಾನವು ಇಂದಿಗೂ ಆಶ್ರಯ ನೀಡುತ್ತಲೇ ಇದೆ ಎಂದು ಅಮೆರಿಕದ ಕಾಂಗ್ರೆಸ್ ಸಂಶೋಧನಾ ಸಂಸ್ಥೆಯ (CRS) ವರದಿ ಬಹಿರಂಗಪಡಿಸಿದೆ. ಪಾಕಿಸ್ತಾನ ಸರ್ಕಾರವು ಹಲವು ವರ್ಷಗಳಿಂದ ಸೇನಾ ಕಾರ್ಯಾಚರಣೆ ಮತ್ತು ನೀತಿಗಳನ್ನು ಜಾರಿಗೊಳಿಸಿದ್ದರೂ, ಉಗ್ರಗಾಮಿ ಗುಂಪುಗಳು ಅಲ್ಲಿನ ಮಣ್ಣಿನಲ್ಲಿ ಸಕ್ರಿಯವಾಗಿ … Continued

ವೀಡಿಯೊ | ‘ಥ್ಯಾಂಕ್‌ ಯು ಪೀಪಲ್‌ ಆಫ್‌ ಇಂಡಿಯಾ’ ಎಂದು ಬರೆದು ಇಸ್ರೇಲ್ ಮೇಲೆ ಕ್ಷಿಪಣಿಗಳನ್ನು ಹಾರಿಸಿದ ಇರಾನ್‌…!

ತೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ ಹಾಗೂ ಇರಾನ್‌ ನಡುವೆ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲೇ, ಇರಾನ್ ತನ್ನ ಕ್ಷಿಪಣಿ ದಾಳಿಯ ನಡುವೆ ಭಾರತ ಸೇರಿದಂತೆ ಕೆಲವು ದೇಶಗಳಿಗೆ ವಿಶಿಷ್ಟ ರೀತಿಯಲ್ಲಿ ಕೃತಜ್ಞತೆ ಸಲ್ಲಿಸಿದೆ. ಇಸ್ರೇಲ್ ಗುರಿಯಾಗಿಸಿ ಉಡಾವಣೆ ಮಾಡಿದ ಕ್ಷಿಪಣಿಗಳ ಮೇಲೆ “ಭಾರತದ ಜನತೆಗೆ ಧನ್ಯವಾದಗಳು” ಎಂದು ಬರೆಯುವ ಮೂಲಕ ಇರಾನ್ ತನ್ನ ಬೆಂಬಲಕ್ಕೆ ನಿಂತ ದೇಶಗಳನ್ನು … Continued

ಇರಾನ್‌ ಯುದ್ಧದ ಮಧ್ಯೆ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಯುದ್ಧಪೂರ್ವ ಬೇಡಿಕೆಯ ಶೇ.70ರಷ್ಟಕ್ಕೆ ಹೆಚ್ಚಿಸಿದ ಕೇಂದ್ರ

ನವದೆಹಲಿ: ಜಾಗತಿಕವಾಗಿ ಕಚ್ಚಾ ತೈಲ ಬೆಲೆ ಏರಿಕೆಯ ಭೀತಿಯ ನಡುವೆ ಕೇಂದ್ರ ಸರ್ಕಾರವು ದೇಶದ ಜನತೆಗೆ ಮತ್ತು ಕೈಗಾರಿಕಾ ವಲಯಕ್ಕೆ ಸಮಾಧಾನಕರ ಸುದ್ದಿ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಪ್ರತಿ ಲೀಟರ್‌ಗೆ 10 ರೂಪಾಯಿಗಳಷ್ಟು ಕಡಿತಗೊಳಿಸುವುದಾಗಿ ಶುಕ್ರವಾರ ಘೋಷಿಸಿದೆ. ಜೊತೆಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಪೂರೈಕೆಯನ್ನು ಶೇ. … Continued

ಇಂಧನ ಬಿಕ್ಕಟ್ಟಿನಲ್ಲಿರುವ ಭಾರತಕ್ಕೆ 20,000 ಕಿಮೀ ದೂರದ ಸ್ನೇಹಿತನಿಂದ ಸಹಾಯ ಹಸ್ತ…!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಭುಗಿಲೆದ್ದಿರುವ ಇರಾನ್‌ ಯುದ್ಧವು ಭಾರತದ ಇಂಧನ ವಲಯದ ಮೇಲೆ ಪರಿಣಾಮ ಬೀರಿದೆ. ದೇಶದಲ್ಲಿ ಅಡುಗೆ ಅನಿಲದ (LPG) ಸಮಸ್ಯೆ ಸೃಷ್ಟಿಯಾಗಿರುವ ಈ ಸಂಕಷ್ಟದ ಸಮಯದಲ್ಲಿ, ಸುಮಾರು 20,000 ಕಿಲೋಮೀಟರ್ ದೂರದಲ್ಲಿರುವ ದಕ್ಷಿಣ ಅಮೆರಿಕಾದ ರಾಷ್ಟ್ರ ಅರ್ಜೆಂಟೀನಾ ಭಾರತದ ನೆರವಿಗೆ ಧಾವಿಸಿದೆ. ಭಾರತವು ತನ್ನ ಒಟ್ಟು ಎಲ್‌ಪಿಜಿ ಆಮದಿನ ಸುಮಾರು ಶೇಕಡಾ 60 … Continued

ಗುಡ್‌ ನ್ಯೂಸ್‌ ನೀಡಿದ ಕೇಂದ್ರ ಸರ್ಕಾರ ; ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ

ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸರ್ಕಾರವು ಬೆಲೆ ಏರಿಕೆಯ ಆತಂಕದಲ್ಲಿದ್ದ ದೇಶದ ಜನತೆಗೆ ದೊಡ್ಡ ರಿಲೀಫ್‌ ನೀಡಿದೆ. ಶುಕ್ರವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಪ್ರತಿ ಲೀಟರ್‌ಗೆ ತಲಾ 10 ರೂಪಾಯಿಗಳಷ್ಟು ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರದಿಂದಾಗಿ, ಪೆಟ್ರೋಲ್ ಮೇಲಿನ ಸುಂಕ ಲೀಟರ್‌ಗೆ 3 … Continued

ಭಾರತಕ್ಕೆ ಇರಾನ್ ಅಭಯ: ಯುದ್ಧದ ನಡುವೆಯೂ ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಡಗುಗಳ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್

ತೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಜಗತ್ತಿನ ಅತಿ ದೊಡ್ಡ ತೈಲ ಸಾಗಾಣಿಕಾ ಮಾರ್ಗದಲ್ಲಿ ಒಂದಾದ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಭಾರತದ ಹಡಗುಗಳ ಸಂಚಾರಕ್ಕೆ ಇಡುವುದಾಗಿ ಇರಾನ್ ಪ್ರಕಟಿಸಿದೆ. ಕಳೆದ ತಿಂಗಳು ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ಯುದ್ಧ ಸಾರಿದ ನಂತರ, ಇರಾನ್ ಈ … Continued

ಪಾಕಿಸ್ತಾನದ ಒಳಹೊಕ್ಕು ವೈರಿ ಸೇನೆಯನ್ನೇ ಸೇರಿ ಅದರ ಪರಮಾಣು ರಹಸ್ಯವನ್ನೇ ಭೇದಿಸಿದ್ದ ಭಾರತದ ಈ ಅಪ್ರತಿಮ ಗೂಢಚಾರಿ ಯಾರು ಗೊತ್ತೆ…?

ನವದೆಹಲಿ: ಬಾಲಿವುಡ್‌ನ ‘ಪಠಾಣ್’, ‘ಟೈಗರ್’ ಅಥವಾ ‘ಧುರಂಧರ್’ ಅಂತಹ ಸಿನಿಮಾಗಳಲ್ಲಿ ಹೀರೊಗಳು ಶತ್ರು ರಾಷ್ಟ್ರದೊಳಗೆ ನುಗ್ಗಿ ಸಾಹಸ ಮಾಡುವುದನ್ನು ನೋಡಿದ್ದೇವೆ. ಆದರೆ, ಬೆಳ್ಳಿತೆರೆಯ ಈ ಕಲ್ಪಿತ ಕಥೆಗಳಿಗಿಂತಲೂ ಮಿಗಿಲಾದ ಹಾಗೂ ಅದ್ಭುತವಾದ ಮತ್ತು ರೋಚಕವಾದ ಜೀವನ ನಡೆಸಿದ ಅಪ್ಪಟ ದೇಶಭಕ್ತ ರವೀಂದ್ರ ಕೌಶಿಕ ಅವರ ಬಗ್ಗೆ ಅನೇಕರಿಗೆ ತಿಳಿದಿಲ್ಲವೇನೋ? ಶತ್ರು ರಾಷ್ಟ್ರವಾದ ಪಾಕಿಸ್ತಾನದ ಗುಂಡಿನ ನೆರಳಲ್ಲೇ … Continued

ಅತಿ ಸುದೀರ್ಘ ಕಾಲ ಸರ್ಕಾರ ಮುನ್ನಡೆಸಿದ ಭಾರತದ ಮೊದಲ ನಾಯಕರಾದ ಪ್ರಧಾನಿ ಮೋದಿ…!

ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುನಾಯಿತ ಸರ್ಕಾರವೊಂದರ ಮುಖ್ಯಸ್ಥರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರದಲ್ಲಿದ್ದ ಪವನಕುಮಾರ ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಮಂತ್ರಿಯಾಗಿ ಅವರ ಒಟ್ಟು … Continued

ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ ; ಹಡಗು ಸಂಚಾರರ ಸುರಕ್ಷತೆಗೆ ಕರೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುವಂತೆ ಅವರು ಕರೆ ನೀಡಿದರು. ಕಳೆದ ಎಂಟು ದಿನಗಳಲ್ಲಿ … Continued

ಹೊಟೇಲ್‌, ರೆಸ್ಟೋರೆಂಟ್​​ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಹೆಚ್ಚಳ ಮಾಡಿದ ಕೇಂದ್ರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ದೇಶದ ಇಂಧನ ಭದ್ರತೆ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಹಲವಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಪೂರೈಕೆಯಲ್ಲಿ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು ಸಿಲಿಂಡರ್‌ಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಇದರಿಂದಾಗಿ ಒಟ್ಟಾರೆ ಹಂಚಿಕೆಯು ಶೇ. 50ಕ್ಕೆ ಏರಿಕೆಯಾಗಲಿದೆ. … Continued