ಆಪರೇಷನ್ ಸಿಂಧೂರದಲ್ಲಿ ಹುತಾತ್ಮರಾದ 6 ಯೋಧರ ಹೆಸರು ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲು 2025ರ ಮೇ ತಿಂಗಳಲ್ಲಿ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ವೇಳೆ ಹುತಾತ್ಮರಾದ ಆರು ಭಾರತೀಯ ಯೋಧರ ಹೆಸರುಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದೆ. ಈ ಆರು ಯೋಧರ ಪೈಕಿ ಐವರು ಭಾರತೀಯ ಸೇನೆಗೆ ಹಾಗೂ … Continued

ಭಾರತೀಯ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ನೇಮಕ

ನವದೆಹಲಿ: ಭಾರತೀಯ ಭೂಸೇನೆಯ (ಇಂಡಿಯನ್ ಆರ್ಮಿ) ನೂತನ ಮುಖ್ಯಸ್ಥರಾಗಿ (ಚೀಫ್ ಆಫ್ ದಿ ಆರ್ಮಿ ಸ್ಟಾಫ್) ಲೆಫ್ಟಿನೆಂಟ್ ಜನರಲ್ ಧೀರಜ ಸೇಥ್ ಅವರು ನೇಮಕಗೊಂಡಿದ್ದಾರೆ. ಪ್ರಸ್ತುತ ಭೂಸೇನಾ ಮುಖ್ಯಸ್ಥರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಅವರು ಜೂನ್ 30 ರಂದು ನಿವೃತ್ತರಾಗಲಿದ್ದು, ಅದೇ ದಿನದಿಂದ ಜಾರಿಗೆ ಬರುವಂತೆ ಧೀರಜ ಸೇಥ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಪ್ರಸ್ತುತ ಭೂಸೇನೆಯ … Continued

ಭಾರತದ ನೂತನ ಸಿಡಿಎಸ್ ಆಗಿ ಜನರಲ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ ನೂತನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಭಾನುವಾರ (ಮೇ 31) ಅಧಿಕಾರ ವಹಿಸಿಕೊಂಡಿದ್ದಾರೆ. ಮೂರೂ ಸೇನಾ ಪಡೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಮತ್ತು ಮಿಲಿಟರಿ ಥಿಯೇಟರ್ ಕಮಾಂಡ್ ಯೋಜನೆ ಜಾರಿಗೆ ತರುವುದು ಅವರ ಪ್ರಮುಖ ಆದ್ಯತೆಗಳಾಗಿವೆ. ಜನರಲ್ ಸುಬ್ರಮಣಿ ಅವರ ಬಗ್ಗೆ… ಪಾಕಿಸ್ತಾನ … Continued

ಜಮ್ಮು ಮತ್ತು ಕಾಶ್ಮೀರ | 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ ; 10 ಯೋಧರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ, ಕನಿಷ್ಠ 10 ಯೋಧರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂಬತ್ತು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಟಾಪ್ ಎಂಬಲ್ಲಿ ಈ ದುರಂತ ಸಂಭವಿಸಿದೆ. ಬುಲೆಟ್ ಪ್ರೂಫ್ ಸೇನಾ ವಾಹನವು ಒಟ್ಟು 17 ಸಿಬ್ಬಂದಿಯನ್ನು ಹೊತ್ತು … Continued

ವೀಡಿಯೊ..| ಸೇನಾ ದಿನಾಚರಣೆ : ʼಆಪರೇಷನ್ ಸಿಂಧೂರʼ ಕಾರ್ಯಾಚರಣೆಯ ಹೊಸ ವೀಡಿಯೊ ಬಿಡುಗಡೆ ಮಾಡಿದ ಸೇನೆ

ನವದೆಹಲಿ: ಕಳೆದ ವರ್ಷ ಪಾಕಿಸ್ತಾನದ ಗಡಿ ದಾಟಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ರೋಚಕ ದೃಶ್ಯಗಳನ್ನು ಸೇನಾ ದಿನಾಚರಣೆಯ (Army Day) ಸಂದರ್ಭದಲ್ಲಿ ಗುರುವಾರ ಬಿಡುಗಡೆ ಮಾಡಲಾಗಿದೆ. ಶತ್ರು ರಾಷ್ಟ್ರದ ರಾಡಾರ್ ವ್ಯವಸ್ಥೆ ಹಾಗೂ ವಾಯುನೆಲೆಗಳನ್ನು ಧ್ವಂಸಗೊಳಿಸಿದ ದೃಶ್ಯಗಳು ಈ ವೀಡಿಯೊದಲ್ಲಿವೆ. ಸುಮಾರು ಮೂರು ನಿಮಿಷಗಳ ಕಾಲ ಇರುವ … Continued

ಮೇಜರ್ ಮೋಹಿತ್ ಶರ್ಮಾ ; ಭಯೋತ್ಪಾದಕ ಸಂಘಟನೆಯೊಳಗೆ ನುಸುಳಿ ಭೀಕರ ಭಯೋತ್ಪಾದಕರನ್ನೇ ಕೊಂದ ಭಾರತದ ಧೈರ್ಯಶಾಲಿ ಸೇನಾಧಿಕಾರಿ…

ನವದೆಹಲಿ : ನಟ ರಣವೀರ ಸಿಂಗ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಧುರಂಧರ್’  ಸಿನೆಮಾದ ಪಾತ್ರ ಮತ್ತು ಕಥಾವಸ್ತುವಿನ ಸುತ್ತಲಿನ ವಿವಾದವು ತೀವ್ರಗೊಂಡಿದೆ. ಈ ಚಿತ್ರವು ಹುತಾತ್ಮ ಯೋಧ, ಮೇಜರ್ ಮೋಹಿತ್ ಶರ್ಮಾ ಅವರ ನಿಜ ಜೀವನದ ಘಟನೆಗಳನ್ನು ಆಧರಿಸಿದೆ ಎಂದು ಹಲವರು ಆರೋಪಿಸಿದ್ದಾರೆ. ಇದೀಗ, ಮೇಜರ್ ಶರ್ಮಾ ಅವರ ಕುಟುಂಬವು ತಮ್ಮ ಅನುಮತಿಯಿಲ್ಲದೆ ತಮ್ಮ ಪುತ್ರನ … Continued

ಭಾರತದ ಸೇನೆಗೆ ₹ 79,000 ಕೋಟಿ ಮೌಲ್ಯದ ಉಪಕರಣಗಳ ಖರೀದಿಗೆ ಅನುಮೋದನೆ

ನವದೆಹಲಿ: ಭಾರತೀಯ ಸೇನೆಯ ಮೂರು ಪಡೆಗಳಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಯುದ್ಧ ಸಾಮರ್ಥ್ಯ ಮತ್ತು ಬಲವನ್ನು ಹೆಚ್ಚಿಸಲು ₹ 79,000 ಕೋಟಿ ಮೌಲ್ಯದ ಮಿಲಿಟರಿ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು (ಮಿಲಿಟರಿ ಹಾರ್ಡ್‌ವೇರ್) ಖರೀದಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ (ಅಕ್ಟೋಬರ್‌ 23, 2025) ನಡೆದ ರಕ್ಷಣಾ … Continued

ವೀಡಿಯೊಗಳು..| ಆಪರೇಷನ್ ‘ಸಿಂಧೂರ’ದಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಸಾವು, 12 ವಿಮಾನ ನಾಶ: ಡಿಜಿಎಂಒ ರಾಜೀವ ಘಾಯ್‌

ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ಗಡಿ ನಿಯಂತ್ರಣ ರೇಖೆ (LoC) ಯ ಉದ್ದಕ್ಕೂ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಕಿಸ್ತಾನದ 100ಕ್ಕೂ ಹೆಚ್ಚು ಸೈನಿಕರು ಮತ್ತು 12 ವಿಮಾನಗಳು ನಾಶವಾಗಿವೆ ಎಂದು ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO) ಲೆಫ್ಟಿನೆಂಟ್ ಜನರಲ್ ರಾಜೀವ ಘಾಯಿ ಮಂಗಳವಾರ ಬಹಿರಂಗಪಡಿಸಿದ್ದಾರೆ. ಲೆಫ್ಟಿನೆಂಟ್ ಜನರಲ್ ಘಾಯಿ ಅವರು … Continued

ಮಾನವ ಜಿಪಿಎಸ್‌ ಎಂದೇ ಕುಖ್ಯಾತನಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಬಾಗು ಖಾನ್ ಎನ್‌ಕೌಂಟರಿನಲ್ಲಿ ಹತ…!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ‘ಮಾನವ ಜಿಪಿಎಸ್‌ (GPS)’ ಎಂದೇ ಕುಖ್ಯಾತನಾಗಿದ್ದ ಭಯೋತ್ಪಾದಕ ಬಾಗು ಖಾನ್‌ ಎಂಬಾತನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಅಧಿಕಾರಿಗಳು ಆತನ ಗುರುತಿನ ಚೀಟಿಯನ್ನು ಸಹ ಪತ್ತೆಹಚ್ಚಿದ್ದಾರೆ. ಭದ್ರತಾ ಸಂಸ್ಥೆಗಳ ಪಟ್ಟಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್‌ನ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದ . ಮೂಲಗಳ … Continued

ವೀಡಿಯೊಗಳು…| ಕಟ್ಟಡ ಕುಸಿಯುವ ಕೆಲವೇ ಕ್ಷಣಗಳ ಮೊದಲು 22 ಸಿಆರ್‌ಪಿಎಫ್ ಸಿಬ್ಬಂದಿ ರಕ್ಷಣೆ ಮಾಡಿದ ಸೇನೆ ಹೆಲಿಕಾಪ್ಟರ್…!

ಚಂಡಿಗಢ : ಬುಧವಾರ ಬೆಳಿಗ್ಗೆ ನಡೆದ ಕ್ಷಿಪ್ರ ಮತ್ತು ದಿಟ್ಟ ಕಾರ್ಯಾಚರಣೆಯಲ್ಲಿ, ಭಾರತೀಯ ಸೇನೆಯ ಹೆಲಿಕಾಪ್ಟರ್‌ಗಳು ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಗಡಿಯಲ್ಲಿರುವ ಪಂಜಾಬಿನ ಮಾಧೋಪುರ ಹೆಡ್‌ವರ್ಕ್ಸ್ ಬಳಿ ಸಿಲುಕಿಕೊಂಡಿದ್ದ 22 ಸಿಆರ್‌ಪಿಎಫ್ ಸಿಬ್ಬಂದಿ ಮತ್ತು ಮೂವರು ನಾಗರಿಕರನ್ನು ರಕ್ಷಣೆ ಮಾಡಿವೆ. ಇಂದು, ಬುಧವಾರ ಬೆಳಿಗ್ಗೆ 6 ಗಂಟೆಗೆ, ಕಠಿಣ ಸವಾಲಿನ ಪರಿಸ್ಥಿತಿಗಳ ಹೊರತಾಗಿಯೂ … Continued