ಜಮ್ಮು-ಕಾಶ್ಮೀರ | ಪೂಂಚ್‌ ಬಳಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಸಾವು

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ 300 ಅಡಿ ಕಂದಕಕ್ಕೆ ಸೇನಾ ಬಿದ್ದು ಸಂಭವಿಸಿದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 5:30ರ ಸುಮಾರಿಗೆ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಮರಾಠಾ ರೆಜಿಮೆಂಟ್‌ನ (Maratha Light Infantry) ಐವರು ಮೃತಪಟ್ಟಿದ್ದರು. ಅವರಲ್ಲಿ ಮೂವರು ಕರ್ನಾಟಕದವರಾಗಿದ್ದಾರೆ. ಸೇನಾ … Continued

ಫೆಂಗಲ್‌ ಚಂಡಮಾರುತ : ಪುದುಚೇರಿಯಲ್ಲಿ ಸುರಿಯಿತು 30 ವರ್ಷಗಳಲ್ಲೇ ಅಧಿಕ ಮಳೆ…!

ಪುದುಚೇರಿ : ಫೆಂಗಲ್‌ ಚಂಡಮಾರುತದಿಂದಾಗಿ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರಾತ್ರಿಯಿಡೀ 50 ಸೆಂಟಿಮೀಟರ್ ಮಳೆಯಾಗಿದೆ. ಇದು ಕಳೆದ 30 ವರ್ಷಗಳಲ್ಲಿ ಪುದುಚೇರಿಯಲ್ಲಿ ದಾಖಲಾದ ಅತ್ಯಧಿಕ ಮಳೆಯಾಗಿದೆ. ಚಂಡಮಾರುತ ಪ್ರಭಾವದಿಂದ ಪುದುಚೇರಿಯಲ್ಲೂ ಅಧಿಕ ಮಳೆಯಾಗುತ್ತಿದೆ. ಪುದುಚೇರಿಯಲ್ಲಿ 50 ಸೆಂ.ಮೀ ಮಳೆಯಾಗಿದ್ದು, ತೀವ್ರ ಪ್ರವಾಹ ಉಂಟಾಗಿದೆ. ನಾನು ಪ್ರಸ್ತುತ ಪ್ರವಾಹ ಪೀಡಿತ ಪ್ರದೇಶಗಳನ್ನು ಪರಿಶೀಲಿಸುತ್ತಿದ್ದೇನೆ. ಪ್ರವಾಹದಲ್ಲಿ ಸಿಲುಕಿರುವವರನ್ನು ಸ್ಥಳಾಂತರಿಸಲು ರಕ್ಷಣಾ … Continued

ವೀಡಿಯೊ..| : ತಪ್ಪಿಸಿಕೊಳ್ಳಲು ಓಡಿಹೋದ ಭಯೋತ್ಪಾದಕ ; ಹೊಡೆದುರುಳಿಸಿದ ಭದ್ರತಾ ಪಡೆಗಳು : ಡ್ರೋನ್ ನಲ್ಲಿ ದೃಶ್ಯ ಸೆರೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಶನಿವಾರ ಭದ್ರತಾ ಪಡೆಗಳು ಭಯೋತ್ಪಾಕನನ್ನು ಹೊಡೆದುರುಳಿಸುವ ಮೊದಲು ಆತ ತನ್ನ ರೈಫಲ್‌ನಿಂದ ಗುಂಡು ಹಾರಿಸುತ್ತ ಕಟ್ಟಡದಿಂದ ಹೊರಗೆ ಓಡಿಹೋದ ಕ್ಷಣವನ್ನು ತೋರಿಸುವ ಡ್ರೋನ್ ದೃಶ್ಯಗಳು ಹೊರಹೊಮ್ಮಿವೆ. ಬಾರಾಮುಲ್ಲಾದಲ್ಲಿ ರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ, ಅಧಿಕಾರಿಗಳು ಕಾರ್ಯಾಚರಣೆಯನ್ನು “ಗಮನಾರ್ಹ ಯಶಸ್ಸು” ಎಂದು … Continued

ಕಾಶ್ಮೀರ: ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ, ಮತ್ತೊಂದು ಎನ್‌ಕೌಂಟರ್‌ ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂದಲ್ಲಿ ಪ್ರಾರಂಭಿಸಲಾಗಿದೆ … Continued

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಒಂದು ವಾರ ಮುನ್ನ ಎನ್‌ ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ: ಸೇನೆಯ ವಿಶೇಷ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಕಥುವಾ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯಲ್ಲಿ ಸೇನೆಯ 1 ಪ್ಯಾರಾ, 22 ಗರ್ವಾಲ್ ರೈಫಲ್ಸ್ ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ ಪಾಲ್ಗೊಂಡಿವೆ ಎಂದು ಹೇಳಲಾಗಿದೆ. ಮೂಲಗಳ … Continued

ವೀಡಿಯೊ…| ಯುದ್ಧ ನಡೆದು 25 ವರ್ಷಗಳ ನಂತರ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ ಸೇನೆ…!

ರಾವಲ್ಪಿಂಡಿ : 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 1999ರ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೇನೆ ತಾನು ಭಾಗಿಯಾಗಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದೆ. ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಅವರು, ಪಾಕಿಸ್ತಾನದ ರಕ್ಷಣಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ 1965, 1971 ಮತ್ತು 1999 ರಲ್ಲಿ ಕಾರ್ಗಿಲ್‌ನಲ್ಲಿ ಯುದ್ಧಗಳನ್ನು ನಡೆಸುವಾಗಹಲವಾರು ಸೈನಿಕರು ಪ್ರಾಣ ತ್ಯಾಗ … Continued

ವೀಡಿಯೊ | ವಯನಾಡು ಭೂ ಕುಸಿತ : 10 ದಿನಗಳಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನೆಗೆ ಜನರಿಂದ ಭಾವನಾತ್ಮಕ ಬೀಳ್ಕೊಡುಗೆ

ವಯನಾಡು : ಇತ್ತೀಚಿನ ಭೂಕುಸಿತ ರಕ್ಷಣಾ ಕಾರ್ಯಾಚರಣೆಗಳ ಸಮಯದಲ್ಲಿ ಭಾರತೀಯ ಸೈನಿಕರ ಧೀರ ಪ್ರಯತ್ನಗಳನ್ನು ಗುರುತಿಸಿ, ಕೇರಳದ ವಯನಾಡ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿಗೆ ಜನರು ಹೃತ್ಪೂರ್ವಕ ಮತ್ತು ಭಾವನಾತ್ಮಕ ವಿದಾಯ ಹೇಳಿದರು. ಇತರರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಸೈನಿಕರಿಗೆ ಸ್ಥಳೀಯ ಸಮುದಾಯ ಮತ್ತು ಹೊರಗಿನವರು ಕೃತಜ್ಞತೆ ಮತ್ತು ಮೆಚ್ಚುಗೆಯ ಸುರಿಮಳೆಗೈದರು. ಕೊಚ್ಚಿ ರಕ್ಷಣಾ ಸಾರ್ವಜನಿಕ … Continued

ವಯನಾಡು ವಿನಾಶಕಾರಿ ಭೂಕುಸಿತ | ಸಾವಿನ ಸಂಖ್ಯೆ 282ಕ್ಕೆ ಏರಿಕೆ; 240ಕ್ಕೂ ಹೆಚ್ಚು ಜನ ನಾಪತ್ತೆ

ವಯನಾಡು : ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದ ನಂತರ ಸಾವಿನ ಸಂಖ್ಯೆ 282ಕ್ಕೆ ಏರಿದೆ ಹಾಗೂ ಗುರುವಾರ ಬೆಳಿಗ್ಗೆ 240 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 1,500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ವಿವಿಧ ರಕ್ಷಣಾ ತಂಡಗಳು ಮತ್ತು ಸಶಸ್ತ್ರ … Continued

ಮಾಲ್ಡೀವ್ಸ್-ಚೀನಾಕ್ಕೆ ತಿರುಗೇಟು: ಮಾಲ್ಡೀವ್ಸ್ ಸಮೀಪವೇ ಇರುವ ಲಕ್ಷದ್ವೀಪದಲ್ಲಿ ಹೊಸ ನೌಕಾ ನೆಲೆ ಕಾರ್ಯಾರಂಭ

ನವದೆಹಲಿ: ಮಾಲ್ಡೀವ್ಸ್‌ಗೆ ಸಮೀಪವಿರುವ ಹಿಂದೂ ಮಹಾಸಾಗರದಲ್ಲಿರುವ ತನ್ನ ಲಕ್ಷ ದ್ವೀಪದಲ್ಲಿ ಭಾರತವು ಬುಧವಾರ ಹೊಸ ನೌಕಾ ನೆಲೆಯನ್ನು ಉದ್ಘಾಟಿಸಿದೆ. ಮಾಲ್ಡೀವ್ಸ್‌ ಜೊತೆಗಿನ ಸಂಬಂಧಗಳು ಹಳಸಿದ ನಂತರ ಹಾಗೂ ಚೀನಾ ಮಾಲ್ಡೀವ್ಸ್‌ಗೆ ಹತ್ತಿರವಾದ ನಂತರ ಭಾರತದಿಂದ ಈ ಕ್ರಮವು ಬಂದಿದೆ. ಭಾರತದ ಲಕ್ಷದ್ವೀಪ ದ್ವೀಪಸಮೂಹದಲ್ಲಿರುವ ಮಿನಿಕಾಯ್ ದ್ವೀಪದ ಹೊಸ ನೆಲೆಯಾದ INS ಜಟಾಯು ವರ್ಷಗಳ ಕಾಲ ನಿರ್ಮಾಣ … Continued

ಅಮಾಯಕ ಸೈನಿಕರ ಬಲಿ ಪಡೆದ ಕೀರ್ತಿ ಮೋದಿಗೆ ಸಲ್ಲುತ್ತದೆ : ಬಾಲಕೃಷ್ಣ ವಾಗ್ದಾಳಿ

ರಾಮನಗರ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಸೈನಿಕರನ್ನು ಬಲಿ ಪಡೆದ ಕೀರ್ತಿ ಮೋದಿ ಸರ್ಕಾರಕ್ಕೆ ಸಲ್ಲುತ್ತದೆ ಎಂದು ವಿವಾದಾತ್ಮಕ ಹೇಳೀಕೆ ನೀಡಿದ್ದಾರೆ. ಬಿಜೆಪಿಯವರು ಬ್ರಿಟಿಷರಿದ್ದಂತೆ. ಜನರ ಮಧ್ಯೆ ಎತ್ತಿಕಟ್ಟುವ … Continued