ವೀಡಿಯೊ..| ಎಂ.ಎಸ್. ಧೋನಿಯನ್ನು ನಾನು ಎಂದಿಗೂ ಕ್ಷಮಿಸಲ್ಲ ; ಕ್ರಿಕೆಟರ್‌ ಯುವರಾಜ ಸಿಂಗ್ ತಂದೆ ಹೀಗೆ ಹೇಳಿದ್ಯಾಕೆ…?

ನವದೆಹಲಿ : ಭಾರತದ ಮಾಜಿ ಬ್ಯಾಟರ್ ಯುವರಾಜ ಸಿಂಗ್ ಅವರ ತಂದೆ ಯೋಗರಾಜ ಸಿಂಗ್ ಅವರು ಭಾರತದ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಜೀ ಸ್ವಿಚ್ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ, ಈಗ ವೈರಲ್ ಆಗಿರುವ ವೀಡಿಯೊದಲ್ಲಿ, ಯೋಗರಾಜ ಸಿಂಗ್ ಅವರು ಧೋನಿಯನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ. … Continued

ಕ್ರಿಕೆಟ್‌ : ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಯಲ್ಲಿ ದ್ರಾವಿಡ್ ಏಕೆ ಮುಂದುವರಿಯಲಿಲ್ಲ? ಕಾರಣ ಬಹಿರಂಗಪಡಿಸಿದ ಬಿಸಿಸಿಐ ಕಾರ್ಯದರ್ಶಿ

ನವದೆಹಲಿ: T20 ವಿಶ್ವಕಪ್ 2024ರ ನಂತರ ಭಾರತದ ತಂಡದ ಮುಖ್ಯ ತರಬೇತುದಾರರಾಗಿದ್ದ ರಾಹುಲ್ ದ್ರಾವಿಡ್ ಅವರ ಅವಧಿಯು ಮುಕ್ತಾಯವಾಗಿದ್ದು, ಮುಂದಿನ ಟೀಂ ಇಂಡಿಯಾದ ಮುಖ್ಯ ಕೋಚ್‌ ಹುದ್ದೆಗಾಗಿ ಹುಡುಕಾಟ ನಡೆಯುತ್ತಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ನಂತರ ದ್ರಾವಿಡ್ ಅವರು ತಮ್ಮ ಮುಖ್ಯ ಕೋಚ್‌ ಹುದ್ದೆಗೆ ಅದ್ಭುತ ವಿದಾಯ … Continued

ಐಸಿಸಿ ʼಟಿ20 ವಿಶ್ವಕಪ್ 2024ʼ ಪ್ರಶಸ್ತಿ ಗೆದ್ದ ಭಾರತದ ಕ್ರಿಕೆಟ್‌ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ…!

ನವದೆಹಲಿ: ಭಾನುವಾರ (ಜೂನ್ 30) ಐಸಿಸಿ (ICC) ಪುರುಷರ T20 ವಿಶ್ವಕಪ್ 2024 ಅನ್ನು ಗೆದ್ದ ಟೀಮ್ ಇಂಡಿಯಾಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 125 ಕೋಟಿಗಳ ಬೃಹತ್ ಬಹುಮಾನವನ್ನು ಘೋಷಿಸಿದೆ. ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಐಸಿಸಿ T20 ವಿಶ್ವಕಪ್ ಟ್ರೋಫಿ … Continued

T20 ವಿಶ್ವಕಪ್ ಪ್ರಶಸ್ತಿ ಬೆನ್ನಲ್ಲೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ನವದೆಹಲಿ: ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಂಡದ ಎರಡನೇ T20 ವಿಶ್ವಕಪ್ ವಿಜಯದ ನಂತರ ಶನಿವಾರ ತಮ್ಮ T20  ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ತಮ್ಮ ನಿವೃತ್ತಿಯನ್ನು ಘೋಷಿಸಿದ್ದಾರೆ. ಭಾರತದ ಐತಿಹಾಸಿಕ ವಿಜಯದ ನಂತರ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ … Continued

ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 500 ವಿಕೆಟ್ ಪಡೆದ ಭಾರತೀಯ ಬೌಲರ್ ಆದ ಸ್ಪಿನ್ನರ್‌ ಅಶ್ವಿನ್ : ವಿಶ್ವದಲ್ಲಿ 2ನೇ ಸ್ಥಾನ; ವೇಗವಾಗಿ 500 ವಿಕೆಟ್ ಪಡೆದವರ ಪಟ್ಟಿ..

ರಾಜಕೋಟ್: ಭಾರತದ ಸ್ಪಿನ್ನ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರು, ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ ಪಂದ್ಯದ 2ನೇ ದಿನದಾಟದಲ್ಲಿ ಝಾಕ್ ಕ್ರಾವ್ಲೆ ಅವರ ವಿಕೆಟ್ ಪಡೆಯುವ ಮೂಲಕ 500 ವಿಕೆಟ್‌ ಪಡೆದ ಸಾಧಕರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ವಿಶ್ವದಲ್ಲೇ ಎರಡನೇ ಅತ್ಯಂತ ವೇಗವಾಗಿ 500 ವಿಕೆಟ್‌ ಪಡೆದ ಆಟಗಾರ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ. ಆಸ್ಟ್ರೇಲಿಯಾದ ಗೆನ್‌ … Continued

ಭಾರತ ವಿಶ್ವಕಪ್ ಗೆದ್ದಿದ್ದರೆ ಅದು ಕ್ರಿಕೆಟ್‌ ಆಟಕ್ಕೆ ದುಃಖದ ಕ್ಷಣವಾಗುತ್ತಿತ್ತು : ಭಾರತದ ವಿರುದ್ಧ ನಂಜು ಉಗುಳಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್

ಪದೇ ಪದೇ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಈಗ ಮತ್ತೊಮ್ಮೆ ಭಾರತ ವಿರುದ್ದ ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ. ಬಾಲಿವುಡ್ ನಟಿ ಐಶ್ವರ್ಯಾ ರೈ ಬಗ್ಗೆ ಹೇಳಿಕೆ ನೀಡಿದ ನಂತರ ತಮ್ಮದೇ ದೇಶದ ಆಟಗಾರರಿಂದ ಕುಟುಟೀಕೆ ಎದುರಿಸಿದ ನಂತರ ಕ್ಷಮೆಯಾಚಿಸಿದ ಕೆಲವೇ ದಿನಗಳಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ … Continued