ಇಸ್ರೋ ತೊರೆದ 100ಕ್ಕೂ ಹೆಚ್ಚು ವಿಜ್ಞಾನಿಗಳು ; ಭಾರತದ ಬಾಹ್ಯಾಕಾಶ ಯೋಜನೆಗಳಿಗೆ ಸಂಕಷ್ಟ : ಕೇಂದ್ರದಿಂದ ಹೊಸ ಆದೇಶ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಇತ್ತೀಚಿನ ದಿನಗಳಲ್ಲಿ ವಿಜ್ಞಾನಿಗಳು ಮತ್ತು ತಾಂತ್ರಿಕ ಸಿಬ್ಬಂದಿ ದೊಡ್ಡ ಪ್ರಮಾಣದಲ್ಲಿ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಬಾಹ್ಯಾಕಾಶ ಇಲಾಖೆ (Department of Space – DoS) ಮಹತ್ವದ ನಿರ್ದೇಶನವನ್ನು ಹೊರಡಿಸಿದೆ. ಗಗನಯಾನ ಸೇರಿದಂತೆ ರಾಷ್ಟ್ರೀಯ ಮಹತ್ವದ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳ ರಾಜೀನಾಮೆ ಅಥವಾ ಸ್ವಯಂ … Continued

‘ಯೂಸರ್‌ನೇಮ್’ ವೈಶಿಷ್ಟ್ಯ ವಿವಾದ: ವಾಟ್ಸ್ಆ್ಯಪ್ ನಂತರ ಟೆಲಿಗ್ರಾಂ, ಸಿಗ್ನಲ್‌ಗೆ ಕೇಂದ್ರ ಸರ್ಕಾರದ ನೋಟಿಸ್

ನವದೆಹಲಿ: ಮೆಸೇಜಿಂಗ್ ವೇದಿಕೆಗಳಾದ ಟೆಲಿಗ್ರಾಂ ಮತ್ತು ಸಿಗ್ನಲ್‌ನಲ್ಲಿರುವ ‘ಯೂಸರ್‌ನೇಮ್’ (Username) ವೈಶಿಷ್ಟ್ಯದ ಕುರಿತು ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಗುರುವಾರ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಮೆಟಾ ಒಡೆತನದ ವಾಟ್ಸ್ಆ್ಯಪ್‌ಗೆ ಇದೇ ವೈಶಿಷ್ಟ್ಯದ ಕುರಿತು ಬುಧವಾರ ನೋಟಿಸ್ ನೀಡಿದ ಒಂದು ದಿನದ ಬಳಿಕ ಈ ಬೆಳವಣಿಗೆನಡೆದಿದೆ. ನೋಟಿಸ್‌ನಲ್ಲಿ, ಮೊಬೈಲ್ … Continued

ಸೈಬರ್ ವಂಚನೆ ಹೆಚ್ಚುವ ಆತಂಕ : ವಾಟ್ಸ್ಆಪ್ ಹೊಸ ‘ಯೂಸರ್‌ನೇಮ್’ ಸೇವೆಗೆ ಸರ್ಕಾರದ ತಾತ್ಕಾಲಿಕ ತಡೆ ; ಸ್ಪಷ್ಟನೆಗೆ ಮೆಟಾಕ್ಕೆ ನೋಟಿಸ್‌

ನವದೆಹಲಿ: ಭಾರತದಲ್ಲಿ ವಾಟ್ಸ್ಆಪ್ ತನ್ನ ಹೊಸ ‘ಯೂಸರ್‌ನೇಮ್’ (Username) ವೈಶಿಷ್ಟ್ಯವನ್ನು ಜಾರಿಗೊಳಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದ್ದು, ಈ ಕುರಿತು ಮೂರು ದಿನಗಳೊಳಗೆ ಸಮಗ್ರ ವಿವರಣೆ ನೀಡುವಂತೆ ಮೆಟಾಗೆ (Meta) ನೋಟಿಸ್ ಜಾರಿ ಮಾಡಿದೆ. ಸರ್ಕಾರದ ಜೊತೆ ನಡೆಯುವ ಸಮಾಲೋಚನೆ ಪೂರ್ಣಗೊಳ್ಳುವವರೆಗೆ ಭಾರತದಲ್ಲಿ ಈ ವೈಶಿಷ್ಟ್ಯವನ್ನು ಜಾರಿಗೊಳಿಸಬಾರದು ಎಂದು ಕೂಡ ಸ್ಪಷ್ಟ ಸೂಚನೆ … Continued

ಲೋಕಸಭಾ ಸ್ಥಾನಗಳ ಸಂಖ್ಯೆ 850ಕ್ಕೆ ಏರಿಕೆ? ಶೇ. 33 ಮಹಿಳಾ ಮೀಸಲಾತಿ-ಕ್ಷೇತ್ರ ಮರುವಿಂಗಡಣೆಗೆ ಕೇಂದ್ರದ ಸಿದ್ಧತೆ

ನವದೆಹಲಿ: ದೀರ್ಘಕಾಲದಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಮತ್ತು ಹೊಸ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಗೆ ಚಾಲನೆ ನೀಡಲು ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳನ್ನು ಸದ್ಯದ 543 ರಿಂದ 850ಕ್ಕೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಸದಸ್ಯ ಬಲದ ಹೆಚ್ಚಳವನ್ನು ಒಳಗೊಂಡ ಕರಡು ಮಸೂದೆಯನ್ನು ಸಂಸದರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ … Continued

ಗುಡ್‌ ನ್ಯೂಸ್‌ ನೀಡಿದ ಕೇಂದ್ರ ಸರ್ಕಾರ ; ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ

ನವದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸರ್ಕಾರವು ಬೆಲೆ ಏರಿಕೆಯ ಆತಂಕದಲ್ಲಿದ್ದ ದೇಶದ ಜನತೆಗೆ ದೊಡ್ಡ ರಿಲೀಫ್‌ ನೀಡಿದೆ. ಶುಕ್ರವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಪ್ರತಿ ಲೀಟರ್‌ಗೆ ತಲಾ 10 ರೂಪಾಯಿಗಳಷ್ಟು ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಮಹತ್ವದ ನಿರ್ಧಾರದಿಂದಾಗಿ, ಪೆಟ್ರೋಲ್ ಮೇಲಿನ ಸುಂಕ ಲೀಟರ್‌ಗೆ 3 … Continued

ಇರಾನಿನಲ್ಲಿ ಅಸ್ಥಿರತೆ ಆತಂಕ : ಸಿಲುಕಿರುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರ ಸಜ್ಜು

ನವದೆಹಲಿ: ಇರಾನ್‌ನಲ್ಲಿ ದಿನೇ ದಿನೇ ಉಲ್ಬಣಿಸುತ್ತಿರುವ ಹಿಂಸಾಚಾರ ಮತ್ತು ಅಸ್ಥಿರತೆಯ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಮೂಲಗಳ ಪ್ರಕಾರ, ಜನವರಿ 16ರೊಳಗೆ ಮೊದಲ ತಂಡವನ್ನು ಭಾರತಕ್ಕೆ ಕರೆತರುವ ಸಾಧ್ಯತೆಯಿದೆ. “ಇರಾನ್‌ನಲ್ಲಿ ಬದಲಾಗುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತಕ್ಕೆ ಮರಳಲು ಇಚ್ಛಿಸುವ ನಾಗರಿಕರಿಗೆ ಅಗತ್ಯ ವ್ಯವಸ್ಥೆಗಳನ್ನು ವಿದೇಶಾಂಗ ವ್ಯವಹಾರಗಳ … Continued

ಗ್ರೋಕ್‌ (Grok) ಎಐ ದುರ್ಬಳಕೆಗೆ ತೀವ್ರ ಆಕ್ಷೇಪ ; ಎಕ್ಸ್ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ಖಡಕ್ ನೋಟಿಸ್

ನವದೆಹಲಿ: ಮಹಿಳೆಯರ ವಿರುದ್ಧ ಅಶ್ಲೀಲ ಮತ್ತು ಅವಹೇಳನಕಾರಿ ವಿಷಯಗಳನ್ನು ಸೃಷ್ಟಿಸಲು ಗ್ರೋಕ್‌ (‘Grok)’ ಎಂಬ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೈಕ್ರೋಬ್ಲಾಗಿಂಗ್ ತಾಣ ‘X’ (ಹಿಂದಿನ ಟ್ವಿಟರ್) ಸಂಸ್ಥೆಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ಗಂಭೀರ ನೋಟಿಸ್ ನೀಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಮತ್ತು ಐಟಿ … Continued

ಅರಾವಳಿ ಪರ್ವತ ಶ್ರೇಣಿಯಲ್ಲಿ ಹೊಸ ಗಣಿಗಾರಿಕೆ ಗುತ್ತಿಗೆಗೆ ಕೇಂದ್ರದ ಬ್ರೇಕ್ : ರಾಜ್ಯಗಳಿಗೆ ಕಟ್ಟುನಿಟ್ಟಿನ ಸೂಚನೆ

ನವದೆಹಲಿ: ದೇಶದ ಅತ್ಯಂತ ಹಳೆಯ ಪರ್ವತ ಶ್ರೇಣಿಗಳಲ್ಲಿ ಒಂದಾದ ‘ಅರಾವಳಿ’ ಪರ್ವತ ಶ್ರೇಣಿಯನ್ನು ಪರಿಸರ ಹಾನಿಯಿಂದ ರಕ್ಷಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅರಾವಳಿ ಪ್ರದೇಶದಲ್ಲಿ ಹೊಸದಾಗಿ ಗಣಿಗಾರಿಕೆ ಗುತ್ತಿಗೆ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಹೊಸ ನಿರ್ದೇಶನಗಳನ್ನು ನೀಡಿದೆ. ತೀವ್ರ ಪರಿಸರ ಒತ್ತಡವನ್ನು ಎದುರಿಸುತ್ತಿರುವ ಈ ಪರ್ವತ ವ್ಯವಸ್ಥೆಯನ್ನು … Continued

ಕೇಂದ್ರದಿಂದ 4 ನೂತನ ಕಾರ್ಮಿಕ ಸಂಹಿತೆಗಳು ಜಾರಿ: ನೇಮಕಾತಿ ಪತ್ರ, ಸಕಾಲಿಕ ವೇತನ, ಸಾಮಾಜಿಕ ಭದ್ರತೆ ಈಗ ಕಡ್ಡಾಯ

 ನವದೆಹಲಿ: ಕೇಂದ್ರ ಸರ್ಕಾರವು ನಾಲ್ಕು ಪ್ರಮುಖ ಕಾರ್ಮಿಕ ಸಂಹಿತೆಗಳನ್ನು (Labour Codes) ನವೆಂಬರ್ 21, 2025 ರಿಂದ ಜಾರಿಗೆ ತಂದಿದ್ದು, ಈ ನಿಟ್ಟಿನಲ್ಲಿ ಎಲ್ಲ ಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು (Appointment Letters) ನೀಡಬೇಕು ಮತ್ತು ಕಾರ್ಮಿಕರಿಗೆ ಸಕಾಲದಲ್ಲಿ ವೇತನ ಪಾವತಿ ಮಾಡಬೇಕು ಎಂದು ಆದೇಶಿಸಲಾಗಿದೆ. ಈ ಹೊಸ ನಿಯಮಗಳ ಪ್ರಕಾರ, ಗಿಗ್ (Gig) ಮತ್ತು … Continued

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ ; ದೀಪಾವಳಿಗೂ ಮುನ್ನ ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟವು ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ. 3 ರಷ್ಟು ತುಟ್ಟಿಭತ್ಯೆ (DA) ಹೆಚ್ಚಳಕ್ಕೆ ಒಪ್ಪಿಗೆ … Continued