ಜನಸಂಖ್ಯಾ ಸಮೀಕ್ಷೆಯಲ್ಲಿ ಜಾತಿ ಗಣತಿ ಸೇರ್ಪಡೆ: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ಜಾತಿ ಜನಗಣತಿಯು ಮುಂದಿನ ರಾಷ್ಟ್ರೀಯ ಜನಗಣತಿದ ಭಾಗವಾಗಲಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಪ್ರಕಟಿಸಿದ್ದಾರೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. “ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ” ಎಂದು ಕೇಂದ್ರ ಸಚಿವರು ಬುಧವಾರ … Continued

ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

ಬೆಂಗಳೂರು : ಎಲಾನ್ ಮಸ್ಕ್ ಒಡೆತನದ ಎಕ್ಸ್‌ ವೆಬ್‌ಸೈಟ್‌ನಲ್ಲಿನ ಟ್ವೀಟ್ ಮತ್ತು ಇತರ ವಿಷಯವನ್ನು ತೆಗೆದುಹಾಕುವಂತೆ ಸೂಚಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಆಕ್ಟ್) ಸೆಕ್ಷನ್ 79(3)(ಬಿ)ಯನ್ನು ಬಳಸುವ ವಿಧಾನವನ್ನು ಪ್ರಶ್ನಿಸಿ ಎಕ್ಸ್, ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಭಾರತದಲ್ಲಿನ ಸರ್ಕಾರಿ ಅಧಿಕಾರಿಗಳು ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಬೈಪಾಸ್ … Continued

119 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗೂಗಲ್ ಪ್ಲೇ ಸ್ಟೋರ್‌ನಿಂದ 119 ಚೀನೀ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲು ಸೂಚನೆ ನೀಡುವ ಮೂಲಕ ಸರ್ಕಾರವು ಮತ್ತೊಂದು ಡಿಜಿಟಲ್ ಕಾರ್ಯಾಚರಣೆ ಪ್ರಾರಂಭಿಸಿದೆ. ಈ ಅಪ್ಲಿಕೇಶನ್‌ಗಳು ಚೀನಾ ಮತ್ತು ಹಾಂಗ್ ಕಾಂಗ್‌ನ ಡೆವಲಪರ್‌ಗಳ ಜೊತೆ ಸಂಪರ್ಕ ಹೊಂದಿವೆ, ನಿರ್ಬಂಧಿಸಿದ ಅಪ್ಲಿಕೇಶನ್‌ಗಳಲ್ಲಿ ಹಲವು ವೀಡಿಯೊ ಮತ್ತು ಧ್ವನಿ ಚಾಟ್ ಪ್ಲಾಟ್‌ಫಾರ್ಮ್‌ಗಳು ಸೇರಿವೆ. ಈ ಎಲ್ಲಾ ಅಪ್ಲಿಕೇಶನ್‌ಗಳು ಭಾರತದ ಗೂಗಲ್ … Continued

ಏಪ್ರಿಲ್ 1ರಿಂದ ಏಕೀಕೃತ ಪಿಂಚಣಿ ಯೋಜನೆ (UPS) ಜಾರಿ : ಏನಿದು ಯೋಜನೆ…?

ನವದೆಹಲಿ: ಕೇಂದ್ರ ಸರಕಾರಿ ನೌಕರರಿಗೆ ನಿವೃತ್ತಿಯ ನಂತರ ಆರ್ಥಿಕ ಭದ್ರತೆಯ ಖಾತ್ರಿ ನೀಡುವ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್‌) ಪ್ರಸಕ್ತ ವರ್ಷದ ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ. ಪರಿಷ್ಕೃತ ಯೋಜನೆಯಲ್ಲಿಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಮತ್ತು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್‌ಪಿಎಸ್‌)ಗಳನ್ನು ಸಂಯೋಜಿಸಲಾಗಿದೆ. ಈಗಾಗಲೇ ಎನ್‌ಪಿಎಸ್‌ನಲ್ಲಿ ದಾಖಲಾಗಿರುವ ಕೇಂದ್ರ ಸರಕಾರಿ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

ಮನಮೋಹನ ಸಿಂಗ್ ಸ್ಮಾರಕ ; ಕಾಂಗ್ರೆಸ್ ಮನವಿಗೆ ಕೇಂದ್ರ ಸರ್ಕಾರದ ಒಪ್ಪಿಗೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಕಾಂಗ್ರೆಸ್ ಮನವಿಗೆ ಒಪ್ಪಿಗೆ ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಮನಮೋಹನ್ ಸಿಂಗ್ ಅವರಿಗೆ ದೆಹಲಿಯಲ್ಲಿ ತಂಗುದಾಣ ನೀಡಬೇಕೆಂಬ ತನ್ನ ಮನವಿಯನ್ನು ಸರ್ಕಾರ ಅಂಗೀಕರಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಂದ ಮಾಜಿ … Continued

ಅಂಡಮಾನ್-ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ : ಅದರ ನೂತನ ಹೆಸರು…

ನವದೆಹಲಿ : ಭಾರತದ ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ರಾಜಧಾನಿ ಪೋರ್ಟ್ ಬ್ಲೇರ್ ಅನ್ನು ‘ಶ್ರೀ ವಿಜಯ ಪುರಂ’ ಎಂದು ಮರುನಾಮಕರಣ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ದೇಶವನ್ನು ವಸಾಹತುಶಾಹಿ ಮುದ್ರೆಗಳಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಈ ನಿರ್ಧಾರ ಬಂದಿದೆ. ಪೋರ್ಟ್ ಬ್ಲೇರ್ ಪಟ್ಟಣವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ … Continued

ಪಶ್ಚಿಮ ಘಟ್ಟದ 56,826 ಚದರ ಕಿಮೀ ʼಪರಿಸರ ಸೂಕ್ಷ್ಮʼ ಪ್ರದೇಶ ; ಕೇಂದ್ರದಿಂದ ಕರಡು ಅಧಿಸೂಚನೆ : ಯಾವ ರಾಜ್ಯದಲ್ಲಿ ಎಷ್ಟು ? ಇಲ್ಲಿದೆ ಮಾಹಿತಿ

ನವದೆಹಲಿ: ಕೇರಳದ ವಯನಾಡು ದುರಂತದ ನಂತರ, ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ … Continued

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳಲು ನಿಷೇಧ ತೆರವು : ತಪ್ಪು ಸರಿಪಡಿಸಲು ಕೇಂದ್ರಕ್ಕೆ 5 ದಶಕ ಬೇಕಾಯ್ತು ಎಂದ ಮಧ್ಯಪ್ರದೇಶ ಹೈಕೋರ್ಟ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರಕ್ಕೆ ತಾನು ಮಾಡಿದ್ದ ತಪ್ಪನ್ನು ಸರಿಪಡಿಸಿಕೊಳ್ಳಲುಐದು ದಶಕಗಳೇ ಬೇಕಾಯಿತು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ತನ್ನ ತಪ್ಪಿನ ಅರಿವಾಗಲು ಕೇಂದ್ರ ಸರ್ಕಾರಕ್ಕೆ ಸುಮಾರು ಐದು ದಶಕಗಳೇ ಬೇಕಾಯಿತು. ಆರ್‌ಎಸ್‌ಎಸ್‌ನಂತಹ ಅಂತಾರಾಷ್ಟ್ರೀಯ ಖ್ಯಾತಿ ಹೊಂದಿರುವ ಸಂಸ್ಥೆಯನ್ನು ತಪ್ಪಾಗಿ ನಿಷೇಧಿತ ಸಂಘಟನೆಗಳ ಸಾಲಿನಲ್ಲಿರಿಸಲಾಗಿತ್ತು. ನಿರ್ಬಂಧ … Continued

ರಾಷ್ಟ್ರಪತಿ ಭವನದ ಅಶೋಕ ಹಾಲ್‌, ದರ್ಬಾರ್ ಹಾಲ್‌ಗಳ ಹೆಸರು ಬದಲು….

ನವದೆಹಲಿ : ವಸಾಹತುಶಾಹಿ ಬ್ರಿಟಿಷರ ಭೂತಕಾಲದಿಂದ ದೂರ ಸರಿಯುವ ಸರಕಾರದ ಪ್ರಯತ್ನಗಳ ಅಂಗವಾಗಿ ರಾಷ್ಟ್ರಪತಿ ಭವನದ ಕೆಲ ಸಭಾಂಗಣಗಳ ಹೆಸರನ್ನು ಬದಲಿಸಲಾಗಿದೆ. ವಿಧ್ಯುಕ್ತ ಕಾರ್ಯಕ್ರಮಗಳು ನಡೆಯುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ಗಳಿಗೆ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಗುರುವಾರ ಮರುನಾಮಕರಣ ಮಾಡಲಾಗಿದೆ. ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಲ್ಲಿ ವಿವಿಧ ಸಮಾರಂಭಗಳು … Continued