ಪಶ್ಚಿಮ ಘಟ್ಟದ 56,826 ಚದರ ಕಿಮೀ ʼಪರಿಸರ ಸೂಕ್ಷ್ಮʼ ಪ್ರದೇಶ ; ಕೇಂದ್ರದಿಂದ ಕರಡು ಅಧಿಸೂಚನೆ : ಯಾವ ರಾಜ್ಯದಲ್ಲಿ ಎಷ್ಟು ? ಇಲ್ಲಿದೆ ಮಾಹಿತಿ

ನವದೆಹಲಿ: ಕೇರಳದ ವಯನಾಡು ದುರಂತದ ನಂತರ, ಪಶ್ಚಿಮ ಘಟ್ಟಗಳ ಸುಮಾರು 57,000 ಚದರ ಕಿಲೋಮೀಟರ್ ಪ್ರದೇಶವನ್ನು ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಘೋಷಿಸಲು ಕೇಂದ್ರ ಸರ್ಕಾರವು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಪಶ್ಚಿಮ ಘಟ್ಟ ಪ್ರದೇಶದ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ … Continued

ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಪಾಲ್ಗೊಳ್ಳಲು ನಿಷೇಧ ತೆರವು : ತಪ್ಪು ಸರಿಪಡಿಸಲು ಕೇಂದ್ರಕ್ಕೆ 5 ದಶಕ ಬೇಕಾಯ್ತು ಎಂದ ಮಧ್ಯಪ್ರದೇಶ ಹೈಕೋರ್ಟ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರಕ್ಕೆ ತಾನು ಮಾಡಿದ್ದ ತಪ್ಪನ್ನು ಸರಿಪಡಿಸಿಕೊಳ್ಳಲುಐದು ದಶಕಗಳೇ ಬೇಕಾಯಿತು ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ತನ್ನ ತಪ್ಪಿನ ಅರಿವಾಗಲು ಕೇಂದ್ರ ಸರ್ಕಾರಕ್ಕೆ ಸುಮಾರು ಐದು ದಶಕಗಳೇ ಬೇಕಾಯಿತು. ಆರ್‌ಎಸ್‌ಎಸ್‌ನಂತಹ ಅಂತಾರಾಷ್ಟ್ರೀಯ ಖ್ಯಾತಿ ಹೊಂದಿರುವ ಸಂಸ್ಥೆಯನ್ನು ತಪ್ಪಾಗಿ ನಿಷೇಧಿತ ಸಂಘಟನೆಗಳ ಸಾಲಿನಲ್ಲಿರಿಸಲಾಗಿತ್ತು. ನಿರ್ಬಂಧ … Continued

ರಾಷ್ಟ್ರಪತಿ ಭವನದ ಅಶೋಕ ಹಾಲ್‌, ದರ್ಬಾರ್ ಹಾಲ್‌ಗಳ ಹೆಸರು ಬದಲು….

ನವದೆಹಲಿ : ವಸಾಹತುಶಾಹಿ ಬ್ರಿಟಿಷರ ಭೂತಕಾಲದಿಂದ ದೂರ ಸರಿಯುವ ಸರಕಾರದ ಪ್ರಯತ್ನಗಳ ಅಂಗವಾಗಿ ರಾಷ್ಟ್ರಪತಿ ಭವನದ ಕೆಲ ಸಭಾಂಗಣಗಳ ಹೆಸರನ್ನು ಬದಲಿಸಲಾಗಿದೆ. ವಿಧ್ಯುಕ್ತ ಕಾರ್ಯಕ್ರಮಗಳು ನಡೆಯುವ ದರ್ಬಾರ್‌ ಹಾಲ್‌ ಹಾಗೂ ಅಶೋಕ ಹಾಲ್‌ಗಳಿಗೆ ‘ಗಣತಂತ್ರ ಮಂಟಪ’ ಮತ್ತು ‘ಅಶೋಕ ಮಂಟಪ’ ಎಂದು ಗುರುವಾರ ಮರುನಾಮಕರಣ ಮಾಡಲಾಗಿದೆ. ರಾಷ್ಟ್ರಪತಿ ಭವನದ ಎರಡು ಪ್ರಮುಖ ಸಭಾಂಗಣಗಳಲ್ಲಿ ವಿವಿಧ ಸಮಾರಂಭಗಳು … Continued

ರೈತರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ : 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಅನುಮೋದನೆ ; ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚು

ನವದೆಹಲಿ: ಪ್ರಮುಖ ನಿರ್ಧಾರದಲ್ಲಿ, ಖಾರಿಫ್ (ಬೇಸಿಗೆ) ಬಿತ್ತನೆ ಅವಧಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟವು 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಅನುಮೋದಿಸಿದೆ. ಇದು ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚಾಗಿದೆ. ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ₹ 117 ಹೆಚ್ಚಿಸಲಾಗಿದೆ. ಹೈಬ್ರೀಡ್ … Continued

ನೀಟ್‌ ಪರೀಕ್ಷೆ ವಿವಾದ : ಕೃಪಾಂಕ ರದ್ದು, ಕಡಿಮೆ ಸಮಯಾವಕಾಶ ಸಿಕ್ಕವರಿಗೆ ಮರುಪರೀಕ್ಷೆ ; ಸುಪ್ರೀಂ ಕೋರ್ಟಿಗೆ ಕೇಂದ್ರ

ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆ (ನೀಟ್‌ ಯುಜಿ 2024) ಬರೆಯಲು ಕಡಿಮೆ ಕಾಲಾವಕಾಶ ದೊರೆತಿದ್ದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ಬರೆಯುವ ಇಲ್ಲವೇ ಸಮಯದ ನಷ್ಟ ಅನುಭವಿಸಿದ್ದಕ್ಕಾಗಿ ಈ ಹಿಂದೆ ನೀಡಲಾಗಿದ್ದ ಕೃಪಾಂಕ ತ್ಯಜಿಸುವ ಆಯ್ಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಸಮರ್ಪಕವಾಗಿ ನಡೆದ … Continued

ಸಿಮಿ ಸಂಘಟನೆಯನ್ನು ಮತ್ತೆ 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ‘ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(SIMI)ವನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಲಾಗಿದೆ ಮತ್ತು ಕಠಿಣ ಭಯೋತ್ಪಾದನೆ-ವಿರೋಧಿ ಅಡಿಯಲ್ಲಿ ಅದರ ಮೇಲಿನ ನಿಷೇಧವನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಪ್ರಕಟಿಸಿದ್ದಾರೆ. ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ, ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಲ್ಲಿ ತೊಡಗಿರುವ ಸಂಘಟನೆಯು ಭಾರತದ ಸಾರ್ವಭೌಮತೆ, … Continued

ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಅಪಹಾಸ್ಯ ಮಾಡಿದ ನಾಟಕ ಪ್ರದರ್ಶಿಸಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ವಿಷಯ ಇದ್ದ ನಾಟಕವನ್ನು ಪ್ರದರ್ಶಿಸಿದ್ದಕ್ಕಾಗಿ ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಗಣರಾಜ್ಯೋತ್ಸವದಂದು ಹೈಕೋರ್ಟ್‌ನಲ್ಲಿ ಪ್ರದರ್ಶಿಸಲಾದ ಈ ನಾಟಕವು ಭಾರತ ಸರ್ಕಾರ ಮತ್ತು ದೇಶಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ದೂರಿಗೆ ಕಾರಣವಾಯಿತು. ಸಹಾಯಕ ರಿಜಿಸ್ಟ್ರಾರ್ ಸುಧೀಶ ಟಿ.ಎ. ಮತ್ತು ಕೋರ್ಟ್ ಕೀಪರ್ … Continued

ಮಾತುಕತೆಗಳ ನಂತರವೇ ಹಿಟ್-ಅಂಡ್-ರನ್ ಕಾನೂನು ಜಾರಿಗೆ ನಿರ್ಧಾರ : ದೇಶಾದ್ಯಂತ ಮುಷ್ಕರ ಹಿಂಪಡೆದ ಟ್ರಕ್‌ ಚಾಲಕರು

ನವದೆಹಲಿ : ಹಿಟ್‌ ಅಂಡ್‌ ರನ್‌ ವಿರುದ್ಧ ಕಾನೂನನ್ನು ಜಾರಿಗೊಳಿಸುವ ಮೊದಲು ಮಧ್ಯಸ್ಥಗಾರರ ಜತೆ ಸಮಾಲೋಚನೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ದೇಶಾದ್ಯಂತ ಟ್ರಕ್‌ ಚಾಲಕರ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದ ಜೊತೆ ಸುದೀರ್ಘ ಮಾತುಕತೆಯ ನಂತರ, ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಮುಷ್ಕರವನ್ನು ಹಿಂಪಡೆಯಿತು. “ನಾವು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ … Continued

ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್‌ನೊಂದಿಗೆ ಗೋಲ್ಡಿ ಬ್ರಾರ್ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ ಹೊರಡಿಸಿದ ನೋಟಿಸ್ ತಿಳಿಸಿದೆ. ಗೋಲ್ಡಿ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಮತ್ತು … Continued

ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಅಸ್ಸಾಂ ಪ್ರತ್ಯೇಕತಾವಾದಿ ಗುಂಪು ಉಲ್ಫಾ-ಕೇಂದ್ರ ಸರ್ಕಾರ ಸಹಿ

ನವದೆಹಲಿ: ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ನಡುವಿನ ತ್ರಿಪಕ್ಷೀಯ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಯಿತು. ಆ ಮೂಲಕ ಭಾರತದ ಈಶಾನ್ಯ ಪ್ರದೇಶದಲ್ಲಿನ ಅತಿದೊಡ್ಡ ದಂಗೆಕೋರ ಗುಂಪುಗಳ ಶಸ್ತ್ರಸಜ್ಜಿತ ಹೋರಾಟಕ್ಕೆ ತೆರೆ ಬಿದ್ದಿದೆ. ಶಾಂತಿ ಒಪ್ಪಂದಗಳಿಗೆ ಸಹಿ ಹಾಕಿದ ನಂತರ ಅಮಿತ್ ಶಾ ಅವರು, “ಇಂದು … Continued