ರೈತರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ : 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಅನುಮೋದನೆ ; ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚು

ನವದೆಹಲಿ: ಪ್ರಮುಖ ನಿರ್ಧಾರದಲ್ಲಿ, ಖಾರಿಫ್ (ಬೇಸಿಗೆ) ಬಿತ್ತನೆ ಅವಧಿಗೆ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟವು 14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಅನುಮೋದಿಸಿದೆ. ಇದು ಉತ್ಪಾದನಾ ವೆಚ್ಚಕ್ಕಿಂತ 1.5 ಪಟ್ಟು ಹೆಚ್ಚಾಗಿದೆ. ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ₹ 117 ಹೆಚ್ಚಿಸಲಾಗಿದೆ. ಹೈಬ್ರೀಡ್ … Continued

ನೀಟ್‌ ಪರೀಕ್ಷೆ ವಿವಾದ : ಕೃಪಾಂಕ ರದ್ದು, ಕಡಿಮೆ ಸಮಯಾವಕಾಶ ಸಿಕ್ಕವರಿಗೆ ಮರುಪರೀಕ್ಷೆ ; ಸುಪ್ರೀಂ ಕೋರ್ಟಿಗೆ ಕೇಂದ್ರ

ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆ (ನೀಟ್‌ ಯುಜಿ 2024) ಬರೆಯಲು ಕಡಿಮೆ ಕಾಲಾವಕಾಶ ದೊರೆತಿದ್ದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ಬರೆಯುವ ಇಲ್ಲವೇ ಸಮಯದ ನಷ್ಟ ಅನುಭವಿಸಿದ್ದಕ್ಕಾಗಿ ಈ ಹಿಂದೆ ನೀಡಲಾಗಿದ್ದ ಕೃಪಾಂಕ ತ್ಯಜಿಸುವ ಆಯ್ಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಸಮರ್ಪಕವಾಗಿ ನಡೆದ … Continued

ಸಿಮಿ ಸಂಘಟನೆಯನ್ನು ಮತ್ತೆ 5 ವರ್ಷಗಳ ಕಾಲ ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ‘ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ(SIMI)ವನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸಲಾಗಿದೆ ಮತ್ತು ಕಠಿಣ ಭಯೋತ್ಪಾದನೆ-ವಿರೋಧಿ ಅಡಿಯಲ್ಲಿ ಅದರ ಮೇಲಿನ ನಿಷೇಧವನ್ನು ಇನ್ನೂ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಪ್ರಕಟಿಸಿದ್ದಾರೆ. ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ, ಶಾಂತಿ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವಲ್ಲಿ ತೊಡಗಿರುವ ಸಂಘಟನೆಯು ಭಾರತದ ಸಾರ್ವಭೌಮತೆ, … Continued

ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ಅಪಹಾಸ್ಯ ಮಾಡಿದ ನಾಟಕ ಪ್ರದರ್ಶಿಸಿದ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಸರ್ಕಾರದ ವಿರುದ್ಧ ಅವಹೇಳನಕಾರಿ ವಿಷಯ ಇದ್ದ ನಾಟಕವನ್ನು ಪ್ರದರ್ಶಿಸಿದ್ದಕ್ಕಾಗಿ ಕೇರಳ ಹೈಕೋರ್ಟ್‌ನ ಇಬ್ಬರು ಅಧಿಕಾರಿಗಳನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ಗಣರಾಜ್ಯೋತ್ಸವದಂದು ಹೈಕೋರ್ಟ್‌ನಲ್ಲಿ ಪ್ರದರ್ಶಿಸಲಾದ ಈ ನಾಟಕವು ಭಾರತ ಸರ್ಕಾರ ಮತ್ತು ದೇಶಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ದೂರಿಗೆ ಕಾರಣವಾಯಿತು. ಸಹಾಯಕ ರಿಜಿಸ್ಟ್ರಾರ್ ಸುಧೀಶ ಟಿ.ಎ. ಮತ್ತು ಕೋರ್ಟ್ ಕೀಪರ್ … Continued

ಮಾತುಕತೆಗಳ ನಂತರವೇ ಹಿಟ್-ಅಂಡ್-ರನ್ ಕಾನೂನು ಜಾರಿಗೆ ನಿರ್ಧಾರ : ದೇಶಾದ್ಯಂತ ಮುಷ್ಕರ ಹಿಂಪಡೆದ ಟ್ರಕ್‌ ಚಾಲಕರು

ನವದೆಹಲಿ : ಹಿಟ್‌ ಅಂಡ್‌ ರನ್‌ ವಿರುದ್ಧ ಕಾನೂನನ್ನು ಜಾರಿಗೊಳಿಸುವ ಮೊದಲು ಮಧ್ಯಸ್ಥಗಾರರ ಜತೆ ಸಮಾಲೋಚನೆ ನಡೆಸುವುದಾಗಿ ಸರ್ಕಾರ ಭರವಸೆ ನೀಡಿದ ನಂತರ ದೇಶಾದ್ಯಂತ ಟ್ರಕ್‌ ಚಾಲಕರ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದ ಜೊತೆ ಸುದೀರ್ಘ ಮಾತುಕತೆಯ ನಂತರ, ಅಖಿಲ ಭಾರತ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಮುಷ್ಕರವನ್ನು ಹಿಂಪಡೆಯಿತು. “ನಾವು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ … Continued

ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್ ನನ್ನು ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ನನ್ನು ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿದೆ. ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಶನಲ್‌ನೊಂದಿಗೆ ಗೋಲ್ಡಿ ಬ್ರಾರ್ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ ಹೊರಡಿಸಿದ ನೋಟಿಸ್ ತಿಳಿಸಿದೆ. ಗೋಲ್ಡಿ ಬ್ರಾರ್ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಮತ್ತು … Continued

ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಅಸ್ಸಾಂ ಪ್ರತ್ಯೇಕತಾವಾದಿ ಗುಂಪು ಉಲ್ಫಾ-ಕೇಂದ್ರ ಸರ್ಕಾರ ಸಹಿ

ನವದೆಹಲಿ: ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) ನಡುವಿನ ತ್ರಿಪಕ್ಷೀಯ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ದೆಹಲಿಯಲ್ಲಿ ಸಹಿ ಹಾಕಲಾಯಿತು. ಆ ಮೂಲಕ ಭಾರತದ ಈಶಾನ್ಯ ಪ್ರದೇಶದಲ್ಲಿನ ಅತಿದೊಡ್ಡ ದಂಗೆಕೋರ ಗುಂಪುಗಳ ಶಸ್ತ್ರಸಜ್ಜಿತ ಹೋರಾಟಕ್ಕೆ ತೆರೆ ಬಿದ್ದಿದೆ. ಶಾಂತಿ ಒಪ್ಪಂದಗಳಿಗೆ ಸಹಿ ಹಾಕಿದ ನಂತರ ಅಮಿತ್ ಶಾ ಅವರು, “ಇಂದು … Continued

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು: ಕೇಂದ್ರ ಸರ್ಕಾರದ ಆದೇಶ ಎತ್ತಿ ಹಿಡಿದ ಸುಪ್ರೀಂಕೋರ್ಟ್ ಸಂವಿಧಾನ ಪೀಠ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ. ‘ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ’ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠ ಹೇಳಿದೆ. ಆರ್ಟಿಕಲ್ 370 … Continued

ಅಕ್ಟೋಬರ್ 2025 ರಿಂದ ಟ್ರಕ್ ಕ್ಯಾಬಿನ್ ಗೆ ಎಸಿ ಅಳವಡಿಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರ ಅಕ್ಟೋಬರ್ 2025 ರಿಂದ ಜಾರಿಗೆ ಬರುವಂತೆ ಎಲ್ಲಾ ಹೊಸ ಲಾರಿಗಳಿಗೆ ಕ್ಯಾಬಿನ್ ಗೆ ಹವಾನಿಯಂತ್ರಕ (AC) ಅಳವಡಿಕೆಯನ್ನು ಕಡ್ಡಾಯಗೊಳಿಸಿದೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹವಾನಿಯಂತ್ರಿತ ಟ್ರಕ್ ಕ್ಯಾಬಿನ್‌ಗಳನ್ನು ಕಡ್ಡಾಯಗೊಳಿಸಲು ಅಧಿಸೂಚನೆ ಹೊರಡಿಸಿರುವುದರಿಂದ ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ಗಳು ತಮ್ಮ ಚಾಲಕರಿಗೆ … Continued

ಐತಿಹಾಸಿಕ ಮೈಲಿಗಲ್ಲು…: ಕೇಂದ್ರದ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಅತ್ಯಂತ ಹಳೆಯ ಸಶಸ್ತ್ರ ಗುಂಪು ಯು ಎನ್‌ ಎಲ್‌ ಎಫ್‌

ನವದೆಹಲಿ: ಐತಿಹಾಸಿಕ ಬೆಳವಣಿಗೆಯಲ್ಲಿ, ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರವು ಬುಧವಾರ ನವದೆಹಲಿಯಲ್ಲಿ ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ಜೊತೆ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಶಾಂತಿ ಒಪ್ಪಂದವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು … Continued