ವಿಡಿಯೊ : ಕೊಂಬಿನಿಂದ ಪ್ರವಾಸಿಗನನ್ನು 8 ಅಡಿ ಎತ್ತರಕ್ಕೆ ಎಸೆದ ಬೃಹತ್‌ ಬೈಸನ್‌ ; ಗಂಭೀರ ಗಾಯ

ವಾಷಿಂಗ್ಟನ್ : ಅಮೆರಿಕದ ಯೆಲ್ಲೋಸ್ಟೋನ್ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಸಂಜೆ ನಡೆದ ಭೀಕರ ಘಟನೆಯಲ್ಲಿ, ಕಾಡುಕೋಣ (ಬೈಸನ್) ದಾಳಿಗೆ ಒಳಗಾದ ಪ್ರವಾಸಿಗರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಫಿಶಿಂಗ್ ಬ್ರಿಡ್ಜ್‌ನ ದಕ್ಷಿಣ ಭಾಗದಲ್ಲಿರುವ ಬ್ರಿಡ್ಜ್ ಬೇ ಕ್ಯಾಂಪ್‌ಗ್ರೌಂಡ್ ಪ್ರದೇಶದಲ್ಲಿ ನಡೆದಿದೆ. ಘಟನೆಗೂ ಮುನ್ನವೇ ಅದೇ ಬೈಸನ್ ಜನರು ಹಾಗೂ ವಾಹನಗಳ ಮೇಲೆ … Continued

ವಿಡಿಯೋ | ಬೆಂಗಳೂರು : ಹೆಲ್ಮೆಟ್ ಇಲ್ಲದೆ ಹೋಗುತ್ತಿದ್ದ ಬೈಕ್ ಸವಾರನ ತಲೆ ಮೇಲೆ ಬಿದ್ದ ಮರದ ಕೊಂಬೆ ; ಗಂಭೀರ ಗಾಯ

ಬೆಂಗಳೂರು: ಮಹಾನಗರದ ರಾಜಾಜಿನಗರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ, ರಸ್ತೆಯ ಬದಿಯ ಒಣ ಮರದ ಬೃಹತ್ ಕೊಂಬೆಯೊಂದು ಬೈಕ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ 52 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ನಡೆದಿದೆಎಂದು ಹೇಳಲಾಗಿದೆ. ಈ ಘಟನೆ ರಾಮಮಂದಿರ ರಸ್ತೆಯಲ್ಲಿ ನಡೆದಿದ್ದು, ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ … Continued

ಮಡಿಕೇರಿ : ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ ; ಗಾಯಗೊಂಡಿದ್ದ ‘ಮಾರ್ತಾಂಡ’ ಸಾವು

ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ (Dubare Elephant Camp) ಕಂಜನ್ (Kanjan) ಮತ್ತು ಮಾರ್ತಾಂಡ ಆನೆಗಳ (Marthanda Elephant) ನಡುವೆ ಸೋಮವಾರ ನಡೆದ ಕಾದಾಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು, ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಸೋಮವಾರ ಸ್ನಾತ ಮಾಡಿಸುತ್ತಿದ್ದಾಗ ಕಂಜನ್ ಎಂಬ ಆನೆಯು ಏಕಾಏಕಿ ಮಾರ್ತಾಂಡ ಆನೆ ಮೇಲೆ ನಡೆಸಿದ … Continued

ಜೊಯಿಡಾ ; ಕರಡಿ ದಾಳಿಯಿಂದ ವೃದ್ಧನಿಗೆ ಗಂಭೀರ ಗಾಯ

ಕಾರವಾರ : ಮೇಯಲು ಬಿಟ್ಟಿದ್ದ ಎಮ್ಮೆಗಳನ್ನು ಕರೆದುಕೊಂಡು ವಾಪಸ್‌ ಬರುತ್ತಿದ್ದಾಗ ವೃದ್ಧನ ಮೇಲೆ ಕರಡಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಕೋಳಗದ್ದದಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ವೃದ್ಧನನ್ನು ಕೋಳಗದ್ದ ಗ್ರಾಮದ ನಿವಾಸಿ ವಿಠೋ ಪಾಟೀಲ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡಂಚಿನಲ್ಲಿ ಮೇಯಲು … Continued

ಜೊಯಿಡಾ ; ವೃದ್ಧೆ ಮೇಲೆ ಚಿರತೆ ದಾಳಿ

ಕಾರವಾರ : ಮುಂಜಾನೆ ಶೌಚಕ್ಕೆಂದು ಹೊರಬಂದ ವೃದ್ಧೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಪಣಸೋಲಿ ವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. 70 ವರ್ಷದ ವೃದ್ಧೆ ಸುಶೀಲಾ ದೇಸಾಯಿ ಪ್ರತಿರೋಧ ತೋರಿ ಪಾರಾಗಿ ಬಂದಿದ್ದಾರೆ ಎಂದು ಹೇಳಲಾಗಿದೆ. ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದ ನಿವಾಸಿ ಸುಶೀಲಾ … Continued

ಗದಗ : ಜಾತ್ರೆಯಲ್ಲಿ ಅವಘಡ ; ಬ್ರೇಕ್ ಡ್ಯಾನ್ಸ್ ತೊಟ್ಟಿಲು ಮುರಿದುಬಿದ್ದು ಹಲವರಿಗೆ ಗಾಯ

ಗದಗ : ನಗರದ ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿನ  ಬ್ರೇಕ್ ಡ್ಯಾನ್ಸ್  ತೊಟ್ಟಿಲು ಕಟ್ ಆಗಿ ಕೆಳಗೆ ಬಿದ್ದಿದ್ದು, ಹಲವರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಭಾನುವಾರ ರಾತ್ರಿ 9ರ ಸುಮಾರಿಗೆ ನಡೆದಿದೆ ಎನ್ನಲಾಗಿದ್ದು, ಜಾತ್ರೆಯಲ್ಲಿ ಡ್ಯಾನ್ಸಿಂಗ್ ಫ್ಲೈ ತೊಟ್ಟಿಲಿನಲ್ಲಿ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಸದ್ದು ಕೇಳಿದೆ. … Continued

ದಾಂಡೇಲಿ : ಕಾಳಿ ನದಿಯಲ್ಲಿ ವ್ಯಕ್ತಿ ಮೇಲೆ ಮೊಸಳೆ ದಾಳಿ ; ಗಂಭೀರ ಗಾಯ

ಕಾರವಾರ : ಕಾಳಿನದಿಗೆ ಇಳಿದಿದ್ದ ವ್ಯಕ್ತಿಯೊಬ್ಬನ ಮೇಲೆ ಮೊಸಳೆಯೊಂದು ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ದಾಂಡೇಲಿಯ ಕುಳಗಿ ರಸ್ತೆಯ ನಿವಾಸಿ ಆನಂದ (42) ಎಂದು ಹೇಳಲಾಗಿದೆ. ಶೌಚಕ್ಕೆ ಕಾಳಿ ನದಿಗೆ ಹೋದಾಗ ಮೊಸಳೆಯೊಂದು ಏಕಾಏಕಿ ದಾಳಿ ನಡೆಸಿ, ಹೊತ್ತೊಯ್ಯಲು ಮುಂದಾಗಿದೆ. ಮೊಸಳೆಯ … Continued

ಶಿರಸಿ : ಎರಡು ಬಸ್‌ಗಳ ನಡುವೆ ಡಿಕ್ಕಿ ; ಹಲವರಿಗೆ ಗಾಯ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯಲ್ಲಿ ಕೊಳಗಿಬೀಸ್ ಬಳಿ ಎರಡು ಬಸ್‌ಗಳ ನಡುವೆ ಶುಕ್ರವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಭಟ್ಕಳದಿಂದ ಹುಬ್ಬಳ್ಳಿ ಮಾರ್ಗವಾಗಿ ಮುದ್ದೆಬಿಹಾಳಕ್ಕೆ ಹೋಗುತ್ತಿದ್ದ ಎನ್‌ಡಬ್ಲ್ಯುಕೆಆರ್‌ಟಿಸಿ ಬಸ್‌ ಮತ್ತು ಶಿರಸಿ ಕಡೆಯಿಂದ ಹೋಗುತ್ತಿದ್ದ ಖಾಸಗಿ ಬಸ್‌ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ … Continued

ಭದ್ರಾವತಿ : ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌ ; 30ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ :ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಹಳ್ಳದಲ್ಲಿ ಬಿದ್ದು ೩೦ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಂದು ವೀರಪುರ ಗ್ರಾಮದ ಕಾಗೆಹಳ್ಳ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಸ್ಸು ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆಗೆ (Railing) ಡಿಕ್ಕಿ ಹೊಡೆದು ನಂತರ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ. 10ಕ್ಕೂ … Continued

ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ: 25ಕ್ಕೂ ಹೆಚ್ಚು ಮಂದಿಗೆ ಗಾಯ

ದಾವಣಗೆರೆ: ರಂಜಾನ್ ಹಬ್ಬದ ಹಿನ್ನೆಲೆ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಹೆಜ್ಜೇನು ದಾಳಿ ನಡೆಸಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಶನಿವಾರ ಆನಗೋಡು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆನಗೋಡು ಗ್ರಾಮದ ಈದ್ಗಾ ಮೈದಾನದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನುಗಳ ಗುಂಪು ದಾಳಿ ನಡೆಸಿದೆ. ಇದರಿಂದ ಪ್ರಾರ್ಥನೆಗೆ … Continued