ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಬಾನ್ಸುರಿ ಸ್ವರಾಜ್‌ ಕಣ್ಣಿಗೆ ಗಾಯ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ನವದೆಹಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರದ ಮಾಜಿ ಸಚಿವೆ ಬಾನ್ಸುರಿ ಸ್ವರಾಜ್‌ ಅವರ ಕಣ್ಣಿಗೆ ಗಾಯವಾಗಿದೆ. ಪ್ರಚಾರದ ವೇಳೆ ಎಡಗಣ್ಣಿಗೆ ಗಾಯವಾಗಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ವೈದ್ಯರ ಬಳಿ ತೆರಳಿ ಒಂದು ಕಣ್ಣಿಗೆ ಬ್ಯಾಂಡೇಜ್‌ ಹಾಕಿಕೊಂಡಿರುವ ಪೋಟೊ ಶೇರ್‌ ಮಾಡಿಕೊಂಡಿರುವ ಬಾನ್ಸುರಿ ಸ್ವರಾಜ್‌, ‘ಪ್ರಚಾರದ … Continued

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಾರೀ ಅಗ್ನಿಅವಘಡ : 14 ಅರ್ಚಕರಿಗೆ ಗಾಯ

ಉಜ್ಜಯಿನಿ : ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 14 ಅರ್ಚಕರಿಗೆ ಗಾಯವಾಗಿದೆ. ಆವರಣದಲ್ಲಿ ಹೋಳಿ ಆಚರಣೆಯ ನಡುವೆ ಮುಂಜಾನೆ ‘ಭಸ್ಮ ಆರತಿ’ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೇವಾಲಯದ ಗರ್ಭಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಜ್ಜಯಿನಿ ಜಿಲ್ಲಧಿಕಾರಿ ನೀರಜಕುಮಾರ ಸಿಂಗ್ ಹೇಳಿದ್ದಾರೆ. “14 ಪುರೋಹಿತರಿಗೆ … Continued

ಮಮತಾ ಬ್ಯಾನರ್ಜಿ ಹಣೆಗೆ ದೊಡ್ಡ ಗಾಯ : ಹೊಲಿಗೆ ಹಾಕಿದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯಲ್ಲಿ ಬಿದ್ದ ಪರಿಣಾಮ ಅವರ ಹಣೆಗೆ ದೊಡ್ಡ ಗಾಯವಾಗಿದೆ. ಅವರ ಹಣೆಗೆ ಹೊಲಿಗೆ ಹೊಲಿಗೆ ಹಾಕಿದ್ದು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಗತ್ಯ ಪರೀಕ್ಷೆಗಳನ್ನು ನಡೆಸಿದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಕುಟುಂಬ ಸದಸ್ಯರು … Continued

ಬೆಂಗಳೂರು: ಹಾಡಹಗಲೇ ಚಿನ್ನಾಭರಣ ಅಂಗಡಿಗೆ ನುಗ್ಗಿ ಗುಂಡಿನ ದಾಳಿ, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ಚಿನ್ನಾಭರಣ ಮಳಿಗೆಯೊಂದರ ದರೋಡೆ ಮಾಡುವ ಯತ್ನ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರು ನಗರದ ಕೊಡಿಗೇ ಹಳ್ಳಿಯಲ್ಲಿರುವ ಜ್ಯುವೆಲ್ಲರಿ ಮಳಿಗೆಗೆ ಗುರುವಾರ ಮಧ್ಯಾಹ್ನ ನುಗ್ಗಿದ ದರೋಡೆಕೋರರು ಗುಂಡು ಹಾರಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಆತಂಕ ಸೃಷ್ಟಿಸಿದರು. ಮಧ್ಯಾಹ್ನದ ಹೊತ್ತಲ್ಲಿ ಚಿನ್ನಾಭರಣ ಮಳಿಗೆಗೆ ನುಗ್ಗಿದ ದರೋಡೆಕೋರರು ಮಳಿಗೆಯ ಮಾಲೀಕರು ಹಾಗೂ ನೌಕರರನ್ನು ಬೆದರಿಸಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು ನಗರದ ಜನಪ್ರಿಯ ಉಪಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಯುಎಪಿಎ (UAPA) ಕಾಯ್ದೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಮಧ್ಯಾಹ್ನ 1ರ ಸುಮಾರಿಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಸ್ಫೋಟದಿಂದ ಹೋಟೆಲ್ ಸಿಬ್ಬಂದಿ, ಗ್ರಾಹಕರು ಸೇರಿ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. … Continued

ವೀಡಿಯೊ..| ಪೊಲೀಸರ ಜೊತೆ ಘರ್ಷಣೆಯಲ್ಲಿ ಗಾಯಗೊಂಡ ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ : ಆಸ್ಪತ್ರೆಗೆ ದಾಖಲು

ಕೋಲ್ಕತ್ತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ನಂತರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರಿಂದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ ಅವರು ಗಾಯಗೊಂಡಿದ್ದಾರೆ. ಮಜುಂದಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ವರದಿಯಾಗಿದೆ. ವರದಿಯ ಪ್ರಕಾರ, ಪೊಲೀಸ್ ಸಿಬ್ಬಂದಿ ಮಜುಂದಾರ್ ಅವರನ್ನು ಅವರನ್ನು ಅವರಿದ್ದ ಹೋಟೆಲ್‌ಗೆ ಕರೆದುಕೊಂಡು … Continued

ಶೂಟಿಂಗ್​ ವೇಳೆ ನಟ ಉಪೇಂದ್ರ ತಲೆಗೆ ಪೆಟ್ಟು

ಬೆಂಗಳೂರು: ಬಹುನಿರೀಕ್ಷಿತ ಕಬ್ಜ ಸಿನಿಮಾದ ಶೂಟಿಂಗ್​ ಸಮಯದಲ್ಲಿ ನಟ ಉಪೇಂದ್ರ ತಲೆಗೆ ಪೆಟ್ಟಾಗಿದೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ ಫೈಟಿಂಗ್​ ದೃಶ್ಯವನ್ನು ಚಿತ್ರೀಕರಿಸುವ ಸಂದರ್ಭದಲ್ಲಿ ನಟ ಉಪೇಂದ್ರ ಗಾಯಗೊಂಡಿದ್ದಾರೆ. ಖ್ಯಾತ ನಿರ್ದೇಶಕ ಆರ್​. ಚಂದ್ರು ‘ಕಬ್ಜ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಕನ್ನಡವಲ್ಲದೆ ಬಹುಭಾಷೆಯಲ್ಲಿ ನಿರ್ಮಾಣ ಆಗುತ್ತಿದೆ. ಈ ಚಿತ್ರದಲ್ಲಿ ಸಾಹಸ ದೃಶ್ಯಗಳು ಇವೆ. ಅದಕ್ಕಾಗಿ ಹಲವು ಬಗೆಯ ಸೆಟ್​ಗಳನ್ನು … Continued

ಮಮತಾಗೆ ಗಾಯ: ದಾಳಿ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿದೆ ಎಂಬ ವರದಿಯನ್ನು ಭಾರತದ ಚುನಾವಣಾ ಆಯೋಗವು ತಳ್ಳಿಹಾಕಿದೆ. ಆಯೋಗ ನೇಮಕ ಮಾಡಿದ್ದ ಪಶ್ಚಿಮ ಬಂಗಾಳದ ಚುನಾವಣಾ ವೀಕ್ಷಕರು ಮತ್ತು ಮುಖ್ಯ ಕಾರ್ಯದರ್ಶಿಯ ವರದಿ ಆಧರಿಸಿ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ. ಬುಧವಾರ ಸಂಜೆ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ … Continued

ಆಸ್ಪತ್ರೆಯಿಂದ ವೀಲ್‌ಚೇರ್‌ನಲ್ಲಿಯೇ ಹೊರಬಂದ ಮಮತಾ

ಕೊಲ್ಕತ್ತಾ: ಎರಡು ದಿನಗಳ ಹಿಂದೆ ನಂದಿಗ್ರಾಮದಲ್ಲಿ ಗಾಯಗೊಂಡು ಎಸ್‌ಎಸ್ ಕೆಎಂ ಆಸ್ಪತ್ರೆಗೆ ದಾಖಲಾಗಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ವೀಲ್ ಚೇರ್ ನಲ್ಲಿಯೇಅವರು ಹೊರ ಬಂದಿದ್ದಾರೆ. ಮಮತಾ ಬ್ಯಾನರ್ಜಿ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಕಳೆದ ಬುಧವಾರ ನಂದಿಗ್ರಾಮದಲ್ಲಿ ನಡೆದ … Continued

ಪಶ್ಚಿಮ ಬಂಗಾಳ: ಟಿಎಂಸಿ-ಬಿಜೆಪಿ ಘರ್ಷಣೆ, ಬಾಂಬ್‌ ದಾಳಿಗೆ ೬ ಗಾಯ

ಕೊಲ್ಕತ್ತಾ:  ಶುಕ್ರವಾರ ರಾತ್ರಿ, ಗೋಸಾಬಾ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗೆ ಸಾಕ್ಷಿಯಾಗಿದ್ದು, ಪರಸ್ಪರ ಬಾಂಬ್‌ಗಳನ್ನು ಎಸೆದ ಪರಿಣಾಮ ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಕ್ಯಾನಿಂಗ್ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಬಾಂಬ್ ಸ್ಕ್ವಾಡ್ ಮತ್ತು … Continued