ದಾಳಿ ಮಾಡಿದ್ದಕ್ಕೆ ನೆರೆಯ ರಾಷ್ಟ್ರಗಳ ಕ್ಷಮೆ ಕೇಳಿದ ಇರಾನ್ ಅಧ್ಯಕ್ಷ ; ಆದರೆ ಒಂದು ಷರತ್ತು….

ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಸಮಯದಲ್ಲಿ ನಡೆಸಲಾದ ದಾಳಿಗಳಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ತಮ್ಮ ನೆರೆಹೊರೆಯ ರಾಷ್ಟ್ರಗಳ ಕ್ಷಮೆಯಾಚಿಸಿದ್ದಾರೆ. “ಅವರು ಮೊದಲು ದಾಳಿ ಮಾಡದ ಹೊರತು ಅಥವಾ ಅವರ ನೆಲದಿಂದ ದಾಳಿ ನಡೆಯದ ಹೊರತು ಇರಾನ್‌ ಯಾವುದೇ ದಾಳಿ ನಡೆಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ಸರ್ಕಾರಿ ಸ್ವಾಮ್ಯದ ಟಿವಿಯಲ್ಲಿ ಮಾತನಾಡಿದ … Continued

ಭಾರತಕ್ಕೆ ತೈಲದ ಭರವಸೆ ? ಹಾರ್ಮುಜ್ ಜಲಸಂಧಿ ಮಾರ್ಗ ಕೇವಲ ಅಮೆರಿಕ, ಇಸ್ರೇಲ್, ಯುರೋಪ್‌ಗೆ ಮಾತ್ರ ಬಂದ್ ಎಂದ ಇರಾನ್

ನವದೆಹಲಿ: ಹಾರ್ಮುಜ್ ಜಲಸಂಧಿಯನ್ನು (Strait of Hormuz) ಅಮೆರಿಕ, ಇಸ್ರೇಲ್, ಯುರೋಪ್ ಮತ್ತು ಅಮೆರಿಕದ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳ ಹಡಗುಗಳಿಗೆ ಮಾತ್ರ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರಕಟಿಸಿದೆ. ಇರಾನ್‌ನ ಸರ್ಕಾರಿ ಪ್ರಸಾರ ಸಂಸ್ಥೆ ಐಆರ್‌ಐಬಿ (IRIB) ಮೂಲಕ ಗುರುವಾರ ಈ ಪ್ರಕಟಣೆ ಹೊರಬಿದ್ದಿದೆ. ಗಲ್ಫ್ ಪ್ರದೇಶದಲ್ಲಿ ಸಂಘರ್ಷ ಆರಂಭವಾದಾಗಿನಿಂದ … Continued

ವೀಡಿಯೊ | ಭಾರತದಿಂದ ವಾಪಸಾಗುತ್ತಿದ್ದ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ಜಲಾಂತರ್ಗಾಮಿ ದಾಳಿ : 87 ಸಿಬ್ಬಂದಿ ಸಾವು

ವಾಷಿಂಗ್ಟನ್/ಗಾಲೆ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿದೆ. ಅಂತಾರಾಷ್ಟ್ರೀಯ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದ ಇರಾನ್‌ನ ಯುದ್ಧನೌಕೆಯನ್ನು ಅಮೆರಿಕದ ಜಲಾಂತರ್ಗಾಮಿ ನೌಕೆಯು ಟಾರ್ಪಿಡೊ (Torpedo) ಬಳಸಿ ಹೊಡೆದುರುಳಿಸಿದೆ. ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, “ಎರಡನೇ ಮಹಾಯುದ್ಧದ ನಂತರ ಶತ್ರು ದೇಶದ ಹಡಗನ್ನು ಟಾರ್ಪಿಡೊ ಮೂಲಕ ಮುಳುಗಿಸಿದ … Continued

ಇರಾನ್‌ ಯುದ್ಧ : ತೈಲ ಬಿಕ್ಕಟ್ಟಿನ ನಡುವೆ ಭಾರತಕ್ಕೆ ಕಚ್ಚಾ ತೈಲ ಕಳುಹಿಸುವ ಭರವಸೆ ನೀಡಿದ ರಷ್ಯಾ

 ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಉಂಟಾಗುವ ಹೆಚ್ಚುತ್ತಿರುವ ಪೂರೈಕೆ  ಬಗ್ಗೆ ಭಾರತಕ್ಕೆ ಆಗುವ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ರಷ್ಯಾವು ಸುಮಾರು 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಭಾರತಕ್ಕೆ ರವಾನಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.  ಪ್ರಮುಖ ಸಮುದ್ರ ಮಾರ್ಗಗಳ ಮೇಲೆ, ವಿಶೇಷವಾಗಿ ಹಾರ್ಮುಜ್ ಜಲಸಂಧಿಯ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಂಘರ್ಷದ ಭಯದಿಂದ … Continued

ಇರಾನ್‌ ಯುದ್ಧ : ಅಮೆರಿಕನ್ ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ ದಾಖಲೆಯ ಕುಸಿತ

ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆಯಲ್ಲಿನ ಭಾರಿ ಏರಿಕೆಯಿಂದಾಗಿ ಬುಧವಾರ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಭಾರಿ ಕುಸಿತ ಕಂಡಿದೆ. ಮೊದಲ ಬಾರಿಗೆ ರೂಪಾಯಿ ಮೌಲ್ಯವು ₹92 ರ ಗಡಿ ದಾಟಿದ್ದು, ಬೆಳಿಗ್ಗೆ 10:40ರ ಸುಮಾರಿಗೆ ₹92.17 ಕ್ಕೆ ತಲುಪಿತ್ತು. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ … Continued

ಇರಾನಿನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ನೇಮಕ : ವರದಿ

ತೆಹ್ರಾನ್: ಇಸ್ರೇಲ್ ಮತ್ತು ಅಮೆರಿಕಾದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತರಾದ ಬೆನ್ನಲ್ಲೇ, ಅವರ ಪುತ್ರ ಮೊಜ್ತಬಾ ಹೊಸೈನಿ ಖಮೇನಿ ಅವರು ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ದಶಕಗಳ ಕಾಲ ತೆರೆಯ ಮರೆಯಲ್ಲಿದ್ದುಕೊಂಡು ದೇಶದ ರಾಜಕೀಯ ಗತಿವಿಧಿಗಳನ್ನು ನಿಯಂತ್ರಿಸುತ್ತಿದ್ದ ಮೊಜ್ತಬಾ ಅವರನ್ನು ಈಗ ಇರಾನ್‌ನ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ … Continued