ನಿರ್ದೇಶಕ ರಾಜ ನಿಡಿಮೋರು ಜೊತೆಗೆ ಖ್ಯಾತ ನಟಿ ಸಮಂತಾ ವಿವಾಹ

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ಇಂದು (ಡಿಸೆಂಬರ್‌ 1) ಬೆಳಗ್ಗೆ ಕೋಯಂಬತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಿರ್ದೇಶಕ ರಾಜ ನಿಡಿಮೋರು ಅವರೊಂದಿಗೆ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ವಿವಾಹದ ದಿನಾಂಕವನ್ನು ಶೀರ್ಷಿಕೆಯನ್ನಾಗಿ ಬಳಸಿ, ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಸಮಾರಂಭದ ಸುಂದರ ಚಿತ್ರಗಳನ್ನು ನಟಿ ಹಂಚಿಕೊಂಡಿದ್ದಾರೆ. ಕೇಂದ್ರದ ಒಳಗಿರುವ ಲಿಂಗ … Continued

ಸದ್ಗುರು ಜಗ್ಗಿ ವಾಸುದೇವಗೆ ದೊಡ್ಡ ರಿಲೀಫ್‌ : ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಆಧ್ಯಾತ್ಮಿಕ ನಾಯಕ ಸದ್ಗುರು ಜಗ್ಗಿ ವಾಸುದೇವ ಅವರ ಆಶ್ರಮ ಸೇರುವಂತೆ ತನ್ನ ಇಬ್ಬರು ಹೆಣ್ಣುಮಕ್ಕಳನ್ನು “ಬ್ರೇನ್‌ ವಾಶ್‌” ಮಾಡಿ ಅವರನ್ನು ಬಲವಂತವಾಗಿ ಬಂಧಿಸಿ ಇರಿಸಲಾಗಿದೆ ಎಂದು ವ್ಯಕ್ತಿಯೊಬ್ಬರು ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ದೂರಿನ ಅಡಿಯಲ್ಲಿ ನಡೆಯುತ್ತಿದ್ದ ಎಲ್ಲ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ … Continued

ದೆಹಲಿ ಆಸ್ಪತ್ರೆಯಲ್ಲಿ ಮಿದುಳಿನ ರಕ್ತಸ್ರಾವಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು

ನವದೆಹಲಿ : ಸದ್ಗುರು ಜಗ್ಗಿ ವಾಸುದೇವ ಅವರು ಮೆದುಳು ರಕ್ತಸ್ರಾವದಿಂದಾಗಿ ದೆಹಲಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಇಶಾ ಫೌಂಡೇಶನ್ ಹೇಳಿಕೆಯಲ್ಲಿ ತಿಳಿಸಿದೆ. 66 ವರ್ಅಷದ ಸದ್ಗುರು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು “ನಿರೀಕ್ಷೆ ಮೀರಿ” ಸುಧಾರಿಸುತ್ತಿದ್ದಾರೆ ಎಂದು ಅದು ಹೇಳಿದೆ. “ಅಪೋಲೋ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನನ್ನೋ ಹುಡುಕಲು ಪ್ರಯತ್ನಿಸಿದರು. … Continued

ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ: ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್‌

ಬೆಂಗಳೂರು : ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಅವಲಗುರ್ಕಿಯಲ್ಲಿ ಆದಿಯೋಗಿ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಸದೆ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್‌ ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ … Continued