ನಾಲ್ವರನ್ನು ಬಂಧಿಸಿದ ನಂತರ 54 ಇಸ್ಕಾನ್ ಸನ್ಯಾಸಿಗಳು ಭಾರತಕ್ಕೆ ಬರುವುದನ್ನು ತಡೆದ ಬಾಂಗ್ಲಾದೇಶ…!

ಢಾಕಾ : ಬಾಂಗ್ಲಾದೇಶವು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ನ ಕನಿಷ್ಠ 54 ಸದಸ್ಯರನ್ನು ಭಾರತಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ ಮತ್ತು ಬೆನಾಪೋಲ್ ಗಡಿ ಚೆಕ್ಪಾಯಿಂಟ್‌ನಿಂದ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ವಲಸೆ ಪೊಲೀಸರು “ಅನುಮಾನಾಸ್ಪದ ಪ್ರಯಾಣ” ಎಂದು ಉಲ್ಲೇಖಿಸಿ, ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರೂ ಅವರನ್ನು ಭಾರತಕ್ಕೆ ಪ್ರವೇಶಿದಂತೆ ನಿರ್ಬಂಧಿಸಿ ಹಿಂದಕ್ಕೆ … Continued

ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued

ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌

ಢಾಕಾ : ಬಾಂಗ್ಲಾದೇಶದ ಹೈಕೋರ್ಟ್ ಗುರುವಾರ ದೇಶದಲ್ಲಿ ಇಂಟರ್ನ್ಯಾಷನಲ್ ಸೊಸೈಟಿ ಆಫ್ ಕೃಷ್ಣ ಕಾನ್ಶಿಯಸ್ನೆಸ್ (ISKCON) ಚಟುವಟಿಕೆಗಳನ್ನು ನಿಷೇಧಿಸಲು ನಿರಾಕರಿಸಿದೆ. ಇದರಿಂದಾಗಿ ಇಸ್ಕಾನ್ ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿ ಎಂದು ಆರೋಪಿಸಿ ಇಸ್ಕಾನ್‌ ಸಂಸ್ಥೆಯನ್ನು ನಿಷೇಧಿಸಲು ಮುಂದಾಗಿದ್ದ ಬಾಂಗ್ಲಾದೇಶ ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಇಸ್ಕಾನ್ ಅನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ … Continued

ಇಸ್ಕಾನ್ ಮೂಲಭೂತವಾದಿ ಸಂಘಟನೆ : ನ್ಯಾಯಾಲಯಕ್ಕೆ ತಿಳಿಸಿದ ಬಾಂಗ್ಲಾದೇಶ ಸರ್ಕಾರ…!

ನವದೆಹಲಿ: ಬಾಂಗ್ಲಾದೇಶವು ಆ ದೇಶದ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಇಸ್ಕಾನ್ ಅನ್ನು “ಧಾರ್ಮಿಕ ಮೂಲಭೂತವಾದಿ” ಸಂಘಟನೆ ಎಂದು ಕರೆದಿದೆ. ಆಗಸ್ಟ್‌ನ ವಿದ್ಯಾರ್ಥಿಗಳ ನೇತೃತ್ವದ ದಂಗೆ ಆಗಿನ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಅಧಿಕಾರದಲ್ಲಿರುವ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ “ಇಸ್ಕಾನ್ ಬಗ್ಗೆ ಪರಿಶೀಲನೆ ನಡೆಸುತ್ತಿದೆ ” ಎಂದು ಹೇಳಿದರು. ಇದು ಸೋಮವಾರದಂದು ಹಿಂದೂ ಸ್ವಾಮೀಜಿ … Continued

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಸ್ಕಾನ್‌ ಸನ್ಯಾಸಿಯನ್ನು ಢಾಕಾದಲ್ಲಿ ಬಂಧಿಸಿದ ಆಡಳಿತ

ಕೋಲ್ಕತ್ತಾ: ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ವ್ಯಾಪಕ ರಾಜಕೀಯ ಹಿಂಸಾಚಾರವನ್ನು ಕಂಡಿರುವ ಬಾಂಗ್ಲಾದೇಶದಲ್ಲಿ ದೇಶದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಮೇಲಿನ ದಾಳಿ ನಡೆಯುತ್ತಿದೆ ಎಂಬ ಆರೋಪಗಳ ಮಧ್ಯೆ ಬಾಂಗ್ಲಾದೇಶದ ಹಿಂದೂ ಸಂನ್ಯಾಸಿ ಹಾಗೂ ಧಾರ್ಮಿಕ ಅಲ್ಪಸಂಖ್ಯಾತ ನಾಯಕ ಚಿನ್ಮಯ ಕೃಷ್ಣ ದಾಸ ಬ್ರಹ್ಮಚಾರಿ ಅವರನ್ನು ಢಾಕಾದಲ್ಲಿ ಬಂಧಿಸಲಾಗಿದೆ. ಢಾಕಾದಿಂದ ಉತ್ತರಕ್ಕೆ ಸುಮಾರು 300 … Continued

ವೀಡಿಯೊಗಳು…| ಬಾಂಗ್ಲಾದೇಶದಲ್ಲಿ ಹಿಂದೂ ಪ್ರತಿಭಟನಾಕಾರರ ಮೇಲೆ ಸೇನೆಯಿಂದ ಕಾರ್ಯಾಚರಣೆ, ಲಾಠಿ ಚಾರ್ಜ್‌

ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಮತ್ತು ಸನಾತನ ಧರ್ಮದ ವಿರುದ್ಧ ಮುಸ್ಲಿಂ ವ್ಯಾಪಾರಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಬಾಂಗ್ಲಾದೇಶದ ಭದ್ರತಾ ಪಡೆಗಳು ಚಿತ್ತಗಾಂಗ್‌ನಲ್ಲಿ ಹಿಂದೂಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿವೆ. ಇಸ್ಕಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆದಿರುವ ವ್ಯಾಪಾರಿ ಉಸ್ಮಾನ್ ಮೊಲ್ಲಾ ಅವರ ಫೇಸ್‌ಬುಕ್ ಪೋಸ್ಟ್ ನಂತರ … Continued

ಜಗನ್ನಾಥ ದೇವರ ‘ದೈವಿಕ ಕೃಪೆ’ಯಿಂದ ಡೊನಾಲ್ಡ್ ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ : ಇಸ್ಕಾನ್ ಉಪಾಧ್ಯಕ್ಷ

ನವದೆಹಲಿ: ಜಗನ್ನಾಥ ದೇವರ ದೈವಿಕ ಕೃಪೆಯಿಂದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಹೇಳಿದೆ. “ಇದು ದೈವಿಕ ಹಸ್ತಕ್ಷೇಪವಾಗಿದೆ. ಸರಿಯಾಗಿ 48 ವರ್ಷಗಳ ಹಿಂದೆ ಡೊನಾಲ್ಡ್ ಟ್ರಂಪ್ ಜಗನ್ನಾಥ ರಥಯಾತ್ರೆ ಉತ್ಸವ ನಡೆಯಲು ಸಹಾಯ ಮಾಡಿದ್ದರು. ಇಂದು … Continued