ಕಾಂಗ್ರೆಸ್ ಸಂಸದರ ನಿವೇಶನದ ಮೇಲೆ ನಡೆದ ದಾಳಿಯಲ್ಲಿ 176 ಬ್ಯಾಗ್ ನಗದು ವಶ : ₹353 ಕೋಟಿ ಎಣಿಕೆ… ಎಣಿಕೆ ಮುಂದುವರೆದಿದೆ….!

ನವದೆಹಲಿ: ನವದೆಹಲಿ: ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿಯಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸಂಬಂಧಿಸಿದ ನಿವೇಶನಗಳಿಂದ ವಶಪಡಿಸಿಕೊಂಡ ಹಣದ ಎಣಿಕೆಯನ್ನು ಭಾನುವಾರದೊಳಗೆ ಮುಗಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಡಿಸೆಂಬರ್ 6 ರಂದು ದಾಳಿಗಳು ಪ್ರಾರಂಭವಾಗಿದ್ದು, ಅಧಿಕಾರಿಗಳು ಒಟ್ಟು 176 ಬ್ಯಾಗ್‌ಗಳಲ್ಲಿ 140 ಬ್ಯಾಗ್‌ಗಳ ಎಣಿಕೆಯನ್ನು ಪೂರ್ಣಗೊಳಿಸಿದ್ದಾರೆ. ಅವರಿಗೆ ಸಂಬಂಧಿಸಿದ ನಿವೇಶನಗಳಲ್ಲಿ ಆದಾಯ ತೆರಿಗೆ … Continued

ತೆರಿಗೆ ದಾಳಿಯಲ್ಲಿ ದಾಖಲೆ ಪ್ರಮಾಣದ ನಗದು ಹಣ ವಶ : ತನ್ನ ಪಕ್ಷದ ಸಂಸದರಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್

ನವದೆಹಲಿ; ಆದಾಯ ತೆರಿಗೆ ಇಲಾಖೆಯು ಸುಮಾರು 300 ಕೋಟಿ ರೂಪಾಯಿಗಳಷ್ಟು ಲೆಕ್ಕಕ್ಕೆ ಸಿಗದ ಹಣವನ್ನು ವಶಪಡಿಸಿಕೊಂಡಿರುವ ವರದಿಯ ನಂತರ ಸಂಸದ ಧೀರಜ್ ಸಾಹು ಅವರ ವ್ಯವಹಾರಗಳ ಜೊತೆ ಪಕ್ಷ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಶನಿವಾರ ಹೇಳಿದ್ದಾರೆ. “ಅವರ ವ್ಯವಹಾರಗಳ ಮೇಲೆ ದಾಳಿಯ ಮೇಲೆ ಆದಾಯ ತೆರಿಗೆ … Continued

ಮಾಜಿ ಕಾರ್ಪೊರೇಟರ್ ಸಂಬಂಧಿ ಮನೆ ಮೇಲೆ ಐಟಿ ದಾಳಿ: 40 ಕೋಟಿ ರೂ. ಗಳಿಗೂ ಅಧಿಕ ಹಣ ಪತ್ತೆ

ಬೆಂಗಳೂರು : ಆರ್​ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಆತ್ಮಾನಂದ ಕಾಲೋನಿಯ ಮನೆಯೊಂದರ ಕೊಠಡಿಯಲ್ಲಿ ಮಂಚದಡಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆರ್​​.ಟಿ.ನಗರದ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ​​ ಅವರ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ ಐಟಿ … Continued

ಪಿಆರ್ ಕಂಪನಿ ಮೇಲೆ ಆದಾಯ ತೆರಿಗೆ ದಾಳಿ

ಬೆಂಗಳೂರು: ಪ್ರಮುಖ ರಾಜಕಾರಣಿಗಳ ಸಾಮಾಜಿಕ ಜಾಲತಾಣಗಳನ್ನು ನಿರ್ವಹಣೆ ಮಾಡುತ್ತಿದ್ದ ಕಂಪೆನಿಯೊಂದರ ಮೇಲೆ ಮಂಗಳವಾರ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ಯಾಲೇಸ್ ಗುಟ್ಟಳ್ಳಿಯಲ್ಲಿರುವ ಡಿಸೈನ್ ಬಾಕ್ಸ್ ಎಂಬ ಪಿಆರ್ ಕಂಪೆನಿಯ ಮೇಲೆ ಎಂಟು ಮಂದಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇದೇ ವೇಳೆ ಐವರು ಅಧಿಕಾರಿಗಳ … Continued

ಐಟಿ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಗೆ ಗೇಟ್ ಪಾಸ್ ನೀಡಿದ ಬೊಮ್ಮಾಯಿ

ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ … Continued

ತಮಿಳುನಾಡು: ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ಚೆನ್ನೈ, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಅಳಿಯನ ಮನೆ ಮೇಲೆ ಶುಕ್ರವಾರ (ಏ.೨)ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಬರೀಶನ್ ಒಡೆತನದ ನಾಲ್ಕು ಕಡೆಗಳಲ್ಲಿ ಬೆಳಗ್ಗೆಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ಮಾಡಲಾದ ಸ್ಥಳಗಳಲ್ಲಿ ನೀಲಂಗರೈನಲ್ಲಿರುವ ಮನೆಯು ಕೂಡ ಒಂದು. ಅಲ್ಲಿ ಸ್ಟಾಲಿನ್ ಪುತ್ರಿ ಹಾಗೂ ಆಕೆಯ ಪತಿ ಶಬರೀಶನ್ ಅವರೊಂದಿಗೆ ವಾಸವಾಗಿದ್ದಾರೆ. ಏಪ್ರಿಲ್ 6 ರಂದು … Continued

ಕಮಲ್‌ ಹಾಸನ್‌ ಪಕ್ಷದ ಖಜಾಂಚಿ ಮನೆಯಲ್ಲಿ ೮೦ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ: ಐಟಿ

ಚೆನ್ನೈ; ನಟ ಕಮಲ್‍ಹಾಸನ್ ಸ್ಥಾಪಿಸಿರುವ ಮಕ್ಕಳ ನೀಧಿ ಮಾಯಂ ಪಕ್ಷದ ಖಜಾಂಚಿ ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 11.50 ಕೋಟಿ ನಗದು ಸೇರಿದಂತೆ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಬುಧವಾರ ಮತ್ತು ಗುರುವಾರ ತಮಿಳುನಾಡಿನ ತ್ರಿಪುರಾ, ಧರ್ಮಾಪುರಂ, ಚೆನ್ನೈ ಸೇರಿದಂತೆ ಐದು ಜಾಗಗಳಲ್ಲಿ ಆದಾಯ … Continued

ಐಟಿ ಅಧಿಕಾರಿಗಳಿಗೆ ತಾಪ್ಸಿ ಪನ್ನು ಫೋನ್‌ ಡಾಟಾ ಅಳಿಸಿದ ಶಂಕೆ

ಗುರುವಾರ ನಡೆದ ಒಂದು ಪ್ರಮುಖ ಬೆಳವಣಿಗೆಯಲ್ಲಿ, ನಟಿ ತಾಪ್ಸೀ ಪನ್ನು ಅವರು ತಮ್ಮ ಫೋನ್‌ನಿಂದ ‘ಕೆಲವು ಡೇಟಾವನ್ನು’ ಅಳಿಸಿದ್ದಾರೆ ಎಂಬ ಶಂಕೆ ಇದೆಯೆಂದುಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಐಟಿ ಇಲಾಖೆ ಆಕೆಯ ಮನೆ ಮತ್ತು ಕಚೇರಿಯಲ್ಲಿ ದಾಳಿ ನಡೆಸಿದ ಒಂದು ದಿನದ ನಂತರ ಈ ಬೆಳವಣಿಗೆ ಸಂಭವಿಸಿದೆ. … Continued

ರೈತರ ಆಂದೋಲನಕ್ಕೆ ಧ್ವನಿಯಾಗುವವರ ವಿರುದ್ಧ ಐಟಿ ದಾಳಿ; ರಾಹುಲ್‌

ನವ ದೆಹಲಿ:ದೇಶದಲ್ಲಿ ನಡೆಯುತ್ತಿರುವ ರೈತರ ಆಂದೋಲನಕ್ಕೆ ಧ್ವನಿಗೂಡಿಸುವವರ ವಿರುದ್ಧ ಮೋದಿ ಸರ್ಕಾರ ದಾಳಿ ನಡೆಸಿ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗುರುವಾರ ಮೂರು ಖ್ಯಾತ ಹಿಂದಿ ಪದ್ಯಗಳ ಸಾಲುಗಳನ್ನು ಬಳಸುವ ಮೂಲಕ ಕೇಂದ್ರ ಸರ್ಕಾರವನ್ನು ಟೀಕಿಸಿದರು. ರೈತರ ಪರವಾಗಿರುವವರ ಮೇಲೆ ದಾಳಿ ನಡೆಸಿದ್ದಾರೆ … Continued

ಅನುರಾಗ್ ಕಶ್ಯಪ್, ನಟಿ ತಾಪ್ಸೀ ಪನ್ನು, ಇತರರ ಮೇಲೆ ೨ನೇ ದಿನವೂ ಮುಂದುವರಿದ ಐಟಿ ದಾಳಿ

  ಆದಾಯ ತೆರಿಗೆ ಇಲಾಖೆ (ಐಟಿ ಇಲಾಖೆ) ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್, ನಟಿ ತಾಪ್ಸೀ ಪನ್ನು ಮತ್ತು ಇತರರಿಗೆ ಸಂಬಂಧಿಸಿರುವ ಆಸ್ತಿಗಳ ಮೇಲೆ ದಾಳಿ ಎರಡನೇ (ಮಾ.೪) ದಿನವೂ ಮುಂದುವರಿಯಿತು. ಮುಂಬೈ, ಪುಣೆ ಮತ್ತು ಇತರ ಸ್ಥಳಗಳಲ್ಲಿ ಕಶ್ಯಪ್, ಪನ್ನು, ವಿಕಾಸ್ ಬಹ್ಲ್, ಚಲನಚಿತ್ರ ನಿರ್ಮಾಪಕ ಮಧು ಮಂಟೆನಾ ಮತ್ತು ಇತರರಿಗೆ ಸಂಬಂಧಿಸಿರುವ ಆಸ್ತಿಗಳ … Continued