ದೇಶಕ್ಕೆ ಅವಮಾನ : ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ‘ಶರ್ಟ್‌ಲೆಸ್’ ಪ್ರತಿಭಟನೆಗೆ ವಿಪಕ್ಷಗಳಿಂದಲೇ ಅಸಮಾಧಾನ

ನವದೆಹಲಿ/ಝಾನ್ಸಿ: ಭಾರತ ಮಂಟಪದಲ್ಲಿ ನಡೆದ ‘ಎಐ (AI) ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ ಭಾರತೀಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ  ಶರ್ಟ್‌ಲೆಸ್‌  ಪ್ರತಿಭಟನೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಇಂಡಿಯಾ (INDIA) ಮೈತ್ರಿಕೂಟದ ಮಿತ್ರ ಪಕ್ಷದ ನಾಯಕ ಅಖಿಲೇಶ ಯಾದವ್ ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ದೇಶಕ್ಕೆ “ಅವಮಾನ” ತಂದಿದೆ ಎಂದು ಅವರು ಶನಿವಾರ ಹೇಳಿದ್ದಾರೆ. ಝಾನ್ಸಿಯಲ್ಲಿ ಸುದ್ದಿಗಾರರೊಂದಿಗೆ … Continued

ಜಗನ್ ಮೋಹನ್ ರೆಡ್ಡಿ vs ವೈಎಸ್ ಶರ್ಮಿಳಾ | ಕುಟುಂಬದ ಒಡೆತನದ ಷೇರುಗಳ ವರ್ಗಾವಣೆ ; ಸಹೋದರಿ, ತಾಯಿ ವಿರುದ್ಧ ಎನ್‌ಸಿಎಲ್‌ಟಿಗೆ ಜಗನ್ ರೆಡ್ಡಿ ಮೊರೆ

ಹೈದರಾಬಾದ್‌ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಅವರ ಸಹೋದರಿ ವೈ.ಎಸ್. ಶರ್ಮಿಳಾ ನಡುವಿನ ಆಸ್ತಿ ಜಗಳ ಉಲ್ಬಣಗೊಂಡಿದ್ದು, ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಕುಟುಂಬದ ಒಡೆತನದ ಷೇರುಗಳ ವರ್ಗಾವಣೆಗೆ ಸಂಬಂಧಿಸಿದಂತೆ ತಮ್ಮ ಸಹೋದರಿ ಮತ್ತು ತಾಯಿ ವೈ.ಎಸ್. ವಿಜಯ ರಾಜಶೇಖರ ರೆಡ್ಡಿ ವಿರುದ್ಧ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ … Continued

ಕೊಲೆ ಯತ್ನ: ಆಂಧ್ರ ಮಾಜಿ ಸಿಎಂ ಜಗನ್ಮೋಹನ ರೆಡ್ಡಿ, ಇಬ್ಬರು ಐಪಿಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಗುಂಟೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಆಡಳಿತಾರೂಢ ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕೆ. ರಘುರಾಮ ಕೃಷ್ಣರಾಜು ಅವರು ತಮ್ಮ ವಿರುದ್ಧ ಕ್ರಿಮಿನಲ್ “ಸಂಚು” ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ನಂತರ‌ ಮಾಜಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ … Continued

ಸೇರಿದ 10 ದಿನಕ್ಕೇ ಜಗನ್ ರೆಡ್ಡಿ ವೈಎಸ್‌ಆರ್‌ಸಿಪಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರಿದ ಕೇವಲ ಎಂಟು ದಿನಗಳ ನಂತರ ಕ್ರಿಕೆಟಿಗ ಅಂಬಟಿ ರಾಯುಡು ಅವರು ಶನಿವಾರ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ರಾಯುಡು ಜೂನ್ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು ಮತ್ತು ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ರಾಯುಡು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, “ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು … Continued

ಆಂಧ್ರ ಸಿಎಂ ಜಗನ್ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ನವದೆಹಲಿ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಅವರು ಜನವರಿ 4 ರಂದು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ವೈ.ಎಸ್. ಶರ್ಮಿಳಾ ಅವರು ವೈ ಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕ ಅಧ್ಯಕ್ಷರೂ ಆಗಿದ್ದಾರೆ. ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ ರಾಷ್ಟ್ರ … Continued