ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ಬಂಧೂಕುಧಾರಿಗಳಿಂದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಬುರ್ಹಾನ್ ಹಮ್ಜಾ ಹತ್ಯೆ

ನವದೆಹಲಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ ಹಾಗೂ ನಿಷೇಧಿತ ‘ಅಲ್-ಬದ್ರ’ ಭಯೋತ್ಪಾದನಾ ಸಂಘಟನೆಯ ಉನ್ನತ ಕಾರ್ಯಾಚರಣೆ ಕಮಾಂಡರ್ ಅರ್ಜಮಂದ್‌ ಗುಲ್ಜಾರ್ ಅಲಿಯಾಸ್ ಬುರ್ಹಾನ್ ಹಮ್ಜಾನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ದ ಮುಜಾಫರಾಬಾದ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ. ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಅಪರಿಚಿತ ದುಷ್ಕರ್ಮಿಗಳು ನಡೆಸುತ್ತಿರುವ ಸರಣಿ ದಾಳಿಗಳಲ್ಲಿ ಇದು ಮತ್ತೊಂದು ಪ್ರಮುಖ ಘಟನೆಯಾಗಿದೆ. … Continued

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಯಾಟಲೈಟ್ ಸಾಧನ ಹೊಂದಿದ್ದ ಅಮೆರಿಕ ಪ್ರಜೆ ವಶಕ್ಕೆ

ನವದೆಹಲಿ: ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಡಿಕೆಯ ತಪಾಸಣೆಯ ವೇಳೆ, ನಿಷೇಧಿತ ಸ್ಯಾಟಲೈಟ್ ಟ್ರ್ಯಾಕಿಂಗ್ ಸಾಧನವನ್ನು (Satellite tracking device) ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಭದ್ರತಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ನಡೆದ ಕೂಡಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ಹೆಚ್ಚಿನ ತನಿಖೆಗಾಗಿ ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ. ವಶಕ್ಕೆ ಪಡೆದವರಲ್ಲಿ ಒಬ್ಬರನ್ನು ಅಮೆರಿಕದ … Continued

ವೀಡಿಯೊ | ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ : ಕರ್ನಾಟಕ ಆಟಗಾರನಿಗೆ ತಲೆಯಿಂದ ಡಿಚ್ಚಿ ಹೊಡೆದ ಜಮ್ಮು ತಂಡದ ನಾಯಕ

ಹುಬ್ಬಳ್ಳಿ: ಇಲ್ಲಿನ ಕೆ.ಎಸ್.ಸಿ.ಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಿನ 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನದಂದು ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಜಮ್ಮು-ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಅವರು ಕರ್ನಾಟಕದ ಫೀಲ್ಡರ್ ಕೆ.ವಿ. ಅನೀಶ್ ಅವರಿಗೆ ತಲೆಯಿಂದ ಡಿಚ್ಚಿ ಹೊಡೆದ (Headbutt) ಪ್ರಸಂಗ ನಡೆದಿದೆ. ಜಮ್ಮು-ಕಾಶ್ಮೀರ ಇನಿಂಗ್ಸ್‌ನ 101ನೇ … Continued

ಕಾಶ್ಮೀರ : ಗುಂಡು ತಗುಲಿದ್ರೂ ಧೈರ್ಯದಿಂದ ಮುನ್ನುಗ್ಗಿ ಮೂವರು ಉಗ್ರರನ್ನು ಕೊಲ್ಲಲು ಸೇನೆಗೆ ನೆರವಾದ ನಾಯಿ ಟೈಸನ್‌…!

ಕಿಶ್ತ್ವಾರ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದ ಛಾತ್ರು ಎಂಬ ದುರ್ಗಮ ಪ್ರದೇಶದ ಕಡಿದಾದ ಬೆಟ್ಟಗಳಲ್ಲಿ ಅಡಗಿದ್ದ ಉಗ್ರರನ್ನು ಸದೆಬಡಿಯಲು ಭಾರತೀಯ ಸೇನೆಯು ‘ಆಪರೇಷನ್ ಟ್ರಾಶಿ-1’ (Operation Trashi-I) ಎಂಬ ಬೃಹತ್ ಕಾರ್ಯಾಚರಣೆ ಕೈಗೊಂಡಿದ್ದು, ಈ ಕಾರ್ಯಾಚರಣೆಯಲ್ಲಿ ಜೀವದ ಹಂಗು ತೊರೆದು ಖತರ್ನಾಕ್‌ ಭಯೋತ್ಪಾದಕರು ಎಲ್ಲಿದ್ದಾರೆಂದು ಪತ್ತೆ ಹಚ್ಚಿ ಅವರ ಸಾವಿಗೆ ಕಾರಣವಾದ ಸೇನೆಯ ಹೆಮ್ಮೆಯ … Continued

ಜಮ್ಮು ಮತ್ತು ಕಾಶ್ಮೀರ | 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ ; 10 ಯೋಧರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ, ಕನಿಷ್ಠ 10 ಯೋಧರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂಬತ್ತು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಟಾಪ್ ಎಂಬಲ್ಲಿ ಈ ದುರಂತ ಸಂಭವಿಸಿದೆ. ಬುಲೆಟ್ ಪ್ರೂಫ್ ಸೇನಾ ವಾಹನವು ಒಟ್ಟು 17 ಸಿಬ್ಬಂದಿಯನ್ನು ಹೊತ್ತು … Continued

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನಿ ಡ್ರೋನ್‌ಗಳ ಮೇಲೆ ಸೇನೆಯಿಂದ ಗುಂಡಿನ ದಾಳಿ

ಶ್ರೀನಗರ/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನೌಶೇರಾ ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯ (LoC) ಬಳಿ ಭಾನುವಾರ ಸಂಜೆ ಭಾರತೀಯ ಸೇನೆಯು ಪಾಕಿಸ್ತಾನಿ ಡ್ರೋನ್‌ ಒಂದರ ಮೇಲೆ ಗುಂಡಿನ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಇನ್ನೂ ಹಲವಾರು ಡ್ರೋನ್‌ಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಕತ್ತಲ ಆಕಾಶದಲ್ಲಿ ಹಾರುತ್ತಿದ್ದ ಡ್ರೋನ್‌ ಅನ್ನು ಹೊಡೆದುರುಳಿಸಲು ಸೇನೆಯು … Continued

ಸಂಪೂರ್ಣ ಜಮ್ಮು-ಕಾಶ್ಮೀರ ಭಾರತದೊಂದಿಗೆ ಮರುಸೇರ್ಪಡೆಯಾಗಲಿ’: ಬ್ರಿಟಿಷ್ ಸಂಸದ

ಜೈಪುರ: ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಭಾರತದ ನಿಲುವಿಗೆ ತಮ್ಮ ದೀರ್ಘಕಾಲದ ಬೆಂಬಲವನ್ನು ಬ್ರಿಟಿಷ್ ಸಂಸದ ಬಾಬ್ ಬ್ಲ್ಯಾಕ್‌ಮನ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಸಂಪೂರ್ಣ ಜಮ್ಮು ಮತ್ತು ಕಾಶ್ಮೀರದ ಪ್ರದೇಶವು ಭಾರತದೊಂದಿಗೆ ಮರುಸೇರ್ಪಡೆಯಾಗಬೇಕು ಎಂದು ಅವರು ಒತ್ತಿ ಹೇಳಿದ್ದಾರೆ. 370ನೇ ವಿಧಿಯನ್ನು ರದ್ದುಗೊಳಿಸಬೇಕೆಂಬ ತಮ್ಮ ಆಗ್ರಹವು ಮೂರು ದಶಕಗಳಷ್ಟು ಹಳೆಯದಾಗಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ … Continued

2023ರಿಂದ ಪರಾರಿಯಾಗಿದ್ದ ಪಾಕಿಸ್ತಾನದ ಮಾದಕ ದ್ರವ್ಯ-ಭಯೋತ್ಪಾದನಾ ಕಿಂಗ್‌ಪಿನ್ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ (SIA) ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕ ಹೊಂದಿದ್ದ ಪ್ರಮುಖ ನಾರ್ಕೋ-ಭಯೋತ್ಪಾದನಾ ಕಿಂಗ್‌ಪಿನ್‌ನನ್ನು ಶನಿವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸುವ ಮೂಲಕ ಮಹತ್ವದ ಯಶಸ್ಸು ಸಾಧಿಸಲಾಗಿದೆ ಎಂದು ಹೇಳಿಕೊಂಡಿದೆ. ತನಿಖಾ ಸಂಸ್ಥೆ ವಕ್ತಾರರ ಪ್ರಕಾರ, ಪೂಂಚ್‌ನ ಹವೇಲಿ ತಹಸಿಲ್‌ನ ದೇಗ್ವಾರ್-ತೆರ್ವಾನ್ ಗ್ರಾಮದ ನಿವಾಸಿಯಾದ ಮೊಹಮ್ಮದ್ ಅರ್ಷದ್ ಅಲಿಯಾಸ್ ಆಸಿಫ್ … Continued

ಜಮ್ಮು-ಕಾಶ್ಮೀರ ರಾಜ್ಯಸಭೆ ಚುನಾವಣೆ ; ನ್ಯಾಷನಲ್ ಕಾನ್ಫರೆನ್ಸ್ 3, ಬಿಜೆಪಿ 1ರಲ್ಲಿ ಗೆಲುವು

ನವದೆಹಲಿ : 2019ರಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ರಾಜ್ಯಸಭಾ ಚುನಾವಣೆಯಲ್ಲಿ, ನಾಲ್ಕು ಸ್ಥಾನಗಳಲ್ಲಿ ಒಮರ್ ಅಬ್ದುಲ್ಲಾ ಅವರ ನ್ಯಾಷನಲ್ ಕಾನ್ಫರೆನ್ಸ್ ಶುಕ್ರವಾರ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ವಿಪಕ್ಷ ಬಿಜೆಪಿ ಒಂದನ್ನು ಗೆದ್ದುಕೊಂಡಿದೆ. ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ತನ್ನ ಅಭ್ಯರ್ಥಿ ಚೌಧರಿ ಮೊಹಮ್ಮದ್ ರಂಜಾನ್ ಮೊದಲ ರಾಜ್ಯಸಭಾ … Continued

ಕುಪ್ವಾರಾ : ಇಬ್ಬರು ಭಯೋತ್ಪಾಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಒಳಕ್ಕೆ ನುಸುಳಲು ಯತ್ನಿಸಿದ ಭಯೋತ್ಪಾದಕರ ಪ್ರಯತ್ನವನ್ನು ತಡೆದ ಭದ್ರತಾ ಪಡೆ ನುಸುಳುಕೋರರನ್ನು ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಗಡಿ ನಿಯಂತ್ರಣ ರೇಖೆ ಬಳಿ ಅನುಮಾನಾಸ್ಪದ ಚಟುವಟಿಕೆ … Continued