ಫಾರೂಕ್ ಅಬ್ದುಲ್ಲಾ ಮೇಲೆ ಗುಂಡು ಹಾರಿಸಲು ಯತ್ನ : ಕೂದಲೆಳೆ ಅಂತರದಲ್ಲಿ ಪಾರು

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಶುಕ್ರವಾರ ರಾತ್ರಿ ಜಮ್ಮುವಿನ ಗ್ರೇಟರ್ ಕೈಲಾಶ್‌ನ ರಾಯಲ್ ಪಾರ್ಕ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭವೊಂದರಲ್ಲಿ ನಡೆದ ಗುಂಡಿನ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಪೊಲೀಸರ ಪ್ರಕಾರ, ರಾತ್ರಿ 10:30ರ ಸುಮಾರಿಗೆ ಅಬ್ದುಲ್ಲಾ ಮತ್ತು ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬ ಗುಂಡು … Continued

ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: 33 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ

ಜಮ್ಮು : ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಮಂಗಳವಾರ ಸಂಭವಿಸಿದ್ದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಅರ್ಧಕುವರಿಯ ಇಂದ್ರಪ್ರಸ್ಥ ಭೋಜನಾಲಯದ ಬಳಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿತ್ತು. … Continued

ಮೈಜುಂ ಎನ್ನುವ ವೀಡಿಯೊಗಳು | ಭಾರೀ ಮಳೆಯಿಂದ ಕೊಚ್ಚಿಹೋದ ತಾವಿ ನದಿ ಸೇತುವೆ ; ಸಿಲುಕಿಕೊಂಡ ವಾಹನಗಳು

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಭೂಕುಸಿತಗಳು, ಹಠಾತ್ ಪ್ರವಾಹಗಳಿಂದಾಗಿ ಪ್ರದೇಶ ನಲುಗಿ ಹೋಗಿದೆ. ಮಂಗಳವಾರ ಜಮ್ಮುವಿನ ಭಗವತಿ ನಗರದ ಬಳಿಯ ತಾವಿ ನದಿ ಉಕ್ಕಿ ಹರಿದ ಪರಿಣಾಮ ಸೇತುವೆಯೊಂದು ಕೊಚ್ಚಿಹೋಗಿದೆ. ನಾಟಕೀಯ ಘಟನೆಯಲ್ಲಿ, ಜಮ್ಮುವಿನ ಭಗವತಿ ನಗರದ ನಾಲ್ಕನೇ ತಾವಿ ನದೊಯ ಬೃಹತ್‌ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಪರಿಣಾಮ ಹಲವಾರು … Continued

ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಬೆದರಿಕೆ ಪತ್ರವನ್ನು ಉಗುರುಗಳಿಗೆ ಕಟ್ಟಿದ್ದ ಪಾರಿವಾಳದ ಸೆರೆ ಹಿಡಿದ ಭದ್ರತಾ ಪಡೆಗಳು…!

ಜಮ್ಮು: ಆಘಾತಕಾರಿ ಘಟನೆಯೊಂದರಲ್ಲಿ, ಜಮ್ಮು ಜಿಲ್ಲೆಯ ಆರ್‌.ಎಸ್. ಪುರದ ಅಂತಾರಾಷ್ಟ್ರೀಯ ಗಡಿಯಲ್ಲಿ (ಐಬಿ) ಉಗುರುಗಳಿಗೆ ಕಟ್ಟಲಾದ ಬೆದರಿಕೆ ಪತ್ರವಿದ್ದ ಪಾರಿವಾಳವನ್ನು ಭದ್ರತಾ ಪಡೆಗಳು ಸೆರೆಹಿಡಿದಿವೆ. ಆಗಸ್ಟ್ 18 (ಸೋಮವಾರ) ರಾತ್ರಿ 9:00 ಗಂಟೆ ಸುಮಾರಿಗೆ ಕಟ್ಮರಿಯಾ ಪ್ರದೇಶದಲ್ಲಿ ಈ ಪಕ್ಷಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಉರ್ದು ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾದ ಚೀಟಿಯಲ್ಲಿ, … Continued

ವೀಡಿಯೊ..| ಭಾರತದ 20 ನಗರಗಳ ಮೇಲೆ ಪಾಕಿಸ್ತಾನದಿಂದ ಡ್ರೋನ್ ದಾಳಿ ;ಎಲ್ಲವನ್ನೂ ಹೊಡೆದುರುಳಿಸಿದ ಸೇನೆ…

ಜಮ್ಮು: ಪಾಕಿಸ್ತಾನ’ ಮತ್ತೆ ಜಮ್ಮು ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ. ಶುಕ್ರವಾರ ಸಂಜೆ ದಕ್ಷಿಣ ಕಾಶ್ಮೀರದ ಶ್ರೀನಗರ ವಿಮಾನ ನಿಲ್ದಾಣ ಮತ್ತು ಆವಂತಿಪೋರಾ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಡ್ರೋನ್ ದಾಳಿಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಮತ್ತು ಗುಜರಾತ್‌ನಾದ್ಯಂತ 20 ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಡ್ರೋನ್‌ಗಳು ಸತತ ಎರಡನೇ … Continued

ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ: ಲಾಹೋರ್, ಇಸ್ಲಾಮಾಬಾದ್ ಮೇಲೆ ಭಾರತದ ವಾಯು ದಾಳಿ

ನವದೆಹಲಿ: ಜಮ್ಮು ವಿಮಾನ ನಿಲ್ದಾಣದ ಮೇಲೆ ಪಾಕ್ ಉದ್ದೇಶಿತ ದಾಳಿಯನ್ನು ವಿಫಲಗೊಳಿಸಿದ ನಂತರ ಭಾರತ ಲಾಹೋರ್‌ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಜಮ್ಮು ವಿಮಾನನಿಲ್ದಾಣವು ಭಾರತೀಯ ವಾಯುಪಡೆಯ ನಿಲ್ದಾಣವನ್ನು ಸಹ ಹೊಂದಿದೆ. ಪಾಕಿಸ್ತಾನ ವಾಯುದಾಳಿ ಯತ್ನ ವಿಫಲಗೊಳಿಸಿರುವ ಭಾರತ ಈಗ ಉಗ್ರ ಹಫೀಜ್ ಸಯೀದ್ ಇರುವ ಲಾಹೋರ್ ನಗರವನ್ನೇ ಗುರಿಯಾಗಿಸಿ … Continued

ಜಮ್ಮುವಿನಲ್ಲಿ ೯.೭೫ ಕೆಜಿ ಸ್ಫೋಟಕ ಪತ್ತೆ

ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ೯.೭೫ ಕೆಜಿಯಷ್ಟು ಸ್ಫೋಟಕ ಸಾಗಿಸುತ್ತಿದ್ದ ವ್ಯಕ್ತಿಯನ್ನು ಭದ್ರತಾ ಪಡೆಗಳು ಬಂಧಿಸಿವೆ. ಗುಂಡಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ವ್ಯಕ್ತಿಯನ್ನು ಬಂಧಿಸಿ ಅವನಿಂದ ೭೮ ಜಿಲೆಟಿನ್‌ ಕಡ್ಡಿಗಳು, ೨೭೫ ಮೀಟರ್‌ ತಂತಿ ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಕಿಸ್ತ್ವಾರ್‌ ಜಿಲ್ಲೆಯ ಜಲವಿದ್ಯುತ್‌ ಯೋಜನಾ ಪ್ರದೇಶದ ಸಮೀಪ ಅಡಗುದಾಣದಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.