ನಮಗೆ ಶರಿಯತ್ ಮೊದಲು, ನಂತರ ಸಂವಿಧಾನ ಎಂದ ಜಾರ್ಖಂಡ್ ಸಚಿವ ; ಭುಗಿಲೆದ್ದ ವಿವಾದ

ರಾಂಚಿ: ಜಾರ್ಖಂಡ್ ಸಚಿವ ಹಫೀಜುಲ್ ಹಸನ್ ಅವರು ಮುಸ್ಲಿಮರಿಗೆ modlu ಶರಿಯತ್ ಮತ್ತು ನಂತರ ದೇಶದ ಸಂವಿಧಾನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಬಿಜೆಪಿಯ ಜಾರ್ಖಂಡ್ ಘಟಕ ಹಂಚಿಕೊಂಡಿರುವ ವಿಡಿಯೋದಲ್ಲಿ ಜಾರ್ಖಂಡ್‌ನ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಫೀಜುಲ್ ಹಸನ್, ಶ “ಶರಿಯತ್ ನಮಗೆ ಮುಖ್ಯವಾಗಿದೆ. ಕುರಾನ್ ನಮ್ಮ ಹೃದಯದಲ್ಲಿದೆ ಮತ್ತು ಸಂವಿಧಾನ ನಮ್ಮ ಕೈಯಲ್ಲಿದೆ. … Continued

27 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಮಹಾಕುಂಭ ಮೇಳದಲ್ಲಿ ‘ಅಘೋರಿ’ ಬಾಬಾ ಆಗಿ ಕುಟುಂಬದವರಿಗೆ ಪತ್ತೆ…!

27 ವರ್ಷಗಳ ಹಿಂದೆ ಕಳೆದುಹೋಗಿದ್ದ ತಮ್ಮ ಮನೆಯ ವ್ಯಕ್ತಿಯನ್ನು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪತ್ತೆಹಚ್ಚಿರುವುದಾಗಿ ಜಾರ್ಖಂಡದ ಕುಟುಂಬವೊಂದು ಬುಧವಾರ ಹೇಳಿಕೊಂಡಿದೆ…! ಅವರ ಪ್ರಕಾರ, 27 ವರ್ಷಗಳ ಹಿಂದೆ ಕಳೆದು ಹೋಗಿದ್ದ ವ್ಯಕ್ತಿ ಗಂಗಾಸಾಗರ ಯಾದವ್ ಎಂಬವರು ಈಗ 65 ವರ್ಷದ ‘ಅಘೋರಿ’ ಸನ್ಯಾಸಿ ಬಾಬಾ ರಾಜಕುಮಾರ ಎಂಬ ಹೆಸರಿನ ಸಾಧುವಾಗಿದ್ದು, ನಿರ್ದಿಷ್ಟ ಸನ್ಯಾಸಿಗಳ ವರ್ಗಕ್ಕೆ ಸೇರಿದವರಾಗಿದ್ದಾರೆ. … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಎಕ್ಸಿಟ್‌ ಪೋಲ್‌ ಗಳ ಭವಿಷ್ಯವಾಣಿ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ ; ಜಾರ್ಖಂಡದಲ್ಲಿ ಎನ್‌ಡಿಎಗೆ ಮುನ್ನಡೆ

ನವದೆಹಲಿ: ಮೂರು ಎಕ್ಸಿಟ್ ಪೋಲ್‌ಗಳ ಭವಿಷ್ಯವಾಣಿಯಂತೆ ಬಿಜೆಪಿ, ಶಿವಸೇನೆ (ಏಕನಾಥ ಶಿಂಧೆ)ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮೈತ್ರಿಕೂಟವಾದ ಮಹಾಯುತಿ ಮತ್ತೆ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಜಾರ್ಖಂಡ್‌ನಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ ಜೆಎಂಎಂ-ಕಾಂಗ್ರೆಸ್ ಮೈತ್ರಿಯೊಂದಿಗೆ ನಿಕಟ ಪೈಪೋಟಿ ನಡೆಸಲಿದ್ದು, ಬಿಜೆಪಿಗೆ ಅಧಿಕಾರಕ್ಕೆ ಮರಳಲು ಹೆಚ್ಚೊ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ. ಮೂರು ಎಕ್ಸಿಟ್ ಪೋಲ್‌ಗಳ … Continued

ಹೇಮಂತ್ ಸೊರೇನ್‌ ವಯಸ್ಸೆಷ್ಟು..? 5 ವರ್ಷದಲ್ಲಿ ಜಾರ್ಖಂಡ್ ಸಿಎಂಗೆ 7 ವರ್ಷ ವಯಸ್ಸಾಗಿದ್ದು ಹೇಗೆ..? ಬಿಜೆಪಿ ಪ್ರಶ್ನೆ

ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ ಸೊರೇನ್ ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದಾಗ್ಯೂ, ಅವರ ಅಫಿಡವಿಟ್, ಈಗ ಅವರ ವಯಸ್ಸಿನ ಬಗ್ಗೆ ವಿವಾದಕ್ಕೆ ಕಾರಣವಾಗಿದೆ. ಹೇಮಂತ ಸೋರೆನ್ ಅವರ 2019 ರ ನಾಮಪತ್ರದಲ್ಲಿ ಅವರಿಗೆ 42 ವರ್ಷ ಎಂದು ಹೇಳಿತ್ತು, ಆದರೆ ಈ ವರ್ಷದ ಅಫಿಡವಿಟ್ ಅವರ ವಯಸ್ಸು 49 ಎಂದು ಹೇಳಿದೆ. ಈ … Continued

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕಗಳನ್ನು ಚುನಾವಣಾ ಆಯೋಗ ಮಂಗಳವಾರ ಪ್ರಟಿಸಿದೆ. ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ವಿಧಾನಸಭೆ … Continued

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ; ಹೇಮಂತ ಸೊರೇನ್ ಮತ್ತೆ ಸಿಎಂ..!

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು, ಬುಧವಾರ ರಾಜೀನಾಮೆ ಸಲ್ಲಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯಪಾಲರಿಗೆ ಚಂಪೈ ಸೊರೇನ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಹೇಮಂತ್ ಸೊರೇನ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇದೀಗ ಹೇಮಂತ್ ಸೊರೇನ್ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾರ್ಖಂಡ ಮಾಜಿ ಸಿಎಂ ಹೇಮಂತ ಸೊರೇನ್‌ ಗೆ ಜಾಮೀನು

ರಾಂಚಿ: ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರಿಗೆ ಜಾಮೀನು ನೀಡಿದೆ. ಸೊರೇನ್‌ ವಿರುದ್ಧ ಆಪಾದಿಸಲಾದ ಭೂ ಹಗರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರು ಶುಕ್ರವಾರ ಸೊರೇನ್‌ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಈ ಹಿಂದೆ ನ್ಯಾಯಮೂರ್ತಿ ಮುಖೋಪಾಧ್ಯಾಯ ಅವರು ಸೊರೇನ್ ತನ್ನ ಚಿಕ್ಕಪ್ಪನ … Continued

“ನೀವು ಮತವನ್ನೂ ಹಾಕಿಲ್ಲ…”: ತಮ್ಮದೇ ಪಕ್ಷದ ಸಂಸದನಿಗೆ ಶೋಕಾಸ್ ನೋಟಿಸ್ ನೀಡಿದ ಬಿಜೆಪಿ..

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ ಸಿನ್ಹಾ ಅವರು ಸೋಮವಾರ ಮತದಾನ ಮಾಡದೇ ಇದ್ದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಾರ್ಖಂಡ್‌ನ ಹಜಾರಿಬಾಗ್ ಕ್ಷೇತ್ರದಿಂದ ಅವರ ಬದಲಿಗೆ ಮನೀಶ ಜೈಸ್ವಾಲ್ ಅವರಿಗೆ ಟಿಕೆಟ್‌ ಘೋಷಿಸಿದಾಗಿನಿಂದ ಅವರು “ಸಂಘಟನಾ ಕೆಲಸ ಮತ್ತು ಚುನಾವಣಾ ಪ್ರಚಾರ” ದಲ್ಲಿ ಭಾಗವಹಿಸುತ್ತಿಲ್ಲ ಎಂದು ಆರೋಪಿಸಿ ಪಕ್ಷವು … Continued

‘ಹೈಕೋರ್ಟ್‌ಗೆ ಹೋಗಿ’: ಬಂಧನದ ವಿರುದ್ಧ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನವದೆಹಲಿ: ಭೂ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನಾವು ಮಧ್ಯಪ್ರವೇಶಿಸುವುದಿಲ್ಲ, ಹೈಕೋರ್ಟ್‌ಗೆ ಹೋಗಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ, ಎಂ.ಎಂ. ಸುಂದರೇಶ ಮತ್ತು ಬೇಲಾ ಎಂ ತ್ರಿವೇದಿ … Continued