ಜೆಡಿಎಸ್‌ ನಂಬಿಕೆಗೆ ಅರ್ಹ ಪಕ್ಷವಲ್ಲ

ಮೈಸೂರು : ಜೆಡಿಎಸ್ ಗೆ ಶಕ್ತಿ ತುಂಬಿದರೆ ನಮಗೇ ಮಾರಕ, ಯಾಕೆಂದರೆ ಜೆಡಿಎಸ್ ಯಾವುದೇ ಕಾರಣಕ್ಕೂಪೂರ್ಣ ನಂಬಿಕೆ ಇಡುವ ಪಕ್ಷವಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೆಡಿಎಸ್ ಅನ್ನು ಯಾವುದೇ ಕಾರಣಕ್ಕೂ ನಂಬುವಂತಿಲ್ಲ. ಬಿಜೆಪಿ ಪ್ರಬಲವಾಗಿ ಕಟ್ಟಬೇಕು. ಅದೇ ನನ್ನ ಉದ್ದೇಶ.ಈ ವಿಚಾರವನ್ನು ನಾನು ಪಕ್ಷದ ವರಿಷ್ಠರ … Continued

ಮೈಸೂರು ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರ: ಡಿಕೆಶಿ

ಮೈಸೂರು ಮಹಾನಗರ ಪಾಲಿಕೆ ಮಹಾಪೌರ ಚುನಾವಣಾ ಮೈತ್ರಿ ಗೊಂದಲ ಸಣ್ಣ ವಿಚಾರವಾಗಿದ್ದು, ಇದನ್ನು ಪಕ್ಷದೊಳಗೆ ಬಗೆಹರಿಸಿಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು. ಸಿದ್ದರಾಮಯ್ಯ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜೇವಾಲ ಅವರ ಪುತ್ರನ ಮದುವೆಗೆ ದೆಹಲಿಗೆ ಹೋಗಿದ್ದಾರೆ. ನಾನೂ ಹೋಗಬೇಕಿತ್ತು. ಆದರೆ ಮನೆಯಲ್ಲಿ ಕೆಲಸ ಇದ್ದುದರಿಂದ ಹೋಗಲು ಸಾಧ್ಯವಾಗಲಿಲ್ಲ ಎಂದರು. ಮೈಸೂರು ಮಹಪೌರ ಚುನಾವಣೆ … Continued

ಜೆಡಿಎಸ್‌ಗೆ ಥೂ….ಎಂದು ಉಗಿದು ಕಾಂಗ್ರೆಸ್‌ ಸೇರಿದ ದೇವೆಗೌಡರ ಸಂಬಂಧಿ..!

ಪಿರಿಯಾಪಟ್ಟಣ: ಜೆಡಿಎಸ್‌ ಪಕ್ಷಕ್ಕೆ ಯಾವುದೇ ತತ್ವ ಸಿದ್ಧಾಂತವಿಲ್ಲ, ಕೇವಲ ಸ್ವಾರ್ಥ ಹಾಗೂ ಅವಕಾಶವಾದಿ ರಾಜಕಾರಣ ಮಾತ್ರ ಗೊತ್ತಿದೆ ಎಂದು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ ಮಾಜಿ ಶಾಸಕ ಕೆ. ವೆಂಕಟೇಶ ಆರೋಪ ಮಾಡಿದರು. ತಾಲೂಕಿನ ಭುವನಹಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ವೆಂಕಟೇಶ ಮಾತನಾಡಿ, ೨೫ ವರ್ಷಗಳಿಂದ ಜೆಡಿಎಸ್‌ನಲ್ಲಿದ್ದೆ. ಎಚ್‌.ಡಿ. ದೇವೆಗೌಡರು ನಮ್ಮ … Continued

ತನ್ವೀರ್‌ ಸೇಠ್‌ಗೆ ಜೆಡಿಎಸ್‌ಗೆ‌ ಆಹ್ವಾನ ನೀಡಿದ ಸಾ.ರಾ.ಮಹೇಶ

ಮೈಸೂರು: ಶಾಸಕ ತನ್ವೀರ್ ಸೇಠ್ ಅವರನ್ನು ಕಾಂಗ್ರೆಸ್ ವಜಾ ಮಾಡಿದರೆ ಅವರನ್ನು ಜೆಡಿಎಸ್‍ಗೆ ಸ್ವಾಗತಿಸುತ್ತೇವೆ ಎಂದು ಜೆಡಿಎಸ್‌ ಮುಖಂಡ ಹಾಗೂ ಶಾಸಕ ಸಾ.ರಾ. ಮಹೇಶ ಹೇಳಿದರು. ತನ್ವೀರ್ ಸೇಠ್ ಒಬ್ಬ ಅಲ್ಪಸಂಖ್ಯಾತ ಮುಖಂಡ, ನಮಗೆ ಅವರ ಬಗ್ಗೆ ಗೌರವವಿದೆ. ನಾವು ಯಾರ ಪಕ್ಷದಲ್ಲೂ ಬೆಂಕಿ ಹಚ್ಚಿಲ್ಲ. ಎಲ್ಲವು ಆ ಕ್ಷಣದಲ್ಲಿ ಆದ ನಿರ್ಧಾರ. ಇದರಿಂದ ತನ್ವೀರ್ … Continued

ಮೈತ್ರಿ ಸಹವಾಸ ಸಾಕಾಗಿದೆ: ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶಂಪೂರ

ಬೆಂಗಳೂರು: ಬೇರೆ ಪಕ್ಷದವರ ಜೊತೆ ಮೈತ್ರಿ ಸಾಕಾಗಿದೆ. ನಮಗೆ ಯಾರ ಸಹವಾಸವೂ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮೈತ್ರಿ ಸಹವಾಸ ಬೇಡ ಎಂದು ವರಿಷ್ಠರಿಗೆ ಮನವಿ ಮಾಡಿದ ಅವರು, ನಮಗೆ ಯಾರ ಸಹವಾಸವೂ ಬೇಡ. ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ … Continued

ಮುಂದಿನ ಚುನಾವಣೆಯಲ್ಲಿ ನಿಮ್ಮ ತಾಕತ್‌ ತೋರಿಸಿ: ಕಾರ್ಯಕರ್ತರಿಗೆ ದೇವೆಗೌಡ ಮನವಿ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ನಮ್ಮ ತಾಕತ್ತು ಏನು ಎಂಬುದನ್ನು ತೋರಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು. ನಾನು ಮುಂದೆ ನಿಮಗೆ ಮಾರ್ಗದರ್ಶನ ಮಾಡಬಹುದು … Continued