ಬಿಹಾರ ಚುನಾವಣೆ | ಜನ್ ಸುರಾಜ್ ಪಕ್ಷದ ಬೆಂಬಲಿಗನ ಕೊಲೆ ಪ್ರಕರಣ ; ಜೆಡಿಯು ಅಭ್ಯರ್ಥಿ ಅನಂತ ಸಿಂಗ್ ಬಂಧನ

 ಪಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ ಅವರ ಜೆಡಿಯು (JD(U)) ಪಕ್ಷದಿಂದ ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಶಾಸಕ ಅನಂತ ಸಿಂಗ್ ಅವರನ್ನು ಭಾನುವಾರ ಮುಂಜಾನೆ ಬಂಧಿಸಲಾಗಿದೆ. ಜನ ಸುರಾಜ್ ಪಕ್ಷದ ಬೆಂಬಲಿಗ ದುಲಾರ್ ಚಂದ ಯಾದವ್ ಅವರ ಕೊಲೆಗೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಯಾದವ್ ಅವರು ಈ ಹಿಂದೆ ಆರ್‌ಜೆಡಿ (RJD) … Continued

ಬಿಹಾರ ವಿಧಾನಸಭೆ ಚುನಾವಣೆ | ಎನ್‌ ಡಿಎ ಸೀಟು ಹಂಚಿಕೆ ಅಂತಿಮ : ಬಿಜೆಪಿ-ಜೆಡಿಯು ಸಮ ಸ್ಥಾನಗಳಲ್ಲಿ ಸ್ಪರ್ಧೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಎನ್‌ಡಿಎ ತನ್ನ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದ್ದು, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜನತಾದಳ (ಯುನೈಟೆಡ್) ತಲಾ 101 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ತಿಳಿಸಿದ್ದಾರೆ. ಎನ್‌ಡಿಎ ಸೀಟು ಹಂಚಿಕೆಯ ಸೂತ್ರದ ಭಾಗವಾಗಿ ಇತರ ಎನ್‌ಡಿಎ ಅಂಗ … Continued

ಬಿಹಾರ ಚುನಾವಣೆ | 4 ಒಪಿನಿಯನ್‌ ಪೋಲ್‌ ; ಎನ್‌ಡಿಎ, ಆರ್‌ಜೆಡಿ ಮಹಾಘಟಬಂಧನ ಮಧ್ಯೆ ಜಿದ್ದಾಜಿದ್ದಿ : ಯಾರಿಗೆ ಮುನ್ನಡೆ ?

2025 ರ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ನಾಲ್ಕು ಪ್ರಮುಖ ಒಪಿನಿಯನ್‌ ಪೋಲ್‌ಗಳ ಫಲಿತಾಂಶಗಳು ರಾಜ್ಯದ ಮತದಾರರ ಟ್ರೆಂಡ್‌ ಬಗ್ಗೆ ಹೇಳಿವೆ. ಮ್ಯಾಟ್ರಿಕ್ಸ್, ಜೆವಿಸಿ, ಸ್ಪೀಕ್ ಮೀಡಿಯಾ ನೆಟ್‌ವರ್ಕ್ ಮತ್ತು ವೋಟ್ ವೈಬ್ ನಡೆಸಿದ ಸಮೀಕ್ಷೆಗಳು ಬಿಜೆಪಿ, ಜೆಡಿಯು, ಎಲ್‌ಜೆಪಿ (ರಾಮ ವಿಲಾಸ) ಮತ್ತು ಎಚ್‌ಎಎಂ ಒಳಗೊಂಡ ಎನ್‌ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಮುನ್ನಡೆಯನ್ನು ತೋರಿಸಿವೆ. … Continued

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ; ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಘೋಷಣೆ ; ಬದಲಾಗಲಿದೆಯೇ ಬಿಹಾರ ರಾಜಕೀಯ ಚಿತ್ರಣ..?

ನವದೆಹಲಿ: ಲೋಕ ಜನಶಕ್ತಿ ಪಕ್ಷದ (ರಾಮ ವಿಲಾಸ್) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಭಾನುವಾರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ “ಜನರು ತಮಗಾಗಿ ನಿರ್ಧರಿಸುವ” ಸ್ಥಾನದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ಅವರು ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ವಾರಗಳ ಊಹಾಪೋಹಗಳಿಗೆ ಕೊನೆ ಹಾಡಿದೆ. “ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಯೇ ಎಂದು ಎಲ್ಲರೂ ತಿಳಿದುಕೊಳ್ಳಲು ಬಯಸುತ್ತಾರೆ. … Continued

ವೀಡಿಯೊ..| ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಲು ಮುಂದಾದ ಬಿಹಾರ ಸಿಎಂ ನಿತೀಶಕುಮಾರ : ಮೋದಿ ಏನು ಮಾಡಿದ್ರು ನೋಡಿ

ದರ್ಭಾಂಗ : ಬಿಹಾರದ ದರ್ಭಾಂಗದಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಮುಂದಾಗಿರುವುದು ಕಂಡುಬಂದಿದೆ. ಬಿಹಾರ ಮುಖ್ಯಮಂತ್ರಿ ಪ್ರಧಾನಿ ಬಳಿಗೆ ಬರುತ್ತಿದ್ದಂತೆ ಅವರ ಪಾದ ಮುಟ್ಟಿ ಮುಂದಾಗುತ್ತಾರೆ. ಆದಾಗ್ಯೂ, ಪ್ರಧಾನಿ ಮೋದಿ ಅವರನ್ನು ನಡುವೆ ತಡೆಯುತ್ತಾರೆ, ನಂತರ ಅವರು ಅವರೊಂದಿಗೆ ಹಸ್ತಲಾಘವ ಮಾಡುತ್ತಾರೆ.ಈ ಕ್ಷಣದ … Continued

ʼಅಗ್ನಿವೀರʼ ಯೋಜನೆ ಮರುಪರಿಶೀಲಿಸುವಂತೆ ಎನ್‌ಡಿಎ ಸರ್ಕಾರ ರಚನೆಗೆ ಮೊದಲೇ ಜೆಡಿಯು ಒತ್ತಾಯ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯು ಮೊದಲ ಎರಡಕ್ಕಿಂತ ಭಿನ್ನವಾಗಿರಬಹುದು ಎಂಬ ಮೊದಲ ಸಂಕೇತವಾಗಿ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ ಯೋಜನೆಯನ್ನು ಮರುಪರಿಶೀಲಿಸಲು ಪಕ್ಷವು ಬಯಸುತ್ತದೆ ಎಂದು ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಜೆಡಿಯುನ ಮುಖ್ಯ ವಕ್ತಾರ ಕೆ.ಸಿ. ತ್ಯಾಗಿ, ಹಲವಾರು ರಾಜ್ಯಗಳಲ್ಲಿ ಯೋಜನೆಯ ವಿರುದ್ಧ ಅಸಮಾಧಾನವಿದೆ ಎಂದು ಹೇಳಿದ್ದಾರೆ. … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ಲೋಕಸಭೆ ಚುನಾವಣೆ : ಬಿಹಾರದಲ್ಲಿ ಎನ್‌ ಡಿ ಎ ಸೀಟು ಹಂಚಿಕೆ ಅಂತಿಮ ; ಈ ಬಾರಿ ಬಿಜೆಪಿಯೇ ದೊಡ್ಡಣ್ಣ…ಆ ಸ್ಥಾನ ಬಿಟ್ಟುಕೊಟ್ಟ ಜೆಡಿಯು…!

ನವದೆಹಲಿ: ಎನ್‌ಡಿಎ ಸೋಮವಾರ ಸಂಜೆ ಬಿಹಾರದಲ್ಲಿ ತನ್ನ ಸೀಟು ಹಂಚಿಕೆ ಸೂತ್ರವನ್ನು ಔಪಚಾರಿಕವಾಗಿ ಪ್ರಕಟಿಸಿದ್ದು, ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಅದನ್ನು ‘ದೊಡ್ಡಣ್ಣ’ನ ಸ್ಥಾನದಲ್ಲಿ ಇರಿಸಿದೆ. ಬಿಹಾರದಲ್ಲಿ ಈ ಹಿಂದೆ ಮೈತ್ರಿಕೂಟದಲ್ಲಿ ದೊಡ್ಡಣ್ಣನ ಸ್ಥಾನ ಪಡೆದಿದ್ದ ಮುಖ್ಯಮಂತ್ರಿ ನಿತೀಶಕುಮಾರ ಅವರ ಜೆಡಿಯು ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಚಿರಾಗ ಪಾಸ್ವಾನ್ ಅವರ ಲೋಕ ಜನಶಕ್ತಿ … Continued

ನೂತನ ಮೈತ್ರಿಕೂಟ ಸರ್ಕಾರದ ಬಿಹಾರ ಸಿಎಂ ಆಗಿ 9 ನೇ ಬಾರಿಗೆ ನಿತೀಶಕುಮಾರ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಬಿಹಾರದ ನೂತನ ಮೈತ್ರಿಕೂಟದ ಸರ್ಕಾರದ ಮುಖ್ಯಮಂತ್ರಿಯಾಗಿ ಭಾನುವಾರ 9ನೇ ಬಾರಿಗೆ ನಿತೀಶಕುಮಾರ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿತೀಶ ಜೊತೆಗೆ ಜನತಾ ದಳ (ಯುನೈಟೆಡ್) ನಾಯಕರಾದ ವಿಜಯಕುಮಾರ ಚೌಧರಿ, ಬಿಜೇಂದ್ರ ಪ್ರಸಾದ ಯಾದವ್ ಮತ್ತು ಶ್ರವೋನಕುಮಾರ ಕೂಡ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ನಾಯಕರಾದ ಸಾಮ್ರಾಟ ಚೌಧರಿ, ಡಾ ಪ್ರೇಮಕುಮಾರ ಮತ್ತು … Continued

ನಿತೀಶ ಸಂಪುಟದಲ್ಲಿ ಬಿಜೆಪಿಯ ಸಾಮ್ರಾಟ ಚೌಧರಿ, ವಿಜಯ ಸಿನ್ಹಾ ಬಿಹಾರದ ನೂತನ ಉಪಮುಖ್ಯಮಂತ್ರಿಗಳು…!

ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಭಾನುವಾರ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಅವರಿಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಜೊತೆಗೆ ಸೇರಿಕೊಂಡು ನೂತನ ಸಮ್ಮಿಶ್ರ ಸರ್ಕಾರ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟವು ಈಗ ಬಿಜೆಪಿಯಿಂದ ಇಬ್ಬರು ಉಪಮುಖ್ಯಮಂತ್ರಿಗಳನ್ನು ಹೊಂದಿರುತ್ತದೆ ಎಂದು ಹೇಳಲಾಗಿದ್ದು, ಬಿಹಾರ ಬಿಜೆಪಿ ಮುಖ್ಯಸ್ಥ ಸಾಮ್ರಾಟ್ ಚೌಧರಿ ಮತ್ತು ಬಿಹಾರ ವಿಧಾನಸಭೆಯ ವಿರೋಧ ಪಕ್ಷದ … Continued