ಜೊಯಿಡಾ: ಶಾಲಾ ಪ್ರವಾಸದ ಬಸ್​ ಪಲ್ಟಿ ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಶಾಲಾ ಪ್ರವಾಸದ ಬಸ್​ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್‌ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಖಾಸಗಿ ಬಸ್​ನಲ್ಲಿ ಪ್ರವಾಸಕ್ಕೆ ಬಂದಿದ್ದ ಚಿತ್ರದುರ್ಗ … Continued

ಜೊಯಿಡಾ : ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued

ಬೊಲೆರೊ ಡಿಕ್ಕಿ: ಮೂವರು ಮಹಿಳೆಯರು ಸಾವು

ಕಾರವಾರ : ಭೀಕರ ಅಪಘಾತವೊಂದರಲ್ಲಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನೊಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಸೀತಾವಾಡದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಖಾನಾಪುರದ ಫಾರ್ಲಿಯ ಪಾರ್ವತಿ ಗಾವಡಾ (55), ದುರ್ಗೆ ಕೋಲ್ಸೇಕರ್ (55), ತುಳಸಿ ಗಾವಡಾ (50) ಎಂದು ಗುರುತಿಸಲಾಗಿದೆ. ಬಿಪಿನ್‌ ತಾಳ್ವೆ ಎಂಬ … Continued

ಜೊಯಿಡಾ : ತೂಗು ಸೇತುವೆ ಮೇಲೆ ಕಾರು ಚಲಾಯಿಸಿ ಹುಚ್ಚಾಟ ಮಾಡಿದ್ದ ಯುವಕನ ಬಂಧನ

ಕಾರವಾರ: ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಗಡಿಯ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಕಾರನ್ನು ಚಲಾಯಿಸಿಕೊಂಡು ಹೋಗಿ ಹುಚ್ಚಾಟ ಮಾಡಿದ್ದ ಯುವಕನನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಜೊಯಿಡಾ ತಾಲೂಕಿನ ಉಳವಿ ಗ್ರಾಮದ ನಿವಾಸಿ ಮುಜಾಹಿದ್ ಆಜಾದ್ ಸಯ್ಯದ್(25) ಬಂಧಿತ ಎಂದು ತಿಳಿದುಬಂದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ … Continued

ಜೊಯಿಡಾ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜಾನಪದ ಭಂಡಾರ ಮಹಾದೇವ ವೇಳಿಪ ನಿಧನ

ಕಾರವಾರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ (90) ನಿಧನರಾಗಿದ್ದಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ನಾಗೋಡಾ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಾರ್ಟೋಳಿ ಗ್ರಾಮದವರು. ಅವರ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಜನಪದ ಕಲೆ ಹಾಗೂ ಪರಿಸರ ರಕ್ಷಣೆಗೆ ಜಾನಪದ ರಾಜ್ಯ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ … Continued

ದಟ್ಟ ಕಾನನದ ಅಕ್ಷರ ಗೊತ್ತಿಲ್ಲದ ಕುಣಬಿ ಸಮುದಾಯದ ಜಾನಪದ ಭಂಡಾರ ಮಹಾದೇವ ವೇಳಿಪಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಗೌರವ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಕಾರ್ಟೋಳಿಯ ಮಹಾದೇವ ಬುಧೊ ವೇಳಿಪ   (೯೨ ವರ್ಷ) ಜಿಲ್ಲೆಯ ದಟ್ಟ ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಕುಣಬಿ ಸಮುದಾಯದ ಜಾನಪದ ಭಂಡಾರ. ಅಕ್ಷರವೇ ಗೊತ್ತಿರದಿದ್ದರೂ ಅಪಾರವಾದ ಜನಪದದ ಭಂಡಾರವಿದೆ. ಅರಣ್ಯವೇ ಅವರ ಬದುಕು. ಇಂದು ಅಗತ್ಯವಿರುವ ಬೆಳೆದು ಉಣ್ಣುವವರು. ಜೊಯಿಡಾದಿಂದ ಹದಿನೈದು ದೂರವಿರುವ ಕಾರ್ಟೋಳಿ ಎಂಬ ಹಳ್ಳಿಯಲ್ಲಿ ತಮ್ಮ … Continued