ಅಕ್ಕಲಕೋಟೆ ಬಳಿ ಭೀಕರ ರಸ್ತೆ ಅಪಘಾತ; ಮಗು ಸೇರಿ 6 ಮಂದಿ ಸಾವು

ಕಲಬುರಗಿ: ಆಳಂದ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಶಿರವಾಳ ವಾಡಿ ಬಳಿ ಕ್ರೂಸರ್ ಮತ್ತು ಸಿಮೆಂಟ್ ಬಲ್ಕರ್ ಲಾರಿ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ 6 ಜನರು ಸಾವಿಗೀಡಾದ ಘಟನೆ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಆಳಂದ ತಾಲೂಕಿನ ಅಣೂರು ಗ್ರಾಮದವರು ಎಂದು ಹೇಳಲಾಗಿದೆ. ಅಪಘಾತದ ತೀವ್ರತೆಗೆ … Continued

ಚಿಂಚೋಳಿ : ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಕಲಬುರಗಿ: ಇಂದು (ಜೂನ್ 18) ಅಪ್ಪಂದಿರ ದಿನವೇ ತಂದೆ ಇಬ್ಬರು ಮಕ್ಕಳನ್ನು ಹಗ್ಗದಿಂದ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿ ಗ್ರಾಮದಲ್ಲಿ ನಡೆದ ವರದಿಯಾಗಿದೆ. ಚಿಂಚೋಳಿ ತಾಲೂಕಿನ ಗಡಿ ಗ್ರಾಮ ಕುಂಚಾವರಂ ಬಳಿ ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಕುಂಚಾವರಂ ಗ್ರಾಮದ ಹಣಮಂತ ಸಂಜಪ್ಪ … Continued

ನಿಧಿ ಆಸೆಗಾಗಿ ಶಿವಲಿಂಗವನ್ನೇ ಕಿತ್ತ ದುಷ್ಕರ್ಮಿಗಳು

ಕಲಬುರುಗಿ : ನಿಧಿ ಆಸೆಗಾಗಿ ದುಷ್ಕರ್ಮಿಗಳು ದೇಗುಲದಲ್ಲಿ ಶಿವಲಿಂಗವನ್ನೇ ಕಿತ್ತು ಹಾಕಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ಹೋಬಳಿ ವಲಯದ ನಡೆದ ವರದಿಯಾಗಿದೆ. ಕಳೆದ ರಾತ್ರಿ ಎನ್. ಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಮಲ್ಲಿಕಾರ್ಜುನ ದೇವಸ್ಥಾನದಲ್ಲಿರುವ ಶಿವಲಿಂಗದ ಅಡಿಭಾಗದಲ್ಲಿ ನಿಧಿ ಇರಬಹುದು ಎಂಬ ದುರಾಸೆಯಲ್ಲಿ ದುಷ್ಕರ್ಮಿಗಳು ಶಿವಲಿಂಗವನ್ನು ಕಿತ್ತು … Continued

ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ

ಕಲಬುರಗಿ : ಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ಚಿಂಚೋಳಿ ತಾಲೂಕಿನ ಸಲಗರ ಬಸಂತಪುರ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಮು ರಾಠೋಡ (45) ಎಂದು ಗುರುತಿಸಲಾಗಿದೆ. ಅವರು ಮೇ 10ರಂದು ನಡೆದ ಚುನಾವಣೆಯಲ್ಲಿ ಬೂತ್‌ ಏಜೆಂಟ್‌ ಆಗಿ ಕಾರ್ಯ ನಿರ್ವಹಿಸಿದ್ದರು. ಬುಧವಾರ ರಾತ್ರಿ … Continued

ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರಿಂದ ಫೈರಿಂಗ್

ಕಲಬುರಗಿ : ನಗರದ ಸೂಪರ್ ಮಾರ್ಕೆಟ್‌ನಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ತಗುಲಿ ಗಾಯಗೊಂಡ ಅಬ್ದುಲ ಜಾಫರ್ ಸಾಬ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ನಗರದ ಸೂಪರ್ ಮಾರ್ಕೇಟ್‌ನಲ್ಲಿ ಈ ವ್ಯಕ್ತಿ ಮಾರಕಾಸ್ತ್ರಗಳನ್ನು ಹಿಡಿದು ಅನೇಕರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಸುಮಾರು ಒಂದು … Continued

ಪಿಎಸ್ಐ ನೇಮಕಾತಿ ಅಕ್ರಮ ಕಿಂಗ್‌ಪಿನ್‌ ಆರ್.ಡಿ.ಪಾಟೀಲ ಪರಾರಿ

ಕಲಬುರಗಿ: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಸಿಐಡಿ ಅಧಿಕಾರಿಗಳಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡವು ನಗರದ ಅಕ್ಕಮಹಾದೇವಿ ಕಾಲೋನಿಯ ಆರೋಪಿ ರುದ್ರಗೌಡ ಪಾಟೀಲ್ ನಿವಾಸಕ್ಕೆ ಬಂದಿದ್ದು ವಿಚಾರಣೆಗೆ ಮುಂದಾದಾಗ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಗುರುವಾರ ರಾತ್ರಿ ಹಗರಣದ ಆರೋಪಿ … Continued

ಹಿಂದಿನ ಸರ್ಕಾರಗಳಿಂದ ಬಂಜಾರ ಸಮುದಾಯದ ನಿರ್ಲಕ್ಷ್ಯ, ಆದ್ರೆ ನಾವು ಅವರಿಗೆ ಈಗ ಹಕ್ಕು ಕೊಟ್ಟಿದ್ದೇವೆ: ಪ್ರಧಾನಿ ಮೋದಿ

ಕಲಬುರಗಿ: ಹಿಂದಿನ ಸರ್ಕಾರ ಬಂಜಾರ ಸಮುದಾಯವನ್ನು (Banjara Community) ನಿರ್ಲಕ್ಷ್ಯ ಮಾಡಿತ್ತು. ಆದರೆ ನಮ್ಮ ಸರ್ಕಾರ ಅವರಿಗೆ ಹಕ್ಕು ಪತ್ರ ನೀಡುವ ಮೂಲ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಡಬಲ್‌ ಎಂಜಿನ್‌ ಸರ್ಕಾರ ಜನರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಲಬುರಗಿಯ ಮಳಖೇಡದಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಬಳ್ಳಾರಿ, ವಿಜಯನಗರ … Continued

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ ನೀಡಲಿರುವ ₹ 3 ಸಾವಿರ ಕೋಟಿ ಹೊರತುಪಡಿಸಿ ಹೆಚ್ಚುವರಿಯಾಗಿ ₹ 5 ಸಾವಿರ ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶನಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಸ್ಥಳೀಯ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ … Continued

ಕಲಬುರಗಿ: ಮಹಿಳಾ ಪಿಎಸ್‌ಐ ‌ಮೇಲೆ ಮಚ್ಚಿನಿಂದ ಹಲ್ಲೆ, ಕೊಲೆ ಆರೋಪಿ ಮೇಲೆ ಫೈರಿಂಗ್‌

ಕಲಬುರಗಿ: ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ವಿಜಯಕುಮಾರ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಹಾಡಹಗಲೇ ಶಹಾಬಾದ್‌ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಭೀಕರ ಹತ್ಯೆ

ಕಲಬುರಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ, ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ (42) ಎಂಬವರನ್ನು ಸೋಮವಾರ ಹಾಡಹಗಲೇ ತಲ್ವಾರ್‌ನಿಂದ ಇರಿದು ಹತ್ಯೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಾರಣ ತಿಳಿದು ಬಂದಿಲ್ಲ. ಚಿತ್ತಾಪುರ ತಾಲೂಕಿನ ಶಹಾಬಾದ್ ರೈಲ್ವೆ ನಿಲ್ದಾಣದ ಬಳಿ ಕುಳಿತಿದ್ದ ಗಿರೀಶ ಅವರನ್ನು ದುಷ್ಕರ್ಮಿಗಳು ತಲ್ವಾರ್‌ನಿಂದ ಹತ್ತಾರು … Continued