ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹೆಚ್ಚುವರಿ 5 ಸಾವಿರ ಕೋಟಿ ರೂ.: ಸಿಎಂ ಬೊಮ್ಮಾಯಿ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಗಾಗಿ ಮುಂದಿನ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ ನೀಡಲಿರುವ ₹ 3 ಸಾವಿರ ಕೋಟಿ ಹೊರತುಪಡಿಸಿ ಹೆಚ್ಚುವರಿಯಾಗಿ ₹ 5 ಸಾವಿರ ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸಂದರ್ಭದಲ್ಲಿ ಶನಿವಾರ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಸ್ಥಳೀಯ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ … Continued

ಕಲಬುರಗಿ: ಮಹಿಳಾ ಪಿಎಸ್‌ಐ ‌ಮೇಲೆ ಮಚ್ಚಿನಿಂದ ಹಲ್ಲೆ, ಕೊಲೆ ಆರೋಪಿ ಮೇಲೆ ಫೈರಿಂಗ್‌

ಕಲಬುರಗಿ: ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ವಿಜಯಕುಮಾರ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದರಿಂದ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. … Continued

ಹಾಡಹಗಲೇ ಶಹಾಬಾದ್‌ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ ಭೀಕರ ಹತ್ಯೆ

ಕಲಬುರಗಿ: ಜಿಲ್ಲೆಯ ಶಹಾಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ, ಶಹಾಬಾದ್ ನಗರಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೂರ (42) ಎಂಬವರನ್ನು ಸೋಮವಾರ ಹಾಡಹಗಲೇ ತಲ್ವಾರ್‌ನಿಂದ ಇರಿದು ಹತ್ಯೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಕಾರಣ ತಿಳಿದು ಬಂದಿಲ್ಲ. ಚಿತ್ತಾಪುರ ತಾಲೂಕಿನ ಶಹಾಬಾದ್ ರೈಲ್ವೆ ನಿಲ್ದಾಣದ ಬಳಿ ಕುಳಿತಿದ್ದ ಗಿರೀಶ ಅವರನ್ನು ದುಷ್ಕರ್ಮಿಗಳು ತಲ್ವಾರ್‌ನಿಂದ ಹತ್ತಾರು … Continued

ಮದುವೆ ಮೆರವಣಿಗೆಯಲ್ಲಿ ಮಿನಿಲಾರಿ ಹಾಯ್ದು ನಾಲ್ವರು ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಕಲಬುರಗಿ: ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದವರ ಮೇಲೆ ಡಿಜೆ ಸೌಂಡ್‌ ಇದ್ದ ಮಿನಿಲಾರಿ ಹರಿದು ನಾಲ್ವರು ಸಾವಿಗೀಡಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಡತಾಲದಲ್ಲಿ ಸಂಭವಿಸಿದೆ. ಅಲ್ಲದೆ, ಘಟನೆಯಲ್ಲಿ ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ನಾಲ್ಕು ದಿನದ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತೆಲಂಗಾಣ- ಕರ್ನಾಟಕ ಗಡಿಭಾಗ ಸೇಡಂ ತಾಲೂಕಿನ ಕಡತಾಲ … Continued

ಪಿಎಸ್​​ಐ ನೇಮಕಾತಿ ಪರೀಕ್ಷೆ ಅಕ್ರಮ: 11 ಪೊಲೀಸ್‌ ಸಿಬ್ಬಂದಿ ಅಮಾನತು

ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂ ಮತ್ತಷ್ಟು ಪೊಲೀಸರ ತಲೆದಂಡವಾಗಿದೆ.‌ ಕರ್ತವ್ಯಲೋಪ ಆರೋಪದಡಿ 11 ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಂ.ಎಸ್. ಇರಾನಿ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭದ್ರತಾ ಕೆಲಸಕ್ಕಾಗಿ ಈ 11 ಮಂದಿ ಸಿಬ್ಬಂದಿ ನಿಯೋಜನೆಗೊಂಡಿದ್ದರು. ಕರ್ತವ್ಯಲೋಪ ಆರೋಪದಡಿ ಇಬ್ಬರು ಎಎಸ್ಐ ಹಾಗೂ 9 ಜನ ಕಾನ್​ಸ್ಟೇಬಲ್​​ಗಳನ್ನು ಅಮಾನತು ಮಾಡಿದ್ದು, … Continued

ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ: ಪ್ರಮುಖ ಆರೋಪಿ ನೀರಾವರಿ ಇಲಾಖೆ ಅಧಿಕಾರಿ ಸಿಐಡಿಗೆ ಶರಣಾಗತಿ…!

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ 20 ದಿ‌ನಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಪ್ರಮುಖ ಆರೋಪಿ, ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮಂಜುನಾಥ್ ಮೇಳಕುಂದಾ ಭಾನುವಾರ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ನಗರದ ಐವಾನ್ ಶಾಹಿ‌ ಅತಿಥಿಗೃಹದಲ್ಲಿರುವ ಸಿಐಡಿ ಕಚೇರಿಗೆ ಆಟೋದಲ್ಲಿ ಕೊರಳಿಗೆ ಒಂದು ಬ್ಯಾಗ್ ಹಾಕಿಕೊಂಡು ಮಂಜುನಾಥ ಬಂದಿದ್ದಾರೆ. ಈ ವೇಳೆ ಪಿಎಸ್ಐ ಪರೀಕ್ಷೆ … Continued

ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: 18 ದಿನದಿಂದ ತಲೆಮರೆಸಿಕೊಂಡಿದ್ದ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 18 ದಿನಗಳಿಂದ ತಲೆಮರೆಸಿಕೊಂಡಿದ್ದ ಬಿಜೆಪಿ ನಾಯಕಿ ಹಾಗೂ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಿವ್ಯ ಹಾಗರಗಿ ಕಳೆದ 18 ದಿನಗಳಿಂದ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದರು. ಪುಣೆಯ ಬಳಿ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಸಿಐಡಿ … Continued

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: 8 ಆರೋಪಿಗಳ ಜಾಮೀನು ಅರ್ಜಿ ವಜಾ

ಕಲಬುರಗಿ : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದಲ್ಲಿ ಬಂಧಿಸಲಾಗಿರುವ ಎಂಟು ಜನ ಆರೋಪಿಗಳ ಜಾಮೀನು ಅರ್ಜಿಯನ್ನು ಕಲಬುರಗಿ ಜೆ.ಎಮ್.ಸಿ ಕೋರ್ಟ್ ವಜಾಗೊಳಿಸಿದೆ. ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸರು ಹನ್ನೊಂದು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರ ಪೈಕಿ ಬಿಜೆಪಿ ಮುಖಂಡರಾದ ದಿವ್ಯಾ ಹಾಗರಗಿಯ ಪತಿ ರಾಜೇಶ್​ ಹಾಗರಗಿ, ವೀರೇಶ್, ಅರುಣ, ಪ್ರವೀಣ, ಚೇತನ, … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ; ಶಾಸಕರ ಗನ್ ಮ್ಯಾನ್ ಸೇರಿ ಇಬ್ಬರ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ಜಾಡು ಹಿಡಿದು ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ಮ್ಯಾನ್ ಸೇರಿ ಇಬ್ಬರು ಪೊಲೀಸ್ ಕಾನ್​ಸ್ಟೇಬಲ್​ಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ‌. ಕಲಬುರಗಿ ಸಿಟಿ ಆರ್ಮ್ಸ್ ರಿಸರ್ವ್ (ಸಿಎಆರ್) ಪೊಲೀಸ್ ಪೇದೆ ರುದ್ರಗೌಡ ಮತ್ತು ಅಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಗನ್‌ ಮ್ಯಾನ್ ಅಯ್ಯಣ್ಣ ದೇಸಾಯಿ … Continued

ಕಾರ್-ಬೈಕ್‌ ಡಿಕ್ಕಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ಹೋದ ಮದುಮಗ ಸೇರಿ ಇಬ್ಬರು ಸಾವು

ಕಲಬುರಗಿ : ಮದುವೆಯ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮದುಮಗ ಸೇರಿ ಇಬ್ಬರು ಮೃತಪಟ್ಟ ಘಟನೆ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಬಳಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಮೃತಪಟ್ಟವರನ್ನು ಯಡ್ರಾಮಿ ತಾಲೂಕಿನ ಕೋಣಸಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ ( 30) ಎಂದು ಗುರುತಿಸಲಾಗಿದೆ. ದೇವೇಂದ್ರಪ್ಪ ಅವರ … Continued