ಗಡಿಕೇಶ್ವಾರದ ಗ್ರಾಮದಲ್ಲಿ ಮತ್ತೆ ಕಂಪಿಸಿದ ಭೂಮಿ..!

ಕಲಬುರಗಿ: ಕಳೆದ ಕೆಲ ವಾರಗಳಿಂದ ಭೂಕಂಪನದಿಂದಾಗಿಯೇ ಸುದ್ದಿಯಾಗುತ್ತಿರುವ ಗಡಿಕೇಶ್ವಾರದಲ್ಲಿ ಇಂದು (ಶನಿವಾರ( ಬೆಳಗ್ಗೆ ಮತ್ತೆ ಭೂಮಿ ಕಂಪಿಸಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಗ್ರಾಮಸ್ಥರ ಪ್ರಕಾರ, ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರದಲ್ಲಿ‌ ಇಂದು (ಶನಿವಾರ) ಬೆಳಿಗ್ಗೆ 11.20ರ ಸುಮಾರಿನಲ್ಲಿ ಭೂಮಿಯಿಂದ ಜೋರು ಸದ್ದು ಕೇಳಿಬಂದಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ. ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಓಡಿದ್ದಾರೆ. ಕಲಬುರಗಿಯಿಂದ … Continued

ಕಲಬುರಗಿ: ಗಡಿಕೇಶ್ವಾರ ಸುತ್ತಲ ಗ್ರಾಮಗಳಲ್ಲಿ ಮತ್ತೆ ಭೂಕಂಪನ 3.4 ತೀವ್ರತೆ ದಾಖಲು

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರ ಸುತ್ತಲಿನ ಗ್ರಾಮಗಳಲ್ಲಿ ಮತ್ತೆ ಭೂಕಂಪ ಸಂಭವಿದೆ. ಇದರಿಂದ ಮನೆಯಲ್ಲಿ ಪಾತ್ರದ ಸಾಮಾನುಗಳು, ಗೋಡೆಗೆ ಹಾಕಿದ್ದ ಗಡಿಯಾರ ಮತ್ತಿತರ ವಸ್ತುಗಳು ಕೆಳಕ್ಕೆ ಬಿದ್ದಿವೆ. ಇಂದು (ಭಾನುವಾರ) ಬೆಳಿಗ್ಗೆ 6.05 ನಿಮಿಷಕ್ಕೆ ಭೂಮಿಯಿಂದ ಜೋರು ಸದ್ದು ಕೇಳಿ ಬಂದಿದ್ದಲ್ಲದೇ ಭೂಮಿ ನಡುಗಿದ ಅನುಭವವಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಭೂಕಂಪದ ಭೀತಿಯಲ್ಲಿಯೇ ಜನ … Continued

ಕಲಬುರಗಿ: ಬಿಜೆಪಿ ಸೇರಿದ ಪಾಲಿಕೆ ಪಕ್ಷೇತರ ಸದಸ್ಯ

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಜೆಡಿಎಸ್ ಜೊತೆ ಮೈತ್ರಿಗೆ ಕೈಚಾಚಿರುವ ಬಿಜೆಪಿ ಕಲಬುರಗಿಯ ಪಕ್ಷೇತರ ಕಾರ್ಪೊರೇಟರ್ ಒಬ್ಬರನ್ನು ಕಮಲ  ಪಕ್ಷ ತನ್ನ ಪಾಳಯಕ್ಕೆ ಸೆಳೆದಿದೆ. ಕಲಬುರಗಿಯ 36ನೇ ವಾರ್ಡಿನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಡಾ. ಶಂಭುಲಿಂಗ ಬಳಬಟ್ಟಿ ಶಾಸಕ ದತ್ತಾತ್ರೇಯ ಪಾಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು ವರದಿಯಾಗಿದೆ. ಪಕ್ಷದ ಜಗನ್ನಾಥ … Continued

ಕಲಬುರಗಿ: ಯಾರು ನಮ್ಗೆ ಮೇಯರ್‌ ಸ್ಥಾನ ಕೊಡ್ತಾರೋ ಅವ್ರಿಗೆ ನಮ್ಮ ಬೆಂಬಲ: ಕಾಂಗ್ರೆಸ್‌-ಬಿಜೆಪಿಗೆ ಜೆಡಿಎಸ್‌ ಪಾಲಿಕೆ ಸದಸ್ಯರ ಸಖತ್‌ ಆಫರ್‌…!

ಬೆಂಗಳೂರು: ಯಾರು ನಮಗೆ ಮೇಯರ್ ಸ್ಥಾನ ಕೊಡುತ್ತಾರೋ ಅವರಿಗೆ ನಮ್ಮ ಬೆಂಬಲಎಂದು ಕಲಬುರಗಿ ಮಹಾನಗರ ಪಾಲಿಕೆಯ ಜೆಡಿಎಸ್‌ ಸದಸ್ಯರುಷರತ್ತು ಮುಂದಿಟ್ಟಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷ ಯಾವುದೇ ಅಗಲಿ ಜೆಡಿಎಸ್​ಗೆ ಕಲ್ಬುಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೊಟ್ಟರೆ ಅವರಿಗೆ ನಮ್ಮ ಬೆಂಬಲ ನೀಡುತ್ತೇವೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಸದಸ್ಯರು ಹೇಳಿದ್ದಾರೆ. ಪಾಲಿಕೆ ಬೆಂಬಲ … Continued

ಬೊಮ್ಮಾಯಿ ಸಂಪುಟದಲ್ಲಿ ಕಲಬುರಗಿ, ರಾಯಚೂರು, ಯಾದಿಗಿರಿ ಜಿಲ್ಲೆ ಕಡೆಗಣನೆ

ಯಾದಗಿರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಸಂಪುಟದಲ್ಲಿ ಯಾದಗಿರಿ, ರಾಯಚೂರು ಮತ್ತು ಕಲಬುರಿಗ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧಯ ಸಿಕ್ಕಿಲ್ಲ. ಕಳೆದ ಬಾರಿಯೂ ಈ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಕ್ಕಿರಲಿಲಿಲ್ಲ. ಯಾದಗಿರಿ ಜಿಲ್ಲೆಯಿಂದ ರಾಜೂ ಗೌಡ ಅವರಿಗೆ ಈ ಬಾರಿ ಸಂಪುಟ ಸ್ಥಾನ ಸಿಗುತ್ತದೆ ಎಂಬ ಬಲವಾದ ನಂಬಿಕೆ ಇತ್ತು. ಆದರೆ ಅಂತಿಮ ಗಳಿಗೆಯಲ್ಲಿ ಅವರಿಗೆ ಸಚಿವ … Continued

ರೈತರ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ: ಸಿಎಂಯಡಿಯೂರಪ್ಪ

ಕಲಬುರಗಿ:ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು … Continued

ಕಲಬುರಗಿಯಲ್ಲಿ ತೊಗರಿ ಪಾರ್ಕ್‌ ಸ್ಥಾಪನೆ ಖಚಿತ

ಯಾದಗಿರಿ : ಇಡೀ ರಾಜ್ಯದಲ್ಲಿಯೇ ಕಲ್ಯಾಣ ಕರ್ನಾಟಕದಲ್ಲಿ ಅತೀ ಹೆಚ್ಚು ರೈತರು ತೊಗರಿ ಬೆಳೆ ಬೆಳೆಯುತ್ತಾರೆ. ಅವರಿಗೆ ಸರ್ಕಾರದಿಂದ ಸೂಕ್ತ ನ್ಯಾಯ ಒದಗಿಸುವ ಮೂಲಕ ಅವರ ಆರ್ಥಿಕ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿಗೌಡ ಬಾಸರೆಡ್ಡಿ ನಾಲವಾರ ಹೇಳಿದರು. ಮಸ್ಕಿ ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ … Continued

ಬಿಗಿ ಭದ್ರತೆ ಮಧ್ಯೆಯೂ ಶ್ರೀ ಶರಣಬಸವೇಶ್ವರರ ಜಾತ್ರೆಯಲ್ಲಿ ಭಕ್ತರು ಭಾಗಿ

ಕಲಬುರಗಿ: ಹೋಳಿ ಪಂಚಮಿಯ ದಿನದಂದು ನಡೆಯುವ 18ನೇ ಶತಮಾನದ ಸಂತ, ಮಹಾದಾಸೋಹಿ  ಶ್ರೀ ಶರಣಬಸವೇಶ್ವರರ ಪುಣ್ಯಸ್ಮರಣೋತ್ಸವದ ಅಂಗವಾಗಿ ನಡೆಯುವ ಶ್ರೀ ಶರಣಬಸವೇಶ್ವರರ 199ನೇ ಜಾತ್ರೆಯ ಧಾರ್ಮಿಕ ಆಚರಣೆ ಹಾಗೂ ರಥೋತ್ಸವ ಪೋಲಿಸರ ಭದ್ರತಾ ವ್ಯವಸ್ಥೆ ಮಧ್ಯೆ ಸರಳವಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಶರಣಬಸವೇಶ್ವರ ದೇವಾಸ್ಥಾನದ ಎಲ್ಲ ಪ್ರವೇಶದ್ವಾರಕ್ಕೆ ಬ್ಯಾರಿಕೇಡ್‌ ಹಾಕುವ ಮೂಲಕ ಬಂದ್‌ ಮಾಡಲಾಗಿತ್ತು. ಆಯಾ ದ್ವಾರ  … Continued

ಶರಣಬಸವೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಉಚ್ಛಾಯಿ ರಥೋತ್ಸವ

ಕಲಬುರಗಿ : ಕಲ್ಯಾಣ ಕರ್ನಾಟಕದ ಐತಿಹಾಸಿಕ ಕಲಬುರಗಿ ಶ್ರೀ ಶರಣಬಸವೇಶ್ವರರ 199ನೇ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು (ಗುರುವಾರ) ಏಪ್ರಿಲ್ 1ರಂದು ಸಂಜೆ ಉಚ್ಛಾಯಿ ರಥೋತ್ಸವ ನಡೆಯುವ ಮೂಲಕ ಚಾಲನೆ ದೊರಕಲಿದೆ. ಕಳೆದ ವರ್ಷ ಕೋವಿಡ ಹಿನ್ನೆಲೆಯಲ್ಲಿ ಜಾತ್ರೆ ರದ್ದು ಮಾಡಲಾಗಿತ್ತು. ಈ ತಿಂಗಳಲ್ಲಿ ಮತ್ತೆ ಕೊರೊನಾ ಅರ್ಭಟ ಹೆಚ್ಚಾಗಿದ್ದರಿಂದ ಮತ್ತೆ ಜಿಲ್ಲಾಡಳಿತ ರದ್ದು ಪಡಿಸಿದೆ. … Continued

ಕಲಬುರಗಿ-ಮಂಬೈ ವಿಮಾನ ಹಾರಾಟ ಆರಂಭ

ಕಲಬುರಗಿ:ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಕಲ್ಯಾಣ ‌ಕರ್ನಾಟಕದ ಪ್ರಮುಖ ‌ನಗರ ಕಲಬುರಗಿ ‌ಮಧ್ಯೆ ಅಲಯನ್ಸ್ ಏರ್ ಸಂಸ್ಥೆಯ ನೇರ ವಿಮಾನ ‌ಸಂಚಾರ ಗುರುವಾರದಿಂದ ಆರಂಭವಾಯಿತು. ಮುಂಬೈನಿಂದ ಹೊರಟ ಮೊದಲ ವಿಮಾನ ಬೆಳಿಗ್ಗೆ 9.07ಕ್ಕೆ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಎಂಟು ಜನ ಪ್ರಯಾಣಿಕರು ಬಂದರು. 9.40ಕ್ಕೆ ಇಲ್ಲಿಂದ ಹೊರಟ ವಿಮಾನದಲ್ಲಿ 22 ಪ್ರಯಾಣಿಕರು ತೆರಳಿದರು. ಮಹಾರಾಷ್ಟ್ರದಲ್ಲಿ … Continued