ಮಹಿಳೆಯರಿಗೆ ಗೌರವ ನೀಡದ ಕಮಲ್‌ ಹಾಸನ್‌ ಮಹಿಳೆಯರಿಗೆ ಹೇಗೆ ರಕ್ಷಣೆ ಕೊಡ್ತಾರೆ: ಬಿಜೆಪಿ ನಾಯಕಿ ವನತಿ ಶ್ರೀನಿವಾಸ ಪ್ರಶ್ನೆ

ಚೆನ್ನೈ: ಮಹಿಳೆಯರಿಗೆ ಗೌರವ ನೀಡದ ನಟ ಕಮಲ್‌ ಹಾಸನ್‌ ಅವರ ಮಕ್ಕಳ್‌ ನೀಧಿ ಮಾಯಮ್‌ ಪಕ್ಷ ಮಹಿಳೆಯರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಬಿಜೆಪಿ ಮಹಿಳಾ ಘಟಕದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ನನಗೆ ಅವಕಾಶ ನೀಡಿದ್ದಾರೆ. ಕಮಲ್‌ ಹಾಸನ್‌ ನನ್ನ … Continued

ಕಮಲ್‌ ಹಾಸನ್‌ ಪಕ್ಷದ ಖಜಾಂಚಿ ಮನೆಯಲ್ಲಿ ೮೦ ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ: ಐಟಿ

ಚೆನ್ನೈ; ನಟ ಕಮಲ್‍ಹಾಸನ್ ಸ್ಥಾಪಿಸಿರುವ ಮಕ್ಕಳ ನೀಧಿ ಮಾಯಂ ಪಕ್ಷದ ಖಜಾಂಚಿ ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 11.50 ಕೋಟಿ ನಗದು ಸೇರಿದಂತೆ 80 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಲಾಗಿದೆ ಎಂದು ತಿಳಿಸಿದ್ದಾರೆ. ಬುಧವಾರ ಮತ್ತು ಗುರುವಾರ ತಮಿಳುನಾಡಿನ ತ್ರಿಪುರಾ, ಧರ್ಮಾಪುರಂ, ಚೆನ್ನೈ ಸೇರಿದಂತೆ ಐದು ಜಾಗಗಳಲ್ಲಿ ಆದಾಯ … Continued

ನಟ ಕಮಲ್ ಹಾಸನ್ ಕಾರಿನ ಮೇಲೆ ದಾಳಿಗೆ ಯತ್ನ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ತುರುಸು ಪಡೆಯುತ್ತಿರುವಾಗಲೇ ಮಕ್ಕಳ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಕಮಲ್ ಹಾಸನ್ ಅವರ ಕಾರಿನ ಮೇಲೆ ಅಪರಿಚಿತರು ದಾಳಿ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಗಾಂಧಿ ರಸ್ತೆಯಲ್ಲಿ ಕಮಲ್ ಹಾಸನ್ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಅಪರಿಚಿತರು ಕಾರಿನ ಗ್ಲಾಸ್ ಒಡೆಯಲು … Continued

ಕೊಯಮತ್ತೂರಿನಿಂದ ಕಮಲ್‌ ಹಾಸನ್‌ ಸ್ಪರ್ಧೆ

ಚೆನ್ನೈ: ಖ್ಯಾತ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಮೊದಲ ಬಾರಿಗೆ ಚುನಾವನೆಯಲ್ಲಿ ಸ್ಪರ್ಧಿಸುತ್ತಿದ್ದು, ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಶುಕ್ರವಾರ (ಮಾ.೧೨) ತಮ್ಮ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಕ್ಕಳ್ ನೀಧಿ ಮೈಯಂ(ಎಂಎನ್‌ಎಂ) ಅಧ್ಯಕ್ಷ ಕಮಲ್ ಹಾಸನ್ , ತಮ್ಮ ತಂದೆ ದಿ. ಶ್ರೀನಿವಾಸನ್ ಅವರನ್ನು … Continued

ತಮಿಳುನಾಡು ಚುನಾವಣೆಯಲ್ಲಿ ತೃತೀಯರಂಗಕ್ಕೆ ನನ್ನದೇ ನೇತೃತ್ವ: ಕಮಲ್‌ ಹಾಸನ್‌

ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ತಮ್ಮ ನೇತೃತ್ವದಲ್ಲಿಯೇ ತೃತಿಯ ರಂಗ ರಚನೆಯಾಗಲಿದೆ ಎಂದು ನಟ ಹಾಗೂ ಮಕ್ಕಳ ನೀಧಿ ಮಯಂ ಪಕ್ಷದ ಸಂಸ್ಥಾಪಕ ಕಮಲ್‌ ಹಾಸನ್‌ ತಿಳಿಸಿದ್ದಾರೆ. ಮೈತ್ರಿ ಕುರಿತು ಡಿಎಂಕೆ ನಾಯಕರಿಂದ ಆಹ್ವಾನ ಬಂದರೆ ಅದನ್ನು ಪರಿಗಣಿಸಲಾಗುವುದು. ಪ್ರಸ್ತುತ ರಾಜ್ಯದಲ್ಲಿ ಎಐಎಡಿಎಂಕೆ-ಬಿಜೆಪಿ, ಡಿಎಂಕೆ-ಕಾಂಗ್ರೆಸ್‌ ಮೈತ್ರಿ ಅಸ್ತಿತ್ವದಲ್ಲಿವೆ. ತೃತಿಯ ರಂಗ ರೂಪಗೊಳ್ಳಲು ಪೂರಕ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದರು. … Continued