ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿ ಎಸ್‌.ಎಲ್‌. ಭೈರಪ್ಪ : ಕಮಲ ಹಾಸನ್‌

ಬೆಂಗಳೂರು : ಬುಧವಾರ ವಿಧಿವಶರಾದ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್‌.ಎಲ್‌ ಭೈರಪ್ಪ (94) ಅವರ ಸಾವಿಗೆ ಬಹುಭಾಷಾ ನಟ ಕಮಲ ಹಾಸನ್‌ ಸಂತಾಪ ಸೂಚಿಸಿದ್ದಾರೆ. ಭೈರಪ್ಪನವರು ನಮ್ಮ ಕಾಲದ ಶ್ರೇಷ್ಠ ಸಾಹಿತ್ಯಿಕ ಧ್ವನಿಗಳಲ್ಲಿ ಒಬ್ಬರಾಗಿದ್ದರು ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ. ʼನಮ್ಮ ಕಾಲದ ಕಥೆಗಾರರ ಪಿತಾಮಹ ಎಸ್. ಎಲ್. ಭೈರಪ್ಪ ಅವರು ನಮ್ಮೊಂದಿಗಿದ್ದಾಗಲೇ ಅವರನ್ನು … Continued

ಬಾಲ್ಯದಲ್ಲಿ ತಾಯಿ, ಅಣ್ಣ, ಅಕ್ಕ, ತಂಗಿ ಪ್ಲೇಗ್‌ ನಿಂದ ಸಾವು….ತಮ್ಮನ ಶವ ಒಬ್ಬನೇ ಹೊತ್ತೊಯ್ದು ಅಂತ್ಯಕ್ರಿಯೆ ಮಾಡಿದ್ದ ಬಾಲಕ ಭೈರಪ್ಪ

ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ SL Bhyrappa)ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಆದರೆ ಭೈರಪ್ಪ ( ಅವರ ಬಾಲ್ಯ ಅತ್ಯಂತ ದುರಂತದಿಂದ ಕೂಡಿತ್ತು. ಅವರು ಬಾಲ್ಯದಲ್ಲಿ ಪ್ಲೇಗ್‌ಗೆ ತುತ್ತಾಗಿದ್ದರು. ಹೇಗೋ ಅದರಿಂದ ಪಾರಾದರು. ಆದರೆ ಅವರ ಕುಟುಂಬದ ಸದಸ್ಯರನ್ನು ಹೆಮ್ಮಾರಿ ಪ್ಲೇಗ್‌ ಬಲಿ ತೆಗೆದುಕೊಂಡಿತ್ತು. ಈ ಬಗ್ಗೆ ಅವರು ತಮ್ಮ ಆತ್ಮಕಥನ ಭಿತ್ತಿಯಲ್ಲಿಯೂ ಬರೆದಿದ್ದಾರೆ. ಅವರ … Continued

ಕನ್ನಡದ ಖ್ಯಾತ ಕಾದಂಬರಿಕಾರ, ʼಸರಸ್ವತಿ ಸಮ್ಮಾನ್‌ʼ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸರಸ್ವತಿ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಎಸ್‌ ಎಲ್‌ ಭೈರಪ್ಪ (SL Bhyrappa) ಇಂದು, ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಹಾಸನ ಜಿಲ್ಲೆಯ … Continued

ಹೊನ್ನಾವರ : ಜಾನಪದ ತಜ್ಞ, ಸಾಹಿತಿ ಡಾ. ಎನ್.ಆರ್. ನಾಯಕ ನಿಧನ

ಹೊನ್ನಾವರ: ಖ್ಯಾತ ಜಾನಪದ ತಜ್ಞ, ನಾಟಕಕಾರ, ಕವಿ, ಸಾಹಿತಿ ಡಾ. ಎನ್.ಆರ್. ನಾಯಕ (90) (Dr. N.R. Nayak) ಅವರು ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ತತೆಯಿಂದ ಮೂರ್ನಾಲ್ಕು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳು, ಒಬ್ಬರು ಮಗಳು ಇದ್ದಾರೆ. … Continued

ಕನ್ನಡದ ಖ್ಯಾತ ಸಾಹಿತಿ ಎಚ್‌.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ

ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್‌ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕವಿ, ನಾಟಕಕಾರ, ವಿಮರ್ಶಕ, ಪ್ರಾಧ್ಯಾಪಕ, ಭಾವಗೀತ ರಚನಕಾರ, ಚಲನಚಿತ್ರ ನಿರ್ದೇಶಕ, ಕತೆಗಾರ, ಚಿತ್ರಗೀತ ರಚನೆಕಾರ ಆಗಿದ್ದ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಂದು, ಶುಕ್ರವಾರ (ಮೇ 30) ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನ ಎಚ್‌ಎಸ್‌ವಿ ಎಂದೇ ಕರೆಯಲ್ಪಡುತ್ತಿದ್ದ … Continued

ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ ಘೋಷಣೆ

ಬೆಂಗಳೂರು : ಕನ್ನಡದ ಸಾಹಿತಿ ಬಾನು ಮುಷ್ತಾಕ್ (Banu mushtaq) ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (booker prize 2025)ಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ʼಹಾರ್ಟ್ ಲ್ಯಾಂಪ್ʼ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು 57.34 ಲಕ್ಷ ನಗದನ್ನು ಒಳಗೊಂಡಿದೆ. ಮೇ 21ರಂದು ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಈ … Continued

ಅಕ್ಷರಲೋಕದ ನಂದಾದೀಪ ಮಹಾಂತಪ್ಪ ನಂದೂರ ಅಭಿನಂದನ ಗ್ರಂಥ ಏ.4ರಂದು ಲೋಕಾರ್ಪಣೆ

(೪-೦೪-೨೦೨೫) ಕೇಶ್ವಾಪುರ ರೈಲ್ವೆ ಅಧಿಕಾರಗಳ ಕ್ಲಬ್‌ನಲ್ಲಿ ಮಹಾಂತಪ್ಪ ನಂದೂರ ಅವರ “ನಂದ ದುರಿತ ಜ್ಯೋತಿ”ಅಭಿನಂದನ ಗ್ರಂಥ ಲೋಕಾರ್ಪಣೆಯಾಗುತ್ತಿದ್ದು, ಈ ನಿಮಿತ್ತ ಲೇಖನ) ವೃತ್ತಿ ರೈಲ್ವೆ ಇಲಾಖೆ, ಪ್ರವೃತ್ತಿ ಕಥೆ, ಕವನ, ನಾಟಕ ಮುಂತಾದ ಸಾಹಿತ್ಯಾಸಕ್ತಿಯ ಚಟುವಟಿಕೆಗಳು…ಇದು ಖ್ಯಾತ ಕವಿ ಮಹಾಂತಪ್ಪ ನಂದೂರ ಅವರ ವ್ಯಕ್ತಿತ್ವವನ್ನು ಬಣ್ಣಿಸಬಹುದಾದ ಒಂದು ವಾಕ್ಯದ ನಿರೂಪಣೆ. ಮೂಲತಃ ಕಲಬುರಗಿಯವರಾದ ಇವರು ಉದ್ಯೋಗಕ್ಕಾಗಿ … Continued

ಹಿರಿಯ ಸಾಹಿತಿ, ಕತೆಗಾರ ನಾ. ಡಿಸೋಜ ನಿಧನ

ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ … Continued

ಖ್ಯಾತ ಸಾಹಿತಿ ಡಾ.ಕಮಲಾ ಹಂಪನಾ ನಿಧನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲ ಹಂಪನಾ ಅವರು ಶನಿವಾರ (ಜೂನ್ 22) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಮಲ ಹಂಪನಾ ಅವರು ಪತಿ, ಖ್ಯಾತ ಸಾಹಿತಿ ಹಂಪ ನಾಗರಾಜಯ್ಯ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ … Continued

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಹಿರಿಯ ಸಾಹಿತಿ ಗುರುಲಿಂಗ ಕಾಪಸೆ (96 ವರ್ಷ) ಮಂಗಳವಾರ ತಡರಾತ್ರಿ ನಗರದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ಮೂಲತಃ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ … Continued