ಕರ್ನಾಟಕದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ಬಿಜೆಪಿಯು ಕರ್ನಾಟಕ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಬಗ್ಗೆ ಬಿಜೆಪಿ ರಾಜ್ಯ ಚುನಾವಣಾ ಅಧಿಕಾರಿಗಳು ಬುಧವಾರ ಪ್ರಕಟಣೆ ಹೊರಡಿಸಿದ್ದಾರೆ. ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಬಾಕಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ ಎಂದು … Continued

ಕರ್ನಾಟಕದಲ್ಲಿ 24 ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 9 ಜಿಲ್ಲೆಗಳಿಗೆ ರೆಡ್ ಅಲರ್ಟ್​, ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ದಿನ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಜಿಲ್ಲೆಗಳು ಪ್ರದೇಶಗಳು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಜೂ.12ರಿಂದ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, 9 ಜಿಲ್ಲೆಗಳಿಗೆ ಎರಡು ದಿನ ರೆಡ್‌ ಅಲರ್ಟ್‌ ಘೋಷಣೆ … Continued

ಜಾತಿ ಗಣತಿ ವರದಿಗೆ ವಿರೋಧ, ಕೊನೆಗೂ ಮಣಿದ ಸರ್ಕಾರ : ʼಕೈʼಕಮಾಂಡ್ ಸೂಚನೆಯಂತೆ ಮರು ಸಮೀಕ್ಷೆಗೆ ನಿರ್ಧಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಜಾತಿ ಗಣತಿ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲೇ ಮುಖ್ಯಮಂತ್ರಿ … Continued

ಆಗಸ್ಟ್‌ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಪ್ಲಾಸ್ಟಿಕ್ ಬಳಕೆಯಿಂದ ಮುಕ್ತಗೊಳಿಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲು ದೇವಸ್ಥಾನಗಳ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಸೋಮವಾರ ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ (ಮುಜರಾಯಿ) … Continued

ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ … Continued

ಒಂದೇ ದಿನದಲ್ಲಿ 1.06 ಕೋಟಿ ಲೀಟರ್ ಹಾಲು ಸಂಗ್ರಹ : ಕೆಎಂಎಫ್ ನಿಂದ ಹೊಸ ದಾಖಲೆ…!

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ಸಾಧ್ಯವಾಗಿದ್ದು, ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡಲು ಕೆಎಂಎಫ್‌ಗೆ ಸಾಧ್ಯವಾಗಿದೆ ಎಂದು ಹೇಳಲಾಗಿದೆ. … Continued

ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್‌ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ

ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: … Continued

ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ಕರ್ನಾಟಕದಲ್ಲಿ ಶನಿವಾರ 58 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ; ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆ ಮುಂದುವರೆದಿದ್ದು ಶನಿವಾರ (ಮೇ ೩೧) ಹೊಸದಾಗಿ 58 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ವೇಳೆ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ … Continued