ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ

ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರದ … Continued

ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

ವಿಧಾಸಭೆಯಿಂದ 18 ಬಿಜೆಪಿ ಶಾಸಕರು ಅಮಾನತು ; ಸದನದಿಂದ ಹೊರಗೆ ಹೊತ್ತೊಯ್ದ ಮಾರ್ಷಲ್‌ ಗಳು

ಬೆಂಗಳೂರು : ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಶುಕ್ರವಾರ 18 ಬಿಜೆಪಿ ಶಾಸಕರನ್ನು ಆರು ತಿಂಗಳವರೆಗೆ ಅಮಾನತುಗೊಳಿಸಿದ್ದಾರೆ. ಸಭಾಪತಿ ಆದೇಶವನ್ನು ಧಿಕ್ಕರಿಸಿ ಅಶಿಸ್ತು ಮತ್ತು ಅಗೌರವದಿಂದ ನಡೆದುಕೊಂಡು ಸದಸ್ಯರು ವಿಧಾನಸಭೆ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡ ಶಾಸಕರು ಸಭಾಧ್ಯಕ್ಷರ ವೇದಿಕೆ ಏರುವುದು, ಸಭಾಧ್ಯಕ್ಷರತ್ತ ಪೇಪರ್ ಎಸೆದು ಸದನದ ಬಾವಿಗಿಳಿದು … Continued

ಬಿಬಿಎಂಪಿ ವಿಭಜಿಸುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ -2024 ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : ವಿಪಕ್ಷ ಬಿಜೆಪಿ ಸಭಾತ್ಯಾಗದ ನಡುವೆ ಬಿಬಿಎಂಪಿಯನ್ನು ಏಳು ಪಾಲಿಕೆಗಳ ವರೆಗೆ ವಿಭಜಿಸುವ ಹಾಗೂ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚಿಸುವ ‘ಗ್ರೇಟರ್‌ ಬೆಂಗಳೂರು ಆಡಳಿತ ಮಸೂದೆ’ (Greater Bengaluru Governance Bill 2024)ಯನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಹಾಗೂ ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಹಾಗೂ … Continued

ವೀಡಿಯೊ…| ಮುಡಾ ಹಗರಣ : ಉಭಯ ಸದನಗಳಲ್ಲಿ ಬಿಜೆಪಿ, ಜೆಡಿಎಸ್‌ ಅಹೋರಾತ್ರಿ ಧರಣಿ

ಬೆಂಗಳೂರು : ಸದನದಲ್ಲಿ ಮುಡಾ ಹಗರಣ ಕೋಲಾಹಲ ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮುಡಾ ಬದಲಿ ನಿವೇಶನ ಹಂಚಿಕೆ ಆರೋಪದ ಕುರಿತು ಚರ್ಚೆಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ವಿಧಾನ ಮಂಡಳದ ಉಭಯ ಸದನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಬುಧವಾರ ರಾತ್ರಿಯಿಡೀ ಧರಣಿ ನಡೆಸಿದರು. ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ನಗರಾಭಿವೃದ್ಧಿ … Continued

ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್‌.ಅಶೋಕ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ … Continued

ಸದನದಲ್ಲಿ ಅಶಿಸ್ತು : ಬಿಜೆಪಿಯ 10 ಶಾಸಕರ ಅಮಾನತು

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು (BJP MLAs) ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್​ ಯು.ಟಿ. ಖಾದರ್​ ಅಮಾನತು ಮಾಡಿದ್ದಾರೆ. ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, … Continued

ಪ್ರಧಾನಿ ನರೇಂದ್ರ ಮೋದಿ ಮಾತು ಕೇಳಿದ್ದರೆ 5 ವರ್ಷ ನಾನೇ ಸಿಎಂ ಆಗಿರುತ್ತಿದ್ದೆ : ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್​​ ಅನ್ನು ಪದೇ ಪದೇ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸುವ ಮುನ್ನ ಒಂದು ವಿಚಾರ ತಿಳಿದುಕೊಳ್ಳಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ನಾನು ಅಂದು ಕೇಳಿದ್ದರೆ ನಾನು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ … Continued

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ : ಸದನದಲ್ಲಿ ಕೋಲಾಹಲ, ಸಚಿವ ಚೆಲುವರಾಯಸ್ವಾಮಿ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಆತ್ಮಹತ್ಯೆ ಯತ್ನದ ಪ್ರಕರಣ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದರು. ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,‌ ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡದಿಂದ … Continued

ಹಿಂದುತ್ವ-ಗೋಮಾತೆ ಹೆಸರಲ್ಲಿ ಯತ್ನಾಳ, ಡಿಕೆ ಶಿವಕುಮಾರ ಹೆಸರಲ್ಲಿ ಬಸವರಾಜ ಶಿವಗಂಗಾ ಪ್ರಮಾಣವಚನ

ಬೆಂಗಳೂರು : ನೂತನವಾಗಿ ಆಯ್ಕೆಗೊಂಡಿರುವ ಎಲ್ಲ ಶಾಸಕರಿಗೂ ಇಂದು ಸೋಮವಾರದಿಂದ ಆರಂಭವಾಗಿರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಮಾಣವಚನ ಬೋಧನೆ ಕಾರ್ಯಕ್ರಮ ನಡೆಯುತ್ತಿದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಅವರು ಹಿಂದುತ್ವ ಹಾಗೂ ಗೋಮಾತೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಶಾಸಕ ಬಸವರಾಜ ಶಿವಗಂಗಾ ಅವರು ಡಿ ಕೆ ಶಿವಕುಮಾರ ಅವರ ಹೆಸರಿನಲ್ಲಿ ಅವರು ಪ್ರಮಾಣವಚನ … Continued