ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ … Continued

ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2024ರ ಲೋಕಸಭೆ ಚುನಾವಣೆಗೆ ತನ್ನ ಏಳನೇ ಅಭ್ಯರ್ಥಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಏಳನೇ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಮತ್ತು ಕರ್ನಾಟಕದ ಚಿತ್ರದುರ್ಗ ಎರಡು ಮೀಸಲು ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿಯು ಪಕ್ಷವು ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ (SC) ಮಾಜಿ ಸಚಿವ ಗೋವಿಂದ ಕಾರಜೋಳ … Continued

ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಜನಾರ್ದನ ರೆಡ್ಡಿ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು, ಸೋಮವಾರ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್​​.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ತಮ್ಮ ಪಕ್ಷ ಕೆಆರ್‌ಪಿಪಿಯನ್ನು ಬಿಜೆಪಿ ಜೊತೆ ವಿಲೀನ … Continued

ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆ : ಬಿಜೆಪಿ ಸೇರುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ, ಕೆಆರ್‌ಪಿಪಿ ಪಕ್ಷವೂ ಬಿಜೆಪಿಯಲ್ಲಿ ವಿಲೀನ..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ,‌ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವುದಾಗಿ ಹೇಳಿದ್ದಾರೆ. ಬಳ್ಳಾರಿ, … Continued

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಎಂದು ಈಶ್ವರಪ್ಪ ಘೋಷಣೆ : ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಬಿಜೆಪಿ ನಾಯಕ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ( ಮಾರ್ಚ್‌ 15) ಘೋಷಿಸಿದ್ದಾರೆ. ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಪುತ್ರ ಕಾಂತೇಶ ಅವರಿಗೆ ಟಿಕೆಟ್ ಸಿಗದ … Continued

ಕರ್ನಾಟಕ ಬಿಜೆಪಿ ವಕ್ತಾರರು, ಪ್ರಕೋಷ್ಠಗಳಿಗೆ ಸಂಚಾಲಕರ ನೇಮಕ, ರಾಜ್ಯ ಬಿಜೆಪಿ ವಕ್ತಾರರಾಗಿ ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ನೇಮಕ

ಬೆಂಗಳೂರು: ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಬಿಜೆಪಿ ಮುಖ್ಯ ವಕ್ತಾರರು ಮತ್ತು ವಕ್ತಾರರು ಮತ್ತು ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಒಬ್ಬ ಮುಖ್ಯ ವಕ್ತಾರ ಹಾಗೂ 10 ಮಂದಿಯನ್ನು ವಕ್ತಾರರಾಗಿ ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರಾಗಿ ಅಶ್ವತ್ಥ ನಾರಾಯಣ (ಮಾಜಿ ವಿಧಾನಪರಿಷತ್ ಸದಸ್ಯ) ನೇಮಕ ಮಾಡಲಾಗಿದೆ. ವಕ್ತಾರರಾಗಿ … Continued

500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿಎಂದು ಸಿದ್ಧರಾಮಯ್ಯ ಹೇಳಿರುವ ವೀಡಿಯೊ ಟ್ವೀಟ್ ಮಾಡಿದ ಬಿಜೆಪಿ

ಬೆಂಗಳೂರು : ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಮತದಾರರನ್ನು ಸೆಳೆಯಲು ಬೇರೆಬೇರೆ ಹೆಸರನ್ನಿಟ್ಟು ವಿವಿಧ ರಾಜಕೀಯ ಪಕ್ಷಗಳು ಪ್ರಚಾರ ನಡೆಸುತ್ತಿವೆ, ಪಕ್ಷಾಂತರಗಳು ಜೋರಾಗಿ ನಡೆಯುತ್ತಿದೆ. ಈ ಮಧ್ಯೆ ಪ್ರತಿಯೊಬ್ಬರಿಗೂ 500 ರೂ. ಕೊಟ್ಟು ಪ್ರಚಾರಕ್ಕೆ ಕರೆದುಕೊಂಡು ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆನ್ನಲಾದ ವೀಡಿಯೊವೊಂದು ವೈರಲ್ … Continued