ಕರ್ನಾಟಕ ಬಜೆಟ್‌ 2025 | ₹1.16 ಲಕ್ಷ ಕೋಟಿ ಹೊಸ ಸಾಲ ಪಡೆಯಲು ನಿರ್ಧಾರ ; ರಾಜ್ಯದ ಒಟ್ಟು ಸಾಲ…?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿಗೆ ದಾಖಲೆಯ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಅವರು ಉಲ್ಲೇಖಿಸಿದ್ದಾರೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹಾಗೂ ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. … Continued

ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ

ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ … Continued

ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ ಸಿಂಗ್‌ ಹೆಸರು ; ಬಜೆಟ್‌ ನಲ್ಲಿ ಘೋಷಣೆ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​​ನಲ್ಲಿ ಘೋಷಣೆ ಮಾಡಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ … Continued

ಕರ್ನಾಟಕ ಬಜೆಟ್‌ 2025 : ಬಜೆಟ್‌ ಗಾತ್ರ ₹4 ಲಕ್ಷ ಕೋಟಿ, ಅತಿಥಿ ಶಿಕ್ಷಕರು, ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ಹೆಚ್ಚಳ, ಗ್ಯಾರಂಟಿ ಯೋಜನೆಗಳಿಗೆ 51,300 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ (ಮಾರ್ಚ್ 7) ಬೆಳಿಗ್ಗೆ 10:15ಕ್ಕೆ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಅವರು ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಕುವೆಂಪು ಅವರ ಕವನವನ್ನು ವಾಚಿಸುವ ಮೂಲಕ ಬಜೆಟ್‌ ಮಂಡನೆ ಶುರು ಮಾಡಿದ ಅವರು ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. 2025-26ನೇ ಸಾಲಿನ ಕರ್ನಾಟಕ ಬಜೆಟ್ ಗಾತ್ರ 4,09,549 … Continued

ಕರ್ನಾಟಕ ಬಜೆಟ್‌ 2025 : ಕೃಷಿ ಕ್ಷೇತ್ರಕ್ಕೆ ಏನೇನು ಕೊಟ್ಟರು ಸಿದ್ದರಾಮಯ್ಯ..?

ಬೆಂಗಳೂರು : ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ರ ದಾಖಲೆಯ ಬಂಜೆಟ್ (State Budget)​ ಮಂಡಿಸಿದ್ದು, ದಾಖಲೆಯ 16ನೇ ಆಯವ್ಯಯ ಮಂಡಿಸಿದ್ದಾರೆ. ದೇಶದ ಬೆನ್ನೆಲಬು ರೈತರ ಪರವಾಗಿ ಕೃಷಿ ಕ್ಷೇತ್ರಕ್ಕೆ ಬಂಪರ್ ಕೊಡುಗೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಮತ್ತು ತೋಟಗಾರಿಕೆ ವಲಯಕ್ಕೆ ಒಟ್ಟು ₹7145 ಕೋಟಿ ಅನುದಾನ ಮೀಸಲಿಟ್ಟಿದೆ. ’ಕೃಷಿ … Continued

ರಾಜ್ಯದ ಬಜೆಟ್​ ಮಂಡನೆಗೆ ಮುಹೂರ್ತ ಫಿಕ್ಸ್

ಬೆಂಗಳೂರು: 2025-26ನೇ ಸಾಲಿನ ರಾಜ್ಯದ ಬಜೆಟ್‌ ಅನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ ಹಾಗೂ ಬೇಡಿಕೆಗಳ ಬಗ್ಗೆ ಚರ್ಚಿಸಿದ ಬಳಿಕ ಸುದ್ದಿಗಾರರಿಗೆ … Continued