ಬಿಎಸ್‌ವೈ ಬಜೆಟ್ಟಿನ ವಿಶೇಷತೆಗಳೇನು? ಪ್ರಮುಖವಾದದ್ದು ಇಲ್ಲಿದೆ ನೋಡಿ

*ಆಯವ್ಯಯ ಗಾತ್ರ (ಸಂಚಿತ ನಿಧಿ)- 2,46,207 ಕೋಟಿ ರೂ. *ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; ಸಾರ್ವಜನಿಕ ಋಣ 71,332 ಕೋಟಿ ರೂ. ಮತ್ತು ಬಂಡವಾಳ ಸ್ವೀಕೃತಿ 71,463 ಕೋಟಿ ರೂ. *ಒಟ್ಟು ವೆಚ್ಚ- 2,46,207 ಕೋಟಿ ರೂ.; ರಾಜಸ್ವ ವೆಚ್ಚ – 1,87,405 ಕೋಟಿ ರೂ.; ಬಂಡವಾಳ … Continued

ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ದೊಡ್ಡದು:ನಿರೀಕ್ಷೆ ಹುಸಿ ಮಾಡಿದ ಬಿಎಸ್‌ವೈ..!!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಧಾನಸಭೆಯಲ್ಲಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬಜೆಟ್‍ನ ಒಟ್ಟು ಗಾತ್ರ 2,43,734 ಕೋಟಿ ರೂ.ಗಳಾಗಿದೆ. ಇದು ಕಳೆದ ಸಲಕ್ಕಿಂತ ದೊಡ್ಡ ಗಾತ್ರದ ಬಜೆಟ್‌ ಆಗಿದ್ದು, ಕೊವಿಡ್‌ ಸಂದರ್ಭದಲ್ಲಿ ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ಸಣ್ಣ ಮಾಡಬಹುದು ಎಂಬ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಕಳೆದ ವರ್ಷ 2,33,137 ಕೋಟಿ … Continued

ಅನುಭವ ಮಂಟಪ ನಿರ್ಮಾಣಕ್ಕೆ 200 ಕೋಟಿ ರೂ.ಬಿಡುಗಡೆ

ಬೆಂಗಳೂರು: ಬಸವಕಲ್ಯಾಣದಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಬಜೆಟ್‍ನಲ್ಲಿ 200 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಪ್ರಾಧಿಕಾರದ ಅಡಿ ವಿವಿಧ ಕಾಮಗಾರಿಗಳಿಗಾಗಿ 50 ಕೋಟಿ, ಬಸವಣ್ಣ ಅವರ ಜನ್ಮ ಸ್ಥಳ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಬಂಪರ್‌ ‌: ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ

  ಬೆಂಗಳೂರು; 2021-22ನೇ ಸಾಲಿನ ಬಜೆಟ್ನಲ್ಲಿ ಅಂತಾರಾಷ್ಟ್ರೀಯ ಮಹಿಳೆಯರ ದಿನವಾದ ಕಾರಣ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಪ್ರಕಟಿಸಲಾಗಿದೆ.ಮಹಿಳಾ ಉದ್ದೇಶಿತ ಯೋಜನೆಗಳಿಗೆ 37,188 ಕೋಟಿ ರೂ ಅನುದಾನ, ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಆರು ತಿಂಗಳ ಮಕ್ಕಳ ಆರೈಕೆ ರಜೆಯನ್ನು ಸಹ ಬಜೆಟ್‌ನಲ್ಲಿ ಮುಖ್ಯಮಂತ್ರಿ ಯಡಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ, ಶೇ.4 ರಷ್ಟು … Continued

ರಾಜ್ಯ ಬಜೆಟ್‌ ಪ್ರಮುಖ ಹೈಲೈಟ್‌ಗಳು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು, ೨೦೨೧-೨೨ನೇ ಸಾಲಿಗಾಗಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ೨,೪೩,೭೩೪ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ್ದಾರೆ. ಮಂಕು ತಿಮ್ಮನ ಕಗ್ಗದ ‘ಕಲ್ಲಾಗು ಬೆಟ್ಟದಡಿ ಮನದಿ ಮಲ್ಲಿಗೆಯಾಗು.’ಸಾಲುಗಳನ್ನು ಸ್ಮರಿಸಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್‌ ಮಂಡಿಸಿದರು. ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; … Continued

ರಾಜ್ಯ ಬಜೆಟ್‌: ಕಳಸಾ-ಬಂಡೂರಿ ಯೋಜನೆಗೆ 1,677 ಕೋಟಿ ರೂ. ಮೀಸಲು

ಬೆಂಗಳೂರು : ಮಹದಾಯಿ ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಬಜೆಟ್‌ನಲ್ಲಿ 1,677 ಕೋಟಿ ರೂ. ಅನುದಾನ ನೀಡುವ ಮೂಲಕ ಮುಖ್ಯಮಂತ್ರಿಗಳು ಉತ್ತರ ಕರ್ನಾಟಕ ಭಾಗದ ರೈತರ ಬೇಡಿಕೆ ಈಡೇರಿಸಿದ್ದಾರೆ. ಬೆಳಗಾವಿ, ಗದಗ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ರೈತರು ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ಆಗ್ರಹಿಸಿ ಕಳೆದ 20 ವರ್ಷಗಳಿಂದ … Continued

ರಾಜ್ಯ ಬಜೆಟ್‌: ಗ್ರಾಮೀಣ ಪ್ರದೇಶದಲ್ಲಿ ಮನೆಗಳಿಗೆ ನೀರೊದಗಿಸಲು 4,316 ಕೋಟಿ ರೂ ನಿಗದಿ

ಬೆಂಗಳೂರು : ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಎಲ್ಲ ವ್ಯವಹಾರಗಳ ಗಣಕೀಕರಣಕ್ಕೆ ಕ್ರಮ, ಜಲ ಜೀವನ್ ಮಿಷನ್ ಯೋಜನೆಯೊಂದಿಗೆ ಒಗ್ಗೂಡಿಸಿ ರೂಪಿಸಿರುವ ಮನೆ ಮನೆಗೆ ಗಂಗೆ ಯೋಜನೆಯಡಿ 2021-22 ಸಾಲಿನಲ್ಲಿ 4,316 ಕೋಟಿ ರೂ. ವೆಚ್ಚದಲ್ಲಿ 22 ಲಕ್ಷ ಗ್ರಾಮೀಣ ಕುಟುಂಬಗಳಿಗೆ ಕಾರ್ಯಾತ್ಮಕ ಸಂಪರ್ಕ ಒದಗಿಸಲು ಕ್ರಮ ಹಾಗೂ ಹಳ್ಳಿಗಳಿಗೆ ಬಲ್ಕ್ ನೀರು ಸರಬರಾಜು ಮಾಡಲು … Continued

ರಾಜ್ಯ ಬಜೆಟ್: ಕೃಷಿ ಪೂರಕ ಚಟುವಟಿಕೆಗಳಿಗೆ ೩೧೦೨೮ ಕೋಟಿ ರೂ. ಅನುದಾನ

ಬೆಂಗಳೂರು: ೨೦೨೧-೨೨ನೇ ನೇ ಸಾಲಿನ ರಾಜ್ಯ ಬಜೆಟ್​ನಲ್ಲಿ ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ ಸರ್ಕಾರ ೩೧,೦೨೮ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ. ಅಲ್ಲದೆ, ಸಾವಯವ ಕೃಷಿ ಉತ್ತೇಜನಕ್ಕೆ ೫೦೦ ಕೋಟಿ ರೂ.ಗಳ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆ ಇಟ್ಟಂಗಿಹಾಳ ಗ್ರಾಮದಲ್ಲಿ ಆತ್ಮನಿರ್ಭರ ಭಾರತ ಅಭಿಯಾನ ಯೋಜನೆಯಡಿ ಆಹಾರ … Continued

ವೃದ್ಧರು, ವಿಧವೆಯರು, ವಿಶೇಷ ಚೇತನರಿಗೆ ಮನೆ ಬಾಗಿಲಿಗೇ ಮಾಸಾಶನ

ಬೆಂಗಳೂರು : ಬಜೆಟ್ನಲ್ಲಿ ಅಶಕ್ತರು, ವೃದ್ಧರು,ವಿಧವೆಯರು ಮತ್ತು ವಿಶೇಷ ಚೇತನರಿಗೆ ಸರ್ಕಾರದ ದತ್ತಾಂಶ ಆಧರಿಸಿ ಮನೆ ಬಾಗಿಲಿಗೇ ಮಾಸಾಶನ ಅಭಿಯಾನಕ್ಕೆ ಚಾಲನೆ ನೀಡಲಾಗವುದು ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಎಲ್ಲ ವ್ಯವಹಾರಗಳ ಗಣಕೀಕರಣಕ್ಕೆ ಕ್ರಮ, ತ್ವರಿತವಾಗಿ ನಿಖರ ಭೂ-ದಾಖಲೆಗಳನ್ನು ಒದಗಿಸಲು ಗಣಕೀಕೃತ ಅಕಾರ ಬಂದ್ ಮಾಹಿತಿ ಮತ್ತು ಪರಣಿ ಮಾಹಿತಿಯನ್ನು ಸಂಯೋಜಿಸಲು ಕ್ರಮ … Continued

ರಾಜ್ಯ ಬಜೆಟ್‌: ಎಪಿಎಂಸಿ ಮಾರುಕಟ್ಟೆ ಕಾರ್ಯಕ್ಷಮತೆ ಹೆಚ್ಚಳಕ್ಕೆ 198 ಕೋಟಿ

ಬೆಂಗಳೂರು: ರಾಜ್ಯದಲ್ಲಿ 5500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಡಿಸಿಸಿ ಬ್ಯಾಂಕ್‍ನಲ್ಲಿ ಸರ್ಕಾರದ ಸಹಭಾಗಿತ್ವ ಪ್ರೋತ್ಸಾಹಿಸಲು ಷೇರು ಬಂಡವಾಳ ಹೆಚ್ಚಿಸುವ ಉದ್ದೇಶದಿಂದ 21 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗಳಿಗೆ 10 ಲಕ್ಷ ರೂ.ಗಳ ಗರಿಷ್ಠ ಮಿತಿಗೊಳಪಟ್ಟು ಶೇ.25ರಷ್ಟು ಷೇರು … Continued