ಬಿಜೆಪಿ ಬಹುಮತ ಪಡೆಯಲಿದೆ; ಈ ಮಾತಿಗೆ ನಾನು ಈಗಲೂ ಬದ್ಧ : ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಚುನಾವಣಾ ಸಮೀಕ್ಷೆಗಳು ಹೇಳಿಕೊಳ್ಳಲಿ. ಆದರೆ ನಾವೇ ಸ್ಪಷ್ಟ ಬಹುಮತ ಪಡೆಯುತ್ತೇವೆ. ಈ ಮಾತಿಗೆ ನಾನು ಈಗಲೂ ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಗುರುವಾರ, ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದಿಂದ ನಮಗೆ ಪ್ಲಸ್ ಆಗಿದೆ. ನಾವು ಬಹುಮತ ಪಡೆಯುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. … Continued

ಕರ್ನಾಟಕ ವಿಧಾನಸಭೆ ಚುನಾವಣೆ: ರಾಜ್ಯಾದ್ಯಂತ ದಾಖಲೆ ಪ್ರಮಾಣದ ಮತದಾನ, ಬೆಂಗಳೂರು ನೀರಸ – ಜಿಲ್ಲಾವಾರು ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಾಖಲೆಯ ಮತದಾನವಾಗಿದ್ದು, ಕಳೆದ ಬಾರಿಗಿಂತಲೂ ಶೇಕಡಾವಾರು ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಈ ಬಾರಿ 72.67%ರಷ್ಟು ಮತದಾನವಾಗಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ 72.44%ರಷ್ಟು ಮತದಾನವಾಗಿತ್ತು ಹಾಗೂ 2013ರ ಚುನಾವಣೆಯಲ್ಲಿ 71.83ರಷ್ಟು ಮತದಾನವಾಗಿತ್ತು. ಇದಕ್ಕೆ ಮೋಸ್ಟಲ್‌ ಮತದಾನ ಹಾಗೂ ಮನೆಯಿಂದಲೇ ಮತದಾನ ಮಾಡಿದ 80 ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರ ಮತದಾನದ … Continued

ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು…

ಚಿಕ್ಕಮಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ. ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ. ಕರ್ನಾಟಕ ವಿಧಾನಸಭೆ … Continued

ರಾಜ್ಯ ವಿಧಾನಸಭೆ ಚುನಾವಣೆ : ಬೆಳಗ್ಗೆ 11:30ರ ವರೆಗೆ ಶೇ 21.94 ಮತದಾನ

ಬೆಂಗಳೂರು: ರಾಜ್ಯ, ಇಂದು ಬುಧವಾರ ಬೆಳಿಗ್ಗೆಯಿಂದ ಮತದಾನ ನಡೆಯುತ್ತಿದ್ದು, ಬೆಳಗ್ಗೆ 11:30ರ ಸುಮಾರಿಗೆ ರಾಜ್ಯದಲ್ಲಿ ಶೇ 21.94ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈವರೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಅತಿ ಕಡಿಮೆ ಮಾತದಾನವಾಗಿದ್ದರೆ ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮತನದಾನವಾಗಿದೆ. ಜಿಲ್ಲಾವಾರು ಮಾಹಿತಿ ಇಂತಿದೆ: ಬೆಂಗಳೂರು ಸೆಂಟ್ರಲ್‌ ಶೇ 19.18, ಬೆಂಗಳೂರು ಉತ್ತರ ಶೇ 20.76, ಬೆಂಗಳೂರು ದಕ್ಷಿಣ ಶೇ … Continued

ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮೇ 8 ರಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ರಾಜಕೀಯ ಪಕ್ಷಗಳು ಮೇ 8ರಂದು (ಸೋಮವಾರ) ಮಾತ್ರ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಅವಕಾಶವಿದ್ದು, ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ. ಆ ಬಳಿಕ ಕ್ಷೇತ್ರಗಳಲ್ಲಿ ಆಯಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರೂ ಇರುವಂತಿಲ್ಲ. ಹೊರಗಡೆಯಿಂದ ಬಂದಿರುವ … Continued

ಫುಡ್‌ ಡೆಲಿವರಿ ಬಾಯ್ಸ್‌ ಜೊತೆ ಬೈಕ್‌ ಸವಾರಿ ಮಾಡಿ ಟಿಫಿನ್‌ ಸವಿದ ರಾಹುಲ್‌ ಗಾಂಧಿ | ವೀಕ್ಷಿಸಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಫುಡ್‌ ಡೆಲಿವರಿ ಬಾಯ್‌ನ ಸ್ಕೂಟರ್‌ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಂಗಳೂರಿನಲ್ಲಿ ತಮ್ಮ ಎರಡನೇ ದಿನದ ಮೆಗಾ ರೋಡ್‌ ಶೋ ಅನ್ನು ಟ್ರಿನಿಟಿ ಸರ್ಕಲ್‌ನಲ್ಲಿ ಮುಗಿಸಿದರು. ಬಳಿಕ ಇಂದು ಭಾನುವಾರ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದ ರಾಹುಲ್‌ … Continued

ಮೇ 9, 10ರಂದು ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ ಮೇ 10 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ (KSRTC)​ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ನಡೆಯುವ ಕಾರಣ ಮೇ 9, 10ರಂದು ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್​ಆರ್​ಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಮೇ … Continued

ಕರ್ನಾಟಕ ಚುನಾವಣೆ: ಬೆಂಗಳೂರಲ್ಲಿ ಎರಡು ದಿನ ಮೋದಿ ರೋಡ್ ಶೋ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲದಿನಗಳಷ್ಟೇ ಬಾಕಿ ಉಳಿದಿದ್ದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಮತ್ತು ಭಾನುವಾರ ಎರಡು ದಿನ ರೋಡ್ ಶೊ ನಡೆಸಿ ಮತಯಾಚಿಸಲಿದ್ದಾರೆ ಎಂದು ತಿಳಿಸಲಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ಬೃಹತ್ ಸಮಾವೇಶ ಹಾಗೂ ರೋಡ್ ಶೊ ನಡೆಸಿ ಮೋದಿ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದಾರೆ. ಈಗ ಬೆಂಗಳೂರಿನಲ್ಲಿ ಮತಬೇಟೆ ನಡೆಸಲಿದ್ದಾರೆ. … Continued

ಕರ್ನಾಟಕ ಚುನಾವಣೆ : 24 ಬಂಡಾಯ ಅಭ್ಯರ್ಥಿಗಳನ್ನು ಉಚ್ಚಾಟಿಸಿದ ಕಾಂಗ್ರೆಸ್‌

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ 24 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದೆ. ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ನಂತರ ಅನೇಕ ಕಾಂಗ್ರೆಸ್‌ ನಾಯಕರು ಪಕ್ಷೇತರವಾಗಿ ಅಥವಾ ಬಂಡಾಯ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈಗ ಕೆಪಿಸಿಸಿ ಶಿಸ್ತು ಪಾಲನ ಸಮಿತಿ ಅವರ ವಿರುದ್ಧ ಕ್ರಮ ಕೈಗೊಂಡಿದೆ. ಮಾಜಿ ಶಾಸಕರಾದ ರಾಮಕೃಷ್ಣ ದೊಡ್ಡಮನಿ, … Continued

ಕರ್ನಾಟಕ ಚುನಾವಣೆ 2023: ಲಿಂಗಾಯತರು, ಒಕ್ಕಲಿಗರಿಗೆ ಮೀಸಲಾತಿಯಿಂದ ಬಿಜೆಪಿ ಮೇಲೆ ಪರಿಣಾಮ ಏನಾಗಬಹುದು..? ; ಎನ್‌ಡಿಟಿವಿ ಜನಾಭಿಪ್ರಾಯ ಏನು ಹೇಳಿದೆ..?

ಬೆಂಗಳೂರು: ಉದ್ಯೋಗ ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗಿದ್ದ ಮೀಸಲಾತಿ ತೆಗೆದು ಲಿಂಗಾಯತ ಮತ್ತು ಒಕ್ಕಲಿಗರಿಗೆ 4% ಮೀಸಲಾತಿಯನ್ನು ನೀಡುವ ರಾಜ್ಯದ ಬಿಜೆಪಿ ಸರ್ಕಾರದ ನಿರ್ಧಾರವು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ -2023 ರಲ್ಲಿ ಪಕ್ಷಕ್ಕೆ ಪ್ರಯೋಜನ ನೀಡಬಹುದು ಎಂದು ಎನ್‌ಡಿಟಿವಿ ಲೋಕನೀತಿ-ಕೇಂದ್ರದ ಅಭಿವೃದ್ಧಿಶೀಲ ಸಮಾಜಗಳ ಅಧ್ಯಯನ (CSDS) ಸಹಯೋಗದೊಂದಿಗೆ ನಡೆಸಿದ ಸಾರ್ವಜನಿಕ ಅಭಿಪ್ರಾಯದಲ್ಲಿ ನಿರೀಕ್ಷಿಸಲಾಗಿದೆ. ಎನ್‌ಡಿಟಿವಿ ಸಮೀಕ್ಷೆಯು … Continued