ಬೆಂಗಳೂರಿನಲ್ಲಿ ‘ನಮೋ’ ಭರ್ಜರಿ ರೋಡ್ ಶೋ….ಪ್ರಧಾನಿ ಮೋದಿಗೆ ಹೂಮಳೆಯ ಸ್ವಾಗತ | ವೀಕ್ಷಿಸಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಶನಿವಾರ ಉತ್ತರ ಬೆಂಗಳೂರಿನಲ್ಲಿ ನಡೆದ ಮೆಗಾ ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸಂಜೆ ನರೇಂದ್ರ ಮೋದಿ ಭರ್ಜರಿಯಾಗಿಯೇ ರೋಡ್ ಶೋ ನಡೆಸಿದ್ದಾರೆ. ಸಂಜೆ 6:15ಕ್ಕೆ ಮಾಗಡಿ ರಸ್ತೆ ಜಂಕ್ಷನ್‌ನಿಂದ ಆರಂಭವಾದ ರೋಡ್‌ ಶೋ, ರಿಂಗ್‌ ರೋಡ್‌ ಮೂಲಕ ಸುಮನಹಳ್ಳಿ ಜಂಕ್ಷನ್‌ವರೆಗೂ ಸಾಗಿತು. ಪ್ರಧಾನಿ ಮೋದಿಗೆ ಬಿಜೆಪಿ ಬೆಂಬಲಿಗರು ಹೂ … Continued

ರಾಜ್ಯ ವಿಧಾನಸಭೆ ಚುನಾವಣೆ: ಇಂದಿನಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭ

ಬೆಂಗಳೂರು: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇಂದಿನಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಆರಂಭವಾಗಲಿದೆ. ಬ್ಯಾಲೆಟ್ ಪೇಪರ್ ವೋಟಿಂಗ್ ನಲ್ಲಿ 80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲ ಚೇತನರಿಗೆ ಹಾಗೂ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿರುವ ಪೊಲೀಸ್, ಚುನಾವಣೆ ಸಿಬ್ಬಂದಿಗೆ ಇಂದಿನಿಂದ ಮತದಾನ ಮಾಡಲು ಅವಕಾಶ ನೀಡಲಾಗಿದ್ದು, ಇಂದಿನಿಂದ ಆರಂಭವಾಗಲಿಎ. ಹಾಗೂ ಮೇ 6ರ … Continued

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ

ಜೆಡಿಎಸ್ ಪ್ರಣಾಳಿಕೆ ಬಿಡುಗಡೆ : ರೈತ ಯುವಕರನ್ನು ಮದುವೆಯಾದರೆ ₹2 ಲಕ್ಷ ಪ್ರೋತ್ಸಾಹ ಧನ ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ 13 ದಿನ ಮಾತ್ರ ಬಾಕಿ ಉಳಿದಿರುವಾಗ ಜೆಡಿಎಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರೈತ ಯುವಕರನ್ನು ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ನೀಡುವುದಾಗಿ ಹೇಳಿದೆ. ಬಿಜೆಪಿ ಸರ್ಕಾರ ರದ್ದು ಮಾಡಿರುವ ಮುಸ್ಲಿಮರ … Continued

ಕರ್ನಾಟಕ ಚುನಾವಣಾ ಪೂರ್ವ ಸಿ ವೋಟರ್‌ ಸಮೀಕ್ಷೆ ಬಹಿರಂಗ ; ಬಹುಮತ ಯಾವುದಕ್ಕೆ..? ಕಾಂಗ್ರೆಸ್ಸೋ-ಬಿಜೆಪಿಯೋ..? ಅತಂತ್ರವೋ..?

ಬೆಂಗಳೂರು :ಕರ್ನಾಟಕ ಚುನಾವಣೆಯ ಮೇ 10ರಂದು ನಡೆಯಲಿದೆ, ಇದೇ ವೇಳೆ ಚುನಾವಣೆ ಪೂರ್ವದ ಸಿ ವೋಟರ್‌ ಸಮೀಕ್ಷೆ ಹೊರಬಿದ್ದಿದ್ದು, ಕಾಂಗ್ರೆಸ್‌ ಹೆಚ್ಚು ಸ್ಥಾನಗಳಿಸಲಿದ್ದು, ಸರಳ ಬಹುಮತ ಪಡೆಯಬಹುದು ಎಂದು ಭವಿಷ್ಯ ನುಡಿದಿದೆ. ಕಾಂಗ್ರೆಸ್‌ 106-116 ಸ್ಥಾನ, ಬಿಜೆಪಿ 79-89 ಸ್ಥಾನ, ಜೆಡಿಎಸ್‌ 24-34 ಹಾಗೂ ಇತರರು 0-5 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಹೇಳಿದೆ. … Continued

ಬಿಜೆಪಿ ಗೆಲುವಿಗಾಗಿ ಮೋದಿ ಪ್ರಚಾರದ ಮೆಗಾ ಪ್ಲಾನ್‌ ಸಿದ್ಧ : 6 ದಿನ, 23 ಕಡೆ ಬೃಹತ್‌ ಸಮಾವೇಶ, 50 ಲಕ್ಷ ಬೂತ್‌ ಕಾರ್ಯಕರ್ತರ ಜೊತೆ ಮೋದಿ ಸಂವಾದ….!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗಾಗಿ ಪ್ರಧಾನಿ ಮೋದಿಯವರ ಪ್ರಚಾರದ ಯೋಜನೆ ಸಿದ್ಧಗೊಂಡಿದೆ. ಕರ್ನಾಟಕದಲ್ಲಿ ಒಟ್ಟು 6 ದಿನ ಪ್ರಚಾರಕ್ಕೆ ಬರಲಿರುವ ಮೋದಿ, 180 ಕ್ಷೇತ್ರಗಳ ವ್ಯಾಪ್ತಿ ಒಳಗೊಂಡಂತೆ 21 ಕಡೆ ಬೃಹತ್‌ ಚುನಾವಣಾ ಸಮಾವೇಶ ಹಾಗೂ ರೋಡ್‌ ಶೋ ನಡೆಸಲಿದ್ದಾರೆ. ಮೈಸೂರು, ಬೆಂಗಳೂರು ರೋಡ್ ಶೋ ನಿಗದಿಯಾಗಿದ್ದು, ಉಳಿದೆಡೆ ಪ್ರಚಾರಕ್ಕಾಗಿ ರೂಪು ರೇಷೆ … Continued

ಬಿಜೆಪಿ ತೊರೆದ ಮತ್ತೊಬ್ಬ ನಾಯಕಿ : ಸಚಿವ ಆನಂದ ಸಿಂಗ್ ಸಹೋದರಿ ರಾಣಿ ಸಂಯುಕ್ತ ಕಾಂಗ್ರೆಸ್ಸಿಗೆ ಸೇರ್ಪಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಮಾಜಿ ಸದಸ್ಯೆ ಹಾಗೂ ಸಚಿವ ಆನಂದ್ ಸಿಂಗ್ ಸಹೋದರಿ ಬಿಎಲ್ ರಾಣಿ ಸಂಯುಕ್ತ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ್ದು, ಇಂದು, ಶನಿವಾರ (ಏ.22) ಕಾಂಗ್ರೆಸ್ಸಿಗೆ ಹೊಸಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಣಿ ಸಂಯುಕ್ತಾ ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ, ಶುಕ್ರವಾರ ರಾತ್ರಿ ಕಾಂಗ್ರೆಸ್‌ ಕರ್ನಾಟಕ … Continued

ಕರ್ನಾಟಕ ವಿಧಾನಸಭೆ ಚುನಾವಣೆ: 3,044 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧ; 5 ಕ್ಷೇತ್ರಗಳ ಪರಿಶೀಲನೆ ಬಾಕಿ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ 4989 ನಾಮಪತ್ರಗಳ ಪೈಕಿ 3044 ಅಭ್ಯರ್ಥಿಗಳ ನಾಮಪತ್ರ ಅಂಗೀಕೃತಗೊಂಡಿದೆ. ಆದರೆ ಇನ್ನು ಐದು ಕ್ಷೇತ್ರಗಳ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆಗೆ ಬಾಕಿ ಉಳಿದಿದೆ. ಚುನಾವಣಾ ‌ಆಯೋಗ ಶುಕ್ರವಾರ 3 ಗಂಟೆಯ ವರೆಗೆ ನಾಮಪತ್ರ ಪರಿಶೀಲನೆ ನಡೆಸಿತ್ತು. 4,989 ನಾಮಪತ್ರಗಳ ಪೈಕಿ 4,607 ಪುರುಷರು ಹಾಗೂ 381 ಮಹಿಳಾ ಅಭ್ಯರ್ಥಿಗಳು … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು : ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತನ್ನ 6 ನೇ ಹಾಗೂ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಾಕಿ ಉಳಿದಿದ್ದ 5 ಕ್ಷೇತ್ರಗಳಿಗೆ ಬುಧವಾರ ತಡರಾತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಶಿಡ್ಲಘಟ್ಟದಲ್ಲಿ ಹಾಲಿ ಶಾಸಕ ಮುನಿಯಪ್ಪ ಹಾಗೂ ರಾಯಚೂರು ನಗರದಲ್ಲಿ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಭೋಸರಾಜು ಅವರ ಕುಟುಂಬಕ್ಕೆ … Continued

ಕರ್ನಾಟಕ ವಿಧಾನಸಭೆ ಚುನಾವಣೆ : ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ, ಈಶ್ವರಪ್ಪ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಬುಧವಾರ ಬಿಡುಗಡೆಯಾಗಿದೆ. ಮಾಜಿ ಸಚಿವ ಹಾಗೂ ಕೆ.ಎಸ್. ಈಶ್ವರಪ್ಪ ಕುಟುಂಬಕ್ಕೆ ಟಿಕೆಟ್ ಕೈತಪ್ಪಿದೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಚನ್ನಬಸಪ್ಪ ಎಂಬವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ರಾಯಚೂರು ಜಿಲ್ಲೆ ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಬಿ.ವಿ. ನಾಯಕ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಾಜಿ ಸಚಿವ … Continued

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪಕ್ಷದ 5ನೇ ಪಟ್ಟಿ ಬಿಡುಗಡೆ, ಸಿಎಂ ಬೊಮ್ಮಾಯಿ ವಿರುದ್ಧದ ಅಭ್ಯರ್ಥಿ ದಿಢೀರ್‌ ಬದಲು

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಮತ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾಯಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿರುವ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷವು ಈ ಮೊದಲು ಮಹಮ್ಮದ್ ಯೂಸುಫ್ ಸವಣೂರ ಅವರಿಗೆ ಟಿಕೆಟ್‌ ಘೋಷಣೆ ಮಾಡಿತ್ತು. ಆದರೆ ಈಗ ದಿಢೀರ್‌ ಅವರ ಹೆಸರನ್ನು … Continued