ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.48ರಷ್ಟು ಮಳೆ ಕೊರತೆ..!

ಬೆಂಗಳೂರು: ರಾಜ್ಯ ದಲ್ಲಿ ಕಳೆದ ಎರಡು ವಾರಗಳಿಂದ ನೈರುತ್ಯ ಮುಂಗಾರು ದುರ್ಬಲಗೊಂಡಿದ್ದು, ವಾಡಿಕೆಗಿಂತ ಶೇ.48ರಷ್ಟು ಮಳೆ ಕೊರತೆ ಉಂಟಾಗಿದೆ. ಆ.1ರಿಂದ 15ರವರೆಗಿನ ಅವಧಿಯಲ್ಲಿ ರಾಜ್ಯದಲ್ಲಿ ಹಲವೆಡೆ ಮಳೆ ಕೊರತೆ ಮುಂದುವರೆದಿದೆ. ಚದುರಿದಂತೆ ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆ ಮುಂದುವರೆದಿದ್ದರೂ ಹಲವೆಡೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜುಲೈನಲ್ಲಿ ಬಿದ್ದ ಉತ್ತಮ ಮಳೆಯಿಂದಾಗಿ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿಯಾಗುವ … Continued