ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾದ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ ಹಾಗೂ ನಿಗಮದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಪ್ರಕರಣಗಳ ಸಮಗ್ರ ತನಿಖೆಯನ್ನು ವಿಶೇಷ ತನಿಖಾ ತಂಡ ರಚಿಸಿ ನಡೆಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯ ನಂತರ ಎಸ್‌ಐಟಿ ರಚಿಸಿ ಸರ್ಕಾರದಿಂದ ಅಧಿಕೃತ ಆದೇಶ ಹೊಡಿಸಲಾಗಿದೆ. … Continued

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಲೈಂಗಿಕ ಹಗರಣದ ಆರೋಪದ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡನೇ ಪತ್ರ ಬರೆದಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪಿತ ವೀಡಿಯೊ ಕ್ಲಿಪ್‌ಗಳನ್ನು ಒಳಗೊಂಡಿರುವ ಪೆನ್ ಡ್ರೈವ್‌ಗಳು ಹೊರಹೊಮ್ಮಿದ ನಂತರ ಜೆಡಿ(ಎಸ್) ಸಂಸದ … Continued

ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ: ಸರ್ಕಾರದ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಶೇ. 33ರಷ್ಟನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಸೂಚಿಸಿದೆ. ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಹೊರಗುತ್ತಿಗೆ ನೇಮಕದಲ್ಲಿಯೂ ಮೀಸಲಾತಿ ಜಾರಿ ಮಾಡಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿವಿಧ ಹಂತದ ಸಿಬ್ಬಂದಿ ನೇಮಕಾತಿಯನ್ನು ಹೊರಗುತ್ತಿಗೆ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಹಾಸನ : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ಡಿ. ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯವು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. … Continued

ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರವನ್ನು ಕೂಡ ಬಿಡುಗಡೆ ಮಾಡಿದೆ. ಕಳೆದ ವರ್ಷ ನೈರುತ್ಯ ಮಾನ್ಸೂನ್‌ ವಿಫಲವಾಗಿ ರಾಜ್ಯದಲ್ಲಿ ಭೀಕರ … Continued

ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ … Continued

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ … Continued

5, 8, 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಸಮ್ಮತಿ

ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಿರುವ ಕರ್ನಾಟಕ … Continued

ಕರ್ನಾಟಕದ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ … Continued

ವಿವಿಧ ಅಕಾಡೆಮಿ-ಪ್ರಾಧಿಕಾರಕ್ಕೆ ನೇಮಕ ; ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಪುರುಷೋತ್ತಮ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಮುಕುಂದರಾಜ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯುಎಚ್, ಕರ್ನಾಟಕ … Continued