ಮನೆ ಬದಲಿಸುವ ಬಾಡಿಗೆದಾರರಿಗೆ ಗುಡ್‌ ನ್ಯೂಸ್‌ : ‘ಗೃಹ ಜ್ಯೋತಿ’ ನಿಯಮದಲ್ಲಿ ಬದಲಾವಣೆಗೆ ಸೂಚನೆ

ಬೆಂಗಳೂರು : ಇಂಧನ ಇಲಾಖೆಯು ಗೃಹಜ್ಯೋತಿಯ ಫ‌ಲಾನುಭವಿಗಳು ಬಾಡಿಗೆ ಮನೆ ಅಥವಾ ಮನೆ ಬದಲಾಯಿಸಿದ ಬಳಿಕವೂ ಗೃಹಜ್ಯೋತಿ ಯೋಜನೆ ಲಾಭ ಮುಂದುವರಿಸಲು ಅವಕಾಶ ಕಲ್ಪಿಸಿದೆ. ಗೃಹ ಜ್ಯೋತಿ ಯೋಜನೆಯಿಂದ ಗ್ರಾಹಕರು ತಮ್ಮ ಖಾತೆಗಳನ್ನು ಡಿ-ಲಿಂಕ್ ಮಾಡಲು, ವಿಳಾಸ ಬದಲಾವಣೆ ಮತ್ತು ಶಿಫ್ಟಿಂಗ್‌ ನಂತರ ಮರು ಲಿಂಕ್ ಮಾಡಲು ಅವಕಾಶ ಒದಗಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ವಿದ್ಯುತ್ ಸರಬರಾಜು … Continued

ಕರ್ನಾಟಕಕ್ಕೆ ಎಲ್ಲಿ ಹಣ ನೀಡಿಲ್ಲ ? ಎಲ್ಲಿ ಕಡಿಮೆ ಹಣ ಸಿಗ್ತಿದೆ..? : ಕರ್ನಾಟಕಕ್ಕೆ ಕೊಟ್ಟ ಹಣದ ಲೆಕ್ಕ ನೀಡಿ ಮರುಪ್ರಶ್ನಿಸಿದ ನಿರ್ಮಲಾ ಸೀತಾರಾಮನ್‌

ನವದೆಹಲಿ: ತೆರಿಗೆ ಹಂಚಿಕೆ ಮತ್ತು ಕೇಂದ್ರದ ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಕಾಂಗ್ರೆಸ್ ನಾಯಕರು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ ದಿನ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗದ ಶಿಫಾರಸುಗಳನ್ನು “ಕೊನೆಯ ಪದದವರೆಗೆ” ಅನುಸರಿಸಿದ್ದೇವೆ ಎಂದು ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ವಿತ್ತ ಸಚಿವರು ಅಂಕಿಅಂಶಗಳನ್ನು … Continued

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿಗೂ ಹೆಚ್ಚು ನಷ್ಟ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣ ಹಂಚಿಕೆ ಕಡಿತ ಮಾಡಿ ಮೋಸಲ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ … Continued

ಓಲಾ, ಉಬರ್ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಟ್ಯಾಕ್ಸಿಗಳಿಗೆ ಏಕರೂಪ ದರ ನಿಗದಿಪಡಿಸಿದ ಸರ್ಕಾರ

ಬೆಂಗಳೂರು: ಪೀಕ್ ಅವರ್​ನಲ್ಲಿ ದರ ಏರಿಸಿ ಜನರ ಸುಲಿಗೆ ತಡೆಯಲು ಆ್ಯಪ್ ಆಧಾರಿತ ಅಗ್ರಿಗೇಟರ್‌ಗಳಾದ ಓಲಾ, ಉಬರ್, ರ್ಯಾಪಿಡೋ ಮತ್ತು ಸಿಟಿ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರ ಈಗ ಏಕರೂಪ ದರ ನಿಗದಿಪಡಿಸಿದೆ. ಆ್ಯಪ್ ಆಧಾರಿತ ಕ್ಯಾಬ್ ಅಗ್ರಿಗೇಟರ್‌ಗಳು ಮತ್ತು ಸಿಟಿ ಟ್ಯಾಕ್ಸಿಗಳ ದರಗಳು ಏಕರೂಪವಾಗಿರುತ್ತವೆ ಎಂದು ಸರ್ಕಾರದ ಆದೇಶವು ಹೇಳಿದೆ. ಪರಿಷ್ಕೃತ ದರಗಳು ತಕ್ಷಣದಿಂದ ಜಾರಿಗೆ … Continued

12 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಉಜ್ವಲ್ ಕುಮಾರ ಘೋಷ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಇ-ಆಡಳಿತ)ಯ ಕಾರ್ಯದರ್ಶಿಯಾಗಿ … Continued

ಡಿಕೆಶಿ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ : ಪ್ರಕರಣದ ವಿಚಾರಣೆ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸ್ಸು

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಕುರಿತಾದ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸ್ಸು ಮಾಡಿದೆ. ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಲ್ಲಿಸಿರುವ … Continued

ಸೇವೆ ಕಾಯಂ ಆಗುವ ಮುನ್ನ ಉದ್ಯೋಗಿ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡಿದ್ದರೆ ಆ ಅವಧಿಗೂ ಗ್ರಾಚ್ಯುಟಿ ಪಾವತಿಸಬೇಕು: ಹೈಕೋರ್ಟ್‌

ಬೆಂಗಳೂರು : ಉದ್ಯೋಗಿಯೊಬ್ಬರಿಗೆ ಒಂಬತ್ತು ವರ್ಷಗಳ ಕಾಲ ಗ್ರಾಚ್ಯುಟಿ ಪಾವತಿಸಲು ರಾಜ್ಯ ಸರ್ಕಾರ ವಿಳಂಬ ಮಾಡಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌ ಸರ್ಕಾರಿ ಸೇವೆ ಕಾಯಂಗೂ ಮುನ್ನ ಉದ್ಯೋಗಿ ದಿನಗೂಲಿ ಆಧಾರದ ಮೇಲೆ ಕಾರ್ಯನಿರ್ವಹಿಸಿದ್ದರೆ ಆ ಅವಧಿಗೂ ಗ್ರಾಚ್ಯುಟಿ ಪಾವತಿಸಬೇಕು ಎಂದು ಆದೇಶಿಸಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಡಿ ಗ್ರೂಪ್‌ ಉದ್ಯೋಗಿ ಬಸವೇಗೌಡ ಸಲ್ಲಿಸಿದ್ದ … Continued

ಕೋವಿಡ್ JN.1 ರೂಪಾಂತರಿ ಪ್ರಕರಣಗಳ ವರದಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೋವಿಡ್ ಸೋಂಕಿನ ಉಪತಳಿಯಾದ JN.1 ಸಂಬಂಧಿಸಿದಂತೆ ರಾಜ್ಯದಲ್ಲಿ ಈವರೆಗೆ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಾರ್ಗಸೂಚಿ ಹೊರಡಿಸಲಾಗಿದೆ. ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದೆ. ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗೂ ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತ ಕ್ರಮವಾಗಿ ಸೂಕ್ತ ಕೋವಿಡ್ … Continued

ಯುವನಿಧಿ ಯೋಜನೆ ನೋಂದಣಿ ಡಿ. 26ರಿಂದ ಆರಂಭ; ಜ.12ರಂದು ಖಾತೆಗೆ ಹಣ ಜಮೆ : ಈ ಯೋಜನೆಗೆ ಅರ್ಹರು ಯಾರು, ಅರ್ಜಿ ಸಲ್ಲಿಕೆ ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರದ ಐದನೆಯ ಮತ್ತು ಕೊನೆಯ ಗ್ಯಾರಂಟಿಗೆ ಈಗ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಡಿ. 26ರಿಂದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಸ್ವಾಮಿ ವಿವೇಕಾನಂದ ಜನ್ಮದಿನವಾದv ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … Continued

ರಾಜ್ಯ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು :ಕೇರಳದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ ಪತ್ತೆಯಾದ ನಂತರ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳಿಗೆ ಮುಂದಾಗಿದ್ದು, ಮಂಗಳವಾರ ಮಾರ್ಗಸೂಚಿ (Covid 19 Guidelines) ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ ವರದಿಯನ್ನು ಸಲ್ಲಿಸಲು ಸೂಚನೆ … Continued