ಕೇರಳದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ : ಕರ್ನಾಟಕದ ಆಸ್ಪತ್ರೆಗಳ ಪೂರ್ವ ಸಿದ್ಧತೆ ಪರಿಶೀಲನೆ

ಬೆಂಗಳೂರು: ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ವರದಿಗಳಿಂದ ಎಚ್ಚೆತ್ತಿಕೊಂಡಿರುವ ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಲು ನಿರ್ಧರಿಸಿದೆ. ಮಂಗಳವಾರ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಸರ್ಕಾರ ಕರೆದಿದೆ. ಶನಿವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮದ ಮೂಲಕ ಪರೀಕ್ಷಾ ಕಿಟ್‌ಗಳನ್ನು ಖರೀದಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಸಭೆಯ ನಂತರ ಮಾಧ್ಯಮದವರ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿದ್ದನ್ನು ಪ್ರಶ್ನಿಸಿದ ಯತ್ನಾಳ ಅರ್ಜಿ ವಿಚಾರಣೆ ಜನವರಿ 5ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ. ಅರ್ಜಿ … Continued

ರೈತರಿಗೆ ಸಿಹಿ ಸುದ್ದಿ…| ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಳಗಾವಿ : ರಾಜ್ಯದಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಿದ ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲದ ಅಸಲು ಹಣ ಪಾವತಿಸಿದರೆ ಸಂಪೂರ್ಣವಾಗಿ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ … Continued

ಕಾಂಗ್ರೆಸ್‌ 5ನೇ ಗ್ಯಾರಂಟಿ ʼಯುವನಿಧಿʼ ಯೋಜನೆಗೆ ಡಿಸೆಂಬರ್‌ 21ರಿಂದ ನೋಂದಣಿ ಪ್ರಕ್ರಿಯೆ ಆರಂಭ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿಗಳಲ್ಲಿ ಕೊನೆಯ ಗ್ಯಾರಂಟಿಯಾದ ಯುವನಿಧಿ ಯೋಜನೆಗೆ ಚಾಲನೆ ನೀಡಲು ಮುಹೂರ್ತ ಫಿಕ್ಸ್ ಆಗಿದೆ. ಪದವೀಧರರು ಮತ್ತು ಡಿಪ್ಲೋಮಾ ಹೋಲ್ಡರ್‌ಗಳಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗೆ ಇದೇ ಡಿಸೆಂಬರ್ 21ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಜನವರಿಯಲ್ಲಿ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ. ಈ ವಿಚಾರವನ್ನು ವೈದ್ಯಕೀಯ … Continued

ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಹಸ್ತಾಂತರ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ ಕುಟುಂಬಕ್ಕೆ 50 ಲಕ್ಷ ರೂ. ಚೆಕ್ ಅನ್ನು ಹಸ್ತಾಂತರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದಂತೆ ಜಿಲ್ಲಾಧಿಕಾರಿ ದಯಾನಂದ ಅವರು ಇಂದು ಮಂಗಳವಾರ ಪ್ರಾಂಜಲ್ ಅವರು ಕುಟುಂಬಕ್ಕೆ ಚೆಕ್ ನೀಡಿದ್ದಾರೆ. ಜಿಲ್ಲಾಧಿಕಾರಿ ದಯಾನಂದ ಅವರು ಪ್ರಾಂಜಲ್‌ ಅವರ ನಿವಾಸಕ್ಕೆ ತೆರಳಿ ಕುಟುಂಬದ ಸದಸ್ಯರಿಗೆ 25 ಲಕ್ಷ ರೂಪಾಯಿ ಮೊತ್ತದ … Continued

ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಭ್ರೂಣ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಕುರಿತು ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಗೃಹ ಸಚಿವರಿಗೆ ಈ ಸೂಚನೆ ನೀಡಿದ್ದಾರೆ. ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಪತ್ತೆಯಾದ ನಂತರ ಅದರ ಒಂದೊಂದೇ ಕರಾಳ ಮುಖಗಳು ಬಯಲಿಗೆ ಬರುತ್ತಿವೆ. ಬೆಂಗಳೂರಿನ … Continued

ನಿಮ್ಮಲ್ಲಿ ಹಣವಿಲ್ಲವೇ? ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು? : ಗುತ್ತಿಗೆದಾರರ ಬಾಕಿ ಪಾವತಿ ವಿಳಂಬಕ್ಕೆ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ಬೆಂಗಳೂರು : ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವೇ ಹೇಳಿರುವಂತೆ ಈಗಾಗಲೇ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಎಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು, ಬಾಕಿ ಪಾವತಿಯಲ್ಲೂ ಹಿರಿತನವೇ?’’ ಎಂದು ಹೈಕೋರ್ಟ್‌ ಖಾರವಾಗಿ ಪ್ರಶ್ನಿಸಿತು. “ನೀವು (ಸರ್ಕಾರ) ನಿಮ್ಮ ದಾಖಲೆಗಳನ್ನೇ ಒಮ್ಮೆ ನೋಡಿ, … Continued

ಡಿಕೆಶಿ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮೋದನೆ ವಾಪಸ್‌ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (D.K.Shivakumar) ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮೋದನೆಯನ್ನು ವಾಪಸ್ ಪಡೆದ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ ಅವರನ್ನು ತನಿಖೆಯಿಂದ ರಕ್ಷಿಸಲು ಸಿಬಿಐ ತನಿಖೆಗೆ … Continued

ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ರೆ ಪಿಐಎಲ್‌ ಸಲ್ಲಿಕೆ : ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

ಬೆಳಗಾವಿ : ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡುವ ಸಂಪ್ರದಾಯ ನಿಲ್ಲಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗುವುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆಯ … Continued

ತೆಲಂಗಾಣದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ : ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗದಿಂದ ನೋಟಿಸ್….

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಮುನ್ನ ತೆಲಂಗಾಣ ದಿನಪತ್ರಿಕೆಗಳಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಜಾಹೀರಾತು ಪ್ರಕಟಿಸುವುದನ್ನು ಚುನಾವಣಾ ಆಯೋಗ ನಿಷೇಧಿಸಿದೆ. ಬಿಜೆಪಿ ಮತ್ತು ಕೆ ಚಂದ್ರಶೇಖರ ರಾವ್ ಅವರ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ ಎಸ್‌)ಪಕ್ಷಗಳ ದೂರಿನ ನಂತರ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ. ಚುನಾವಣಾ ಆಯೋಗವು ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ … Continued