ಆಟೋರಿಕ್ಷಾ ಸೇವೆ: ಸರ್ಕಾರ ನಿಗದಿಪಡಿಸಿದ ದರದ ಜೊತೆಗೆ ಶೇ. 10 ದರ ವಿಧಿಸಲು ಓಲಾ, ಉಬರ್‌ಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಆಟೋರಿಕ್ಷಾ ಸೇವೆಗಳಿಗೆ 2021ರ ನವೆಂಬರ್‌ನಲ್ಲಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ದರದ ಜೊತೆಗೆ ಹೆಚ್ಚುವರಿಯಾಗಿ ಶೇ. 10ರಷ್ಟು ದರ ಮತ್ತು ಸರಕು ಹಾಗೂ ಸೇವಾ ತೆರಿಗೆ(ಜಿಎಸ್‌ಟಿ)ಯನ್ನು ವಿಧಿಸುವ ಮೂಲಕ ಆ್ಯಪ್‌ ಆಧರಿತ ಓಲಾ ಮತ್ತು ಉಬರ್‌ ಆಟೋರಿಕ್ಷಾ ಸೇವೆ ಮುಂದುವರಿಸಬಹುದು ಎಂದು ಹೈಕೋರ್ಟ್‌ ಶುಕ್ರವಾರ ಆದೇಶ ಮಾಡಿದೆ. ಓಲಾ ಮತ್ತು ಉಬರ್‌ ಇನ್ನು ಮುಂದೆ ತಮ್ಮ … Continued

ಬಾಬಾ ಬುಡನ್‌ಗಿರಿ-ದತ್ತಾತ್ರೇಯ ಪೀಠ: ಪ್ರತಿ ಆಕ್ಷೇಪಣೆಗೆ ರಾಜ್ಯ ಸರ್ಕಾರಕ್ಕೆ ಮೂರು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ಗಿರಿಯ ದತ್ತಾತ್ರೇಯ ಪೀಠದಲ್ಲಿ ಹಿಂದೂ ಧರ್ಮಗಳು ಹಾಗೂ ಇಸ್ಲಾಂ ಧರ್ಮಗಳ ಸಂಪ್ರದಾಯಗಳಂತೆ ಪೂಜಾ ವಿಧಿವಿಧಾನ ನೆರವೇರಿಸಲು ಅವಕಾಶ ಕಲ್ಪಿಸಲು ರಾಜ್ಯ ಸಚಿವ ಸಂಪುಟ ಕೈಗೊಂಡಿರುವ ನಿರ್ಣಯಕ್ಕೆ ಮೌಲ್ವಿ ಸೈಯದ್ ಗೌಸ್ ಮೊಹಿಯುದ್ದೀನ್ ಎತ್ತಿರುವ ಆಕ್ಷೇಪಣೆಗೆ ಪ್ರತಿ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಮೂರು ವಾರಗಳ ಕಾಲಾವಕಾಶ ನೀಡಿದೆ … Continued

ವಿದ್ಯುತ್ ದರ ಏರಿಕೆ: ಹಿಂಪಡೆಯಲು ರಾಜ್ಯ ಸರ್ಕಾರದ ಚಿಂತನೆ…?

ಬೆಂಗಳೂರು: ವಿದ್ಯುತ್‌ದರ ಏರಿಕೆಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾದ ನಂತರ ರಾಜ್ಯ ಸರ್ಕಾರ ದರ ಏರಿಕೆ ಹಿಂಪಡೆಯುವ ಕುರಿತು ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಇಂಧನ ಸಚಿವ ವಿ.ಸುನಿಲಕುಮಾರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸಿ ದರ ಏರಿಕೆ ಹಿಂಪಡೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ತಿಂಗಳು ಅಕ್ಟೋಬರ್‌ 1ರಿಂದ ಅನ್ವಯವಾಗುವಂತೆ ವಿದ್ಯುತ್‌ನ … Continued

ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠವೂ ಸೇರಿ ರಾಜ್ಯದಲ್ಲಿರುವ ಎಲ್ಲ ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದೆ. ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು … Continued

ಜಿಪಂ-ತಾಪಂ ಕ್ಷೇತ್ರಗಳ ಮರುವಿಂಗಡಣೆ ಮೀಸಲು ನಿಗದಿ: ಸರ್ಕಾರಕ್ಕೆ ಮತ್ತೆ 12 ವಾರಗಳ ಕಾಲಾವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಕ್ಷೇತ್ರಗಳ ಮರು ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಮತ್ತೆ 12 ವಾರ ಕಾಲಾವಕಾಶ ನೀಡಿದೆ. ರಾಜ್ಯದಲ್ಲಿ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್‌ ಪಡೆದು, ಕರ್ನಾಟಕ ಪಂಚಾಯತ್‌ … Continued

ಹಾಲಿನ ದರ  ಹೆಚ್ಚಿಸಲು ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಕೆಎಂಎಫ್‌

ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ.ಗಳಂತೆ ಹೆಚ್ಚಿಸಲು ಕೋರಿ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್‌) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ, ಖಾಸಗಿಯಾಗಿ ಹಾಲು ಮಾರಾಟ ಮಾಡುವ ದರಕ್ಕೆ ಹೋಲಿಸಿದರೆ ಕೆಎಂಎಫ್‌ ಹಾಲಿನ ದರ ಕಡಿಮೆಯಿದೆ. ಹೀಗಾಗಿ, ದರ ಹೆಚ್ಚಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು. ಖಾಸಗಿ … Continued

ರಾಜ್ಯ ಸರ್ಕಾರದಿಂದ 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಕಮೀಷನರ್ ಆಗಿದ್ದ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಾಗಗಳ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ಹುದ್ದೆಯಲ್ಲಿದ್ದ ಮೇಜರ್ ಮಣಿವಣ್ಣನ್ ಪಿ ಅವರನ್ನು ವರ್ಗಾವಣೆ ಮಾಡಿದೆ. ಬೆಸ್ಕಾಂ ಎಂಡಿಯಾಗಿದ್ದ … Continued

ಬಕ್ರೀದ್ ಹಬ್ಬದಂದು ಗೋಹತ್ಯೆ ಮಾಡುವಂತಿಲ್ಲ : ರಾಜ್ಯ ಸರ್ಕಾರದ ಸೂಚನೆ

ಬೆಂಗಳೂರು: ಜುಲೈ 9 ಹಾಗೂ ಜುಲೈ 10 ರಂದು ದೇಶಾದ್ಯಂತ ಬಕ್ರೀದ್ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬದಂದು ರಾಜ್ಯದಲ್ಲಿ ಗೋಹತ್ಯೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸೂಚಿಸಿದೆ. ಬಕ್ರೀದ್‌ ದಿನದಂದು ರಾಜ್ಯದಲ್ಲಿ ಗೋಹತ್ಯೆ ಮಾಡದಂತೆ ನೋಡಿಕೊಳ್ಳಲು ಸರ್ಕಾರವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಬ್ಬದ ಸಂದರ್ಭದಲ್ಲಿ ಹಸು, ಕರು, ಎತ್ತು, … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಮೇ 24ರ ವರೆಗೆ ಕಾಲಾವಕಾಶ ನೀಡಿದ ಕೆಎಟಿ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್‌ಎಟಿ) ಬುಧವಾರ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮೇ 24ರ ವರೆಗೆ ಕಾಲಾವಕಾಶ … Continued

ಗೋ ಹತ್ಯೆ ನಿಷೇಧ ಕಾಯಿದೆ: ಸೆಕ್ಷನ್ 5 ನಿಯಮ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು: ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣೆ ನಿಯಮಗಳನ್ನು (ಜಾನುವಾರು ಸಾಗಣೆ 2021ರ ನಿಯಮಗಳು) ರೂಪಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ- 2020ರ ಸೆಕ್ಷನ್ 5 ಮತ್ತು ಅದರ ಅಡಿ ರೂಪಿಸಿರುವ ನಿಯಮಗಳ ಜಾರಿಗೆ ಸೋಮವಾರ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದು, ಅದು ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ … Continued