ಕರ್ನಾಟಕದ 346 ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿರುವ ಮಾಹಿತಿ ಲಭ್ಯ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಈವರೆಗೆ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರ ಮನೋಜ್‌ ರಂಜನ್‌ ತಿಳಿಸಿದ್ದಾರೆ. ಉಕ್ರೇನ್‌ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, … Continued

ಎರಡು ಡೋಸ್ ಲಸಿಕೆ ಪಡೆದವರಿಗೆ ಗ್ರೀನ್ ಪಾಸ್ ಕೊಡಲು ಸರ್ಕಾರದ ಚಿಂತನೆ: ಸಚಿವ ಡಾ.ಸುಧಾಕರ

ಬೆಂಗಳೂರು: ಕೊರೊನಾದ ಸಂಭವನೀಯ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ತಯಾರಿ ಮಾಡಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಿಯಂತ್ರಣ ಮಾಡಲು ಅಧಿಕಾರಿಗಳಿಗೆ ಹಲವು ಜವಾಬ್ದಾರಿ ಕೊಟ್ಟಿದ್ದೇವೆ. ಎಲ್ಲಾ ಅಧಿಕಾರಿಗಳ ಸಮನ್ವಯದ ಕುರಿತು ಸಭೆ … Continued

ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, … Continued

ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ಹಬ್ಬದ ಮುಂಗಡ ಹಣ 25 ಸಾವಿರ ರೂಪಾಯಿಗೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಂಜೂರು ಮಾಡುತ್ತಿರುವ ಹಬ್ಬದ ಮುಂಗಡ ಮೊತ್ತವನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗ ಹಬ್ಬದ ಮುಂಗಡ ಮೊತ್ತವನ್ನು 10 ಸಾವಿರ ರೂಪಾಯಿಗಳಿಂದ 25 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಿ ಆದೇಶ ಮಾಡಲಾಗಿದೆ. ರಾಜ್ಯ ಸಿವಿಲ್ ಸೇವಾ ವೃಂದದಲ್ಲಿ ಕಾಯಂ ಆಗಿ ಸೇರ್ಪಡೆಯಾಗಿರುವ ಅಖಿಲ ಭಾರತ ಸೇವೆಯ ಅಧಿಕಾರಿಗಳು ಸೇರಿದಂತೆ ಒಬ್ಬ … Continued

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕರ್ನಾಟಕ ಸರ್ಕಾರದ ವಿರೋಧ: ಕೇಂದ್ರಕ್ಕೆ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಅವರು ಶನಿವಾರ ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ … Continued

ಪ್ರೊ. ಭಗವಾನ್‌ ವಿರುದ್ಧ ಕ್ರಮಕೈಗೊಳ್ಳಲು ಅನುಮತಿ ವಿಳಂಬ: ಸರ್ಕಾರದ ವಿರುದ್ಧ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಸಾಹಿತಿ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ. ಸಾಗರ ತಾಲ್ಲೂಕಿನ ಇಕ್ಕೇರಿಯ ಮಹಾಬಲೇಶ್ವರ ಮಾಪು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ತನ್ನ ನೀತಿ ಮರು ಪರಿಶೀಲಿಸಬೇಕು ಎಂದ ಹೈಕೋರ್ಟ್‌

ಬೆಂಗಳೂರು: ಪದವಿ ಶಿಕ್ಷಣದ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡವನ್ನು ಕಡ್ಡಾಯಗೊಳಿಸಲಾಗದು. ರಾಜ್ಯ ಸರ್ಕಾರವು ಕನ್ನಡ ಕಡ್ಡಾಯ ಮಾಡಿರುವ ತನ್ನ ನೀತಿ ಮರುಪರಿಶೀಲಿಸಬೇಕು. ನಿಮ್ಮ (ಸರ್ಕಾರ) ನೀತಿಯನ್ನು ಮರು ಪರಿಶೀಲಿಸದಿದ್ದರೆ ನಾವು ತಡೆಯಾಜ್ಞೆ ನೀಡಬೇಕಾಗುತ್ತದೆ” ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. ರಾಜ್ಯ ಸರ್ಕಾರವು ಪದವಿ ಹಂತದಲ್ಲಿ … Continued

ಸಮವಸ್ತ್ರದಲ್ಲಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಬೀದರಿನ ಶಾಹೀನ್‌ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಸಂಬಂಧಿಸಿದಂತೆ ಕಳೆದ ವರ್ಷ … Continued

ಸಿದ್ದಗಂಗಾ ಮಠ – ಮೀರಾಬಾಯಿ ಕೊಪ್ಪಿಕರಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ” 2020 ಮತ್ತು 2021 ನೇ ಸಾಲಿಗೆ ಎರಡು ವರ್ಷಗಳ ಪ್ರಶಸ್ತಿ ಪ್ರಕಟಿಸಿದೆ. ಕೋವಿಡ್- 19ರ ಹಿನ್ನಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ, ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸಕಾರವು ಈ … Continued