ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆಸಿದರಾಜ್ಯದ ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಡಿಎಫ್‌ಒಗಳ ಜೊತೆಗೆ … Continued

ಮುಗಿಯದ ಸಿಎಂ ಡಿ.ಕೆ. ಶಿವಕುಮಾರ ತಲೆನೋವು : ಹೈಕಮಾಂಡ್ ಕದ ತಟ್ಟಿದ ಸಚಿವರು, ಆಕಾಂಕ್ಷಿಗಳು !

ಬೆಂಗಳೂರು: ಕರ್ನಾಟಕದಲ್ಲಿ ನೂತನವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸಚಿವ ಸಂಪುಟದ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಶಮನಗೊಳಿಸುವ ದೊಡ್ಡ ಸವಾಲು ಎದುರಾಗಿದೆ. ಕಳೆದ ವಾರವಷ್ಟೇ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಪ್ರಹಸನವನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಶಿವಕುಮಾರ ಅವರಿಗೆ, ಇದೀಗ ಮತ್ತಷ್ಟು ಆಂತರಿಕ ಅಸಮಾಧಾನದ ಬಿಸಿ ತಟ್ಟುವ ಮುನ್ಸೂಚನೆಗಳು … Continued

ರಾಜ್ಯ ಸರ್ಕಾರದಿಂದ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, … Continued

ಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !

ಬೆಂಗಳೂರು: ಬೆಂಗಳೂರು: ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತಾದ ಅಸಮಾಧಾನ ತೀವ್ರಗೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಪ್ರಮುಖ ಖಾತೆ ಸಿಗದ ಕಾರಣಕ್ಕೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಘಾತ ಮೂಡಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ನಾಯಕ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಕೂಡ ತಮಗೆ ನೀಡಿರುವ ಇಲಾಖೆಯ … Continued

ಶಿವಕುಮಾರ ಸರ್ಕಾರಕ್ಕೆ ಆರಂಭದಲ್ಲೇ ಶಾಕ್ : ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಬೆನ್ನಲ್ಲೇ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಹಂಚಿಕೆಯಾಗಿರುವ ಖಾತೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿದ್ದಾರೆ. ಖಾತೆ ಹಂಚಿಕೆಯಾದ ಮರುದಿನ ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಮಲಿಂಗಾರೆಡ್ಡಿ, “ನಾನು ಯಾರ ಮೇಲೂ … Continued

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ : ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರಾ ಸಿದ್ದರಾಮಯ್ಯ ?

ಬೆಂಗಳೂರು: ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನಡುವೆ ನಡೆದ ಸುದೀರ್ಘ ಸಭೆಗಳ ನಂತರ ಕರ್ನಾಟಕದಲ್ಲಿ ಸಂಭಾವ್ಯ ನಾಯಕತ್ವ ಬದಲಾವಣೆಯ ಬಗ್ಗೆ ಊಹಾಪೋಹಗಳು ಮತ್ತೊಮ್ಮೆ ತೀವ್ರಗೊಂಡಿದೆ. ಕಾಂಗ್ರೆಸ್ ಪಕ್ಷ ಈ ವರದಿಗಳನ್ನು “ಕೇವಲ ವದಂತಿಗಳು” ಎಂದು ಹೇಳಿದೆ. ಹಾಗೂ ನಾಯಕತ್ವದ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು … Continued

ಗೃಹಲಕ್ಷ್ಮಿ ಯೋಜನೆ ಹಣ ಬಾಕಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ … Continued

2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರವು ಫೆಬ್ರವರಿ 2022 ರಲ್ಲಿ ಶಾಲಾ ಸಮವಸ್ತ್ರಗಳ ಕುರಿತು ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ ಮತ್ತು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರಗಳ ಜೊತೆಗೆ ಸಾಂಪ್ರದಾಯಿಕ ಮತ್ತು ಧರ್ಮ ಆಧಾರಿತ ಚಿಹ್ನೆಗಳನ್ನು ಸೀಮಿತ ಶ್ರೇಣಿಯಲ್ಲಿ ಧರಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರದ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ತುಟ್ಟಿಭತ್ಯೆ (DA) ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಜಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (DA) ಹೆಚ್ಚಳ ಮಾಡಿದೆ. ಜ.1, 2026ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ. … Continued

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು  ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, … Continued