ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಅಧಿಕಾರಿಗೂ ಬಡ್ತಿ…! ರಾಜ್ಯ ಸರ್ಕಾರದ ಎಡವಟ್ಟು ಬಹಿರಂಗಗೊಳಿಸಿದ ಆರ್‌. ಅಶೋಕ

ಬೆಂಗಳೂರು: ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್‌ ಅಧಿಕಾರಿಗೂ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ವಿಪಕ್ಷದ ನಾಯಕ ಆರ್‌ ಅಶೋಕ ದಾಖಲೆ ಬಹಿರಂಗ ಪಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ … Continued

ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಅಸ್ತು

 ಬೆಂಗಳೂರು : ರಾಜ್ಯದ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ಮಹತ್ವದ ತೀರ್ಮಾನ ಕೈಗೊಂಡಿದೆ. ಈ ವಯೋಮಿತಿ … Continued

ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ

ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರದ … Continued

ಬಳ್ಳಾರಿ ಬ್ಯಾನರ್​​ ಗಲಾಟೆ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ಹಾಗೂ ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದೆ. ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಯಾದ ಬೆನ್ನಲ್ಲೇ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣವನ್ನ ಸಿಐಡಿಗೆ ವರ್ಗಾಯಿಸಲಾಗಿದೆ. ಕೆಲವೇ ದಿನಗಳಲ್ಲಿ ಪ್ರಕರಣದ … Continued

ಸರ್ಕಾರಿ ನೌಕರರು ಸಭ್ಯ ಉಡುಪು ಧರಿಸಬೇಕು ; ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ನೌಕರರು (Govt Employees) ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ ಮಾಡಿದೆ. ಸಭ್ಯ ಉಡುಪು ಧರಿಸದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಸರ್ಕಾರ ಖಡನ್ ಸೂಚನೆ ಮಾಡಿದೆ. ಕಚೇರಿ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗುವವರನ್ನು ಮೇಲಾಧಿಕಾರಿಗಳು ನಿಯಂತ್ರಿಸಲು ಸೂಚಿಸಲಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಕಡ್ಡಾಯವಾಗಿ ಸಕಾರಣ ನೀಡಿ ಹೊರಗೆ ಹೋಗುವಂತೆ ತಿಳಿಸಿದೆ. ಸಿಬ್ಬಂದಿ … Continued

ಪೊಲೀಸ್ ಇಲಾಖೆಯಲ್ಲಿ 3600 ಖಾಲಿ ಹುದ್ದೆಗಳ ಭರ್ತಿ : ಡಾ. ಪರಮೇಶ್ವರ

ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 3,600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದ್ದು, ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಜಗದೇವ ಗುತ್ತೇದಾರ ಪ್ರಶ್ನೆಗೆ ಉತ್ತರ ನೀಡಿದ ಅವರು, ಒಳಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ … Continued

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿಷೇಧ ಮಸೂದೆ ಮಂಡನೆ; ನಿಯಮ ಉಲ್ಲಂಘಿಸಿದರೆ 3 ವರ್ಷ ಜೈಲು, 1 ಲಕ್ಷ ದಂಡ

ಬೆಳಗಾವಿ: ಸಭೆ- ಪಂಚಾಯ್ತಿ ಮೂಲಕ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ನಿಷೇಧಿಸುವಮಸೂದೆಯನ್ನು ರಾಜ್ಯ ಸರ್ಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ. ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಬಹಿಷ್ಕಾರ ಹಾಕುವವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲು ಈ ಮಸೂದೆ ಅವಕಾಶ ನೀಡುತ್ತದೆ. ಸಮಾಜ ಕಲ್ಯಾಣ ಸಚಿವ … Continued

ರಾಜ್ಯ ಸರ್ಕಾರದಿಂದ ಪರಿಷ್ಕೃತ ದರ ನಿಗದಿ ; ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನೀಡಲು ನಿರ್ಧಾರ

ಬೆಂಗಳೂರು : ಕಬ್ಬು ಬೆಳೆಗಾರರ ಪ್ರತಿಭಟವೆ ತೀವ್ರಗೊಂಡ ಬೆನ್ನಲ್ಲೇ ಪ್ರತಿ ಟನ್‌ (1 ಸಾವಿರ ಕೆಜಿ) ಕಬ್ಬಿನ ಪರಿಷ್ಕೃತ ಬೆಲೆಯನ್ನು 3,300 ರೂ.ಗಳಿಗೆ ನಿಗದಿ ಮಾಡಿದೆ. ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ ಬಳಿಕ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಸರ್ಕಾರದ ಈ ನಿರ್ಧಾರಕ್ಕೆ ಕಬ್ಬು ಬೆಳೆಗಾರರು ಒಪ್ಪಿಗೆ ನೀಡಿದ್ದಾರೆ. … Continued

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ನಿಷೇಧ, ‘ನಂದಿನಿ’ ತಿನಿಸು ಕಡ್ಡಾಯ : ಸಿಎಂ ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ … Continued

ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued